Homeಚಳವಳಿಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ.

- Advertisement -
- Advertisement -

ಗೌತಮ್ ನೌಲಾಖ ಅವರು 1980ರ ದಶಕದಲ್ಲಿ ’ಇಂಡಿಪೆಂಡೆಂಟ್ ಇನಿಷಿಯೇಟಿವ್ ಆನ್ ಕಾಶ್ಮೀರ್’ ಎಂಬ ಒಂದು ಅಭಿಯಾನವನ್ನು ಆರಂಭಿಸಿದ್ದರು. ಆಗಲೇ ನಾವು ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರದ ವಿಷಯದಲ್ಲಿ ಸ್ವಲ್ಪ ಮಟ್ಟಿನ ಗಂಭೀರ ಚರ್ಚೆಯನ್ನು ಮಾಡಿದ್ದು. ನಮ್ಮಲ್ಲಿ ಅನೇಕರು ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯನ್ನು ಹೇಗೆ ರೂಪಿಸುವುದು ಎಂಬ ಬಗ್ಗೆಯೇ ತುಂಬಾ ಗೊಂದಲದಲ್ಲಿದ್ದೆವು ಮತ್ತು ಬಹುತೇಕರಿಗೆ ಐತಿಹಾಸಿಕ ವಾಸ್ತವಾಂಶಗಳ ಬಗ್ಗೆ ತಿಳಿದಿರಲಿಲ್ಲ. ಆಗ ’ಇಕನಾಮಿಕ್ ಎಂಡ್ ಪೊಲಿಟಿಕಲ್ ವೀಕ್ಲಿ’ಯ ಜೊತೆಗಿದ್ದ ಗೌತಮ್, ಚರ್ಚೆಯ ಕೇಂದ್ರವಾಗಿದ್ದ ಸ್ವಾಯತ್ತತೆಯ ರಾಜಕೀಯ ಪ್ರಶ್ನೆಯನ್ನು ಸ್ಪಷ್ಟವಾಗಿ ವಿವರಿಸಬಲ್ಲ ಕೆಲವರಲ್ಲಿ ಒಬ್ಬರಾಗಿದ್ದರು. ಗೌತಮ್ ಈ ಸಮಸ್ಯೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡ ಕೆಲವೇ ಕೆಲವರಲ್ಲಿ ಒಬ್ಬರಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನೆಲಮಟ್ಟದ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ತನಿಖೆ ಮಾಡಿ, ಭಾರತದಲ್ಲಿ ನಾಗರಿಕ ಹಕ್ಕುಗಳ ಚಳವಳಿಯ ಚಿಂತನೆಯನ್ನು ರೂಪಿಸಿದ ಹಲವಾರು ಸತ್ಯಶೋಧನಾ ವರದಿಗಳನ್ನು ರೂಪಿಸಿ ನೀಡಿದ್ದರು. ಅದು ಅಲ್ಲಿನ ನಾಡಿ ಮಿಡಿತವನ್ನು ಅರ್ಥಮಾಡಿಕೊಳ್ಳಲು ತವಕಿಸುತ್ತಿದ್ದ ಹಾಗೂ ಜಮ್ಮು ಮತ್ತು ಕಾಶ್ಮೀರದ ಜನತೆಯ ಜೊತೆಗೆ ಐಕಮತ್ಯದ ಶಪಥ ಮಾಡಲು ಉತ್ಸುಕರಾಗಿದ್ದ ಎಲ್ಲರಿಗೂ ನೆರವಾಯಿತು.

ಹಿಂಸೆ ಮತ್ತು ಪ್ರತಿ ಹಿಂಸೆ ಹೆಚ್ಚುತ್ತಿದ್ದಂತೆ ಮತ್ತು ಭದ್ರತಾ ಪಡೆಗಳ ದಬ್ಬಾಳಿಕೆ ಮತ್ತು ಉಗ್ರಗಾಮಿಗಳ ದಾಳಿಗಳು ಬಿಡದೆ ಮುಂದುವರಿದಂತೆ, ಗೌತಮ್ ಸೇರಿದಂತೆ, ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದ ನಾಗರಿಕ ಹಕ್ಕುಗಳ ಕಾರ್ಯಕರ್ತರು ವಿವೇಕದ ಧ್ವನಿಗಳಾಗಿದ್ದುದು ಮಾತ್ರವಲ್ಲ; ಮಾನವ ಹಕ್ಕುಗಳಿಗೆ ಗೌರವ ನೀಡುವುದು ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಅಗತ್ಯವನ್ನು ಒತ್ತಿಹೇಳುವ ಧ್ವನಿಗಳಾಗಿದ್ದರು. ಗೌತಮ್ ಮತ್ತು ಈ ಪ್ರಜಾಸತ್ತಾತ್ಮಕ ಹಕ್ಕುಗಳ ಪರವಾದ ಶಕ್ತಿಗಳು ಜಮ್ಮು ಮತ್ತು ಕಾಶ್ಮೀರದ ಹಾಗೂ ಉಳಿದ ಭಾರತದ ಜನರ ನಡುವಿನ ಅತ್ಯಂತ ಗಟ್ಟಿಯಾದ ಕೊಂಡಿಯಾಗಿದ್ದರು. ಇಂದು ನಾವು ನೋಡುವಂತೆ, ಈ ಐಕಮತ್ಯವು ವರ್ಷಗಳು ಕಳೆದಂತೆ ಬೆಳೆಯುತ್ತಲೇ ಬಂದಿದೆ.


ಇದನ್ನೂ ಓದಿ: ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್


ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾದ ದಮನದ ನಡುವೆ, ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಯುತ್ತಿರುವಾಗ, ಗೌತಮ್ ನೌಲಾಖ ಅವರು ಭೀಮಾ ಕೋರೆಗಾಂವ್-12’ರಲ್ಲಿ (ಕೆಲ ದಿನಗಳ ಹಿಂದೆ ಬಂಧಿತರಾದ ದಿಲ್ಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹನಿ ಬಾಬು ಹನ್ನೆರಡನೆಯವರಾದರು) ಒಬ್ಬರಾಗಿ ಪುಣೆಯ ಜೈಲಿನಲ್ಲಿದ್ದಾರೆ. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಪ್ರಸಿದ್ಧ ಕವಿಗಳು, ವಕೀಲರು, ಶಿಕ್ಷಕರು ಮತ್ತು ಸಾಮಾಜಿಕ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭಾರತದ ಪ್ರಭುತ್ವ ಮಾನವ ಹಕ್ಕು ಕಾರ್ಯಕರ್ತರಿಗೆ ಎಷ್ಟು ಬೆದರುತ್ತಿದೆ ಎಂದು ತೋರಿಸುವ ಈ ಸುಳ್ಳು ಪ್ರಕರಣವು ಭಾರತದಾದ್ಯಂತ ಮತ್ತು ವಿದೇಶಗಳಲ್ಲಿ- ಅತಾರ್ಕಿಕ ನಿರಂಕುಶ ಬಂಧನಗಳು ಮತ್ತು ಕೋವಿಡ್ ಸೋಂಕಿನ ಹೊರತಾಗಿಯೂ ಜಾಮೀನು ನಿರಾಕರಣೆಯ ವಿರುದ್ಧ- ಬಲವಾದ ಪ್ರತಿಭಟನೆಗಳನ್ನು ಪ್ರೇರೇಪಿಸಿದೆ.

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ. ನಾನು ಪಿಯುಡಿಆರ್ (ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್, ದಿಲ್ಲಿ) ಮತ್ತು ಪಿಐಪಿಎಫ್‌ಪಿಡಿ (ಪಾಕಿಸ್ತಾನ್- ಇಂಡಿಯಾ ಪೀಪಲ್ಸ್ ಫೋರಂ ಫಾರ್ ಪೀಸ್ ಎಂಡ್ ಡೆಮೋಕ್ರಸಿ) ಸಂಘಟನೆಗಳಲ್ಲಿ ಗೌತಮ್ ಜೊತೆ ಮೂರು ದಶಕಗಳಿಗೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಹೊಂದಿದ್ದೆ. ತಮ್ಮ ದೃಢ ಸಂಕಲ್ಪ, ಉದ್ದೇಶದ ಸ್ಪಷ್ಟತೆ ಮತ್ತು ಧೈರ್ಯದಿಂದ ಒಂದು ತಲೆಮಾರಿನ ಪ್ರಜಾಸತ್ತಾತ್ಮಕ ಮನೋಭಾವದ ಯುವಜನರನ್ನು ಪ್ರೇರೇಪಿಸುತ್ತಲೇ ಇರುವ ಒಂದು ಪೀಳಿಗೆಯ ಸಾಮಾಜಿಕ ಕಾರ್ಯಕರ್ತ ಬುದ್ಧಿಜೀವಿಗಳನ್ನು ಗೌತಮ್ ಪ್ರತಿನಿಧಿಸುತ್ತಾರೆ.

ಸವಾಲುಗಳ ಹೊರತಾಗಿಯೂ ಪ್ರಜಾಪ್ರಭುತ್ವಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಮತ್ತು ಗೌತಮ್ ಹಾಗೂ ಭೀಮಾ ಕೋರೆಗಾಂವ್ ಪ್ರಕರಣದ ಎಲ್ಲಾ 12 ಮಂದಿ ಹೊರಬಂದು ನಮ್ಮನ್ನು ಮುನ್ನಡೆಸಲು ಖಂಡಿತವಾಗಿಯೂ ನಮ್ಮ ನಡುವೆ ಇರುತ್ತಾರೆ.

ಐಕಮತ್ಯದೊಂದಿಗೆ,

  • ಪ್ರೊ. ಮನೋರಂಜನ್ ಮೊಹಂತಿ, ಪ್ರಾಧ್ಯಾಪಕ, ಸಂಶೋಧಕ ಮತ್ತು ಲೇಖಕ. ರಾಜಕೀಯ ಶಾಸ್ತ್ರಜ್ಞರಾಗಿ, ಮಾನವ ಹಕ್ಕುಗಳ ಕಾರ್ಯಕರ್ತರಾಗಿ ಹಲವು ಚಳವಳಿಗಳ ಸಂಗಾತಿ ಮೊಹಂತಿಯವರು. ದೆಹಲಿ ವಿಶ್ವವಿದ್ಯಾಲಯ ಸುಧೀರ್ಘ ಸೇವೆ ಸಲ್ಲಿಸಿರುವುದಲ್ಲದೆ, ವಿಶ್ವದ ಹಲವು ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚೀನಾ ದೇಶದ ಬಗ್ಗೆ ವಿದ್ವತ್ತು ಹೊಂದಿರುವ ಮೊಹಂತಿ ಅವರು ಚೈನಾ ಅಟ್ ಎ ಟರ್ನಿಂಗ್ ಪಾಯಿಂಟ್, ಕಾಂಟೆಂಪೊರರಿ ಇಂಡಿಯನ್ ಪೊಲಿಟಿಕಲ್ ಥಿಯರಿ ಸೇರಿದಂತೆ ಹಲವು ಪುಸ್ತಕಗಳ ಲೇಖಕರು.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...