Homeಚಳವಳಿಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ.

- Advertisement -
- Advertisement -

ಗೌತಮ್ ನೌಲಾಖ ಅವರು 1980ರ ದಶಕದಲ್ಲಿ ’ಇಂಡಿಪೆಂಡೆಂಟ್ ಇನಿಷಿಯೇಟಿವ್ ಆನ್ ಕಾಶ್ಮೀರ್’ ಎಂಬ ಒಂದು ಅಭಿಯಾನವನ್ನು ಆರಂಭಿಸಿದ್ದರು. ಆಗಲೇ ನಾವು ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರದ ವಿಷಯದಲ್ಲಿ ಸ್ವಲ್ಪ ಮಟ್ಟಿನ ಗಂಭೀರ ಚರ್ಚೆಯನ್ನು ಮಾಡಿದ್ದು. ನಮ್ಮಲ್ಲಿ ಅನೇಕರು ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯನ್ನು ಹೇಗೆ ರೂಪಿಸುವುದು ಎಂಬ ಬಗ್ಗೆಯೇ ತುಂಬಾ ಗೊಂದಲದಲ್ಲಿದ್ದೆವು ಮತ್ತು ಬಹುತೇಕರಿಗೆ ಐತಿಹಾಸಿಕ ವಾಸ್ತವಾಂಶಗಳ ಬಗ್ಗೆ ತಿಳಿದಿರಲಿಲ್ಲ. ಆಗ ’ಇಕನಾಮಿಕ್ ಎಂಡ್ ಪೊಲಿಟಿಕಲ್ ವೀಕ್ಲಿ’ಯ ಜೊತೆಗಿದ್ದ ಗೌತಮ್, ಚರ್ಚೆಯ ಕೇಂದ್ರವಾಗಿದ್ದ ಸ್ವಾಯತ್ತತೆಯ ರಾಜಕೀಯ ಪ್ರಶ್ನೆಯನ್ನು ಸ್ಪಷ್ಟವಾಗಿ ವಿವರಿಸಬಲ್ಲ ಕೆಲವರಲ್ಲಿ ಒಬ್ಬರಾಗಿದ್ದರು. ಗೌತಮ್ ಈ ಸಮಸ್ಯೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡ ಕೆಲವೇ ಕೆಲವರಲ್ಲಿ ಒಬ್ಬರಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನೆಲಮಟ್ಟದ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ತನಿಖೆ ಮಾಡಿ, ಭಾರತದಲ್ಲಿ ನಾಗರಿಕ ಹಕ್ಕುಗಳ ಚಳವಳಿಯ ಚಿಂತನೆಯನ್ನು ರೂಪಿಸಿದ ಹಲವಾರು ಸತ್ಯಶೋಧನಾ ವರದಿಗಳನ್ನು ರೂಪಿಸಿ ನೀಡಿದ್ದರು. ಅದು ಅಲ್ಲಿನ ನಾಡಿ ಮಿಡಿತವನ್ನು ಅರ್ಥಮಾಡಿಕೊಳ್ಳಲು ತವಕಿಸುತ್ತಿದ್ದ ಹಾಗೂ ಜಮ್ಮು ಮತ್ತು ಕಾಶ್ಮೀರದ ಜನತೆಯ ಜೊತೆಗೆ ಐಕಮತ್ಯದ ಶಪಥ ಮಾಡಲು ಉತ್ಸುಕರಾಗಿದ್ದ ಎಲ್ಲರಿಗೂ ನೆರವಾಯಿತು.

ಹಿಂಸೆ ಮತ್ತು ಪ್ರತಿ ಹಿಂಸೆ ಹೆಚ್ಚುತ್ತಿದ್ದಂತೆ ಮತ್ತು ಭದ್ರತಾ ಪಡೆಗಳ ದಬ್ಬಾಳಿಕೆ ಮತ್ತು ಉಗ್ರಗಾಮಿಗಳ ದಾಳಿಗಳು ಬಿಡದೆ ಮುಂದುವರಿದಂತೆ, ಗೌತಮ್ ಸೇರಿದಂತೆ, ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದ ನಾಗರಿಕ ಹಕ್ಕುಗಳ ಕಾರ್ಯಕರ್ತರು ವಿವೇಕದ ಧ್ವನಿಗಳಾಗಿದ್ದುದು ಮಾತ್ರವಲ್ಲ; ಮಾನವ ಹಕ್ಕುಗಳಿಗೆ ಗೌರವ ನೀಡುವುದು ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಅಗತ್ಯವನ್ನು ಒತ್ತಿಹೇಳುವ ಧ್ವನಿಗಳಾಗಿದ್ದರು. ಗೌತಮ್ ಮತ್ತು ಈ ಪ್ರಜಾಸತ್ತಾತ್ಮಕ ಹಕ್ಕುಗಳ ಪರವಾದ ಶಕ್ತಿಗಳು ಜಮ್ಮು ಮತ್ತು ಕಾಶ್ಮೀರದ ಹಾಗೂ ಉಳಿದ ಭಾರತದ ಜನರ ನಡುವಿನ ಅತ್ಯಂತ ಗಟ್ಟಿಯಾದ ಕೊಂಡಿಯಾಗಿದ್ದರು. ಇಂದು ನಾವು ನೋಡುವಂತೆ, ಈ ಐಕಮತ್ಯವು ವರ್ಷಗಳು ಕಳೆದಂತೆ ಬೆಳೆಯುತ್ತಲೇ ಬಂದಿದೆ.


ಇದನ್ನೂ ಓದಿ: ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್


ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾದ ದಮನದ ನಡುವೆ, ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಯುತ್ತಿರುವಾಗ, ಗೌತಮ್ ನೌಲಾಖ ಅವರು ಭೀಮಾ ಕೋರೆಗಾಂವ್-12’ರಲ್ಲಿ (ಕೆಲ ದಿನಗಳ ಹಿಂದೆ ಬಂಧಿತರಾದ ದಿಲ್ಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹನಿ ಬಾಬು ಹನ್ನೆರಡನೆಯವರಾದರು) ಒಬ್ಬರಾಗಿ ಪುಣೆಯ ಜೈಲಿನಲ್ಲಿದ್ದಾರೆ. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಪ್ರಸಿದ್ಧ ಕವಿಗಳು, ವಕೀಲರು, ಶಿಕ್ಷಕರು ಮತ್ತು ಸಾಮಾಜಿಕ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭಾರತದ ಪ್ರಭುತ್ವ ಮಾನವ ಹಕ್ಕು ಕಾರ್ಯಕರ್ತರಿಗೆ ಎಷ್ಟು ಬೆದರುತ್ತಿದೆ ಎಂದು ತೋರಿಸುವ ಈ ಸುಳ್ಳು ಪ್ರಕರಣವು ಭಾರತದಾದ್ಯಂತ ಮತ್ತು ವಿದೇಶಗಳಲ್ಲಿ- ಅತಾರ್ಕಿಕ ನಿರಂಕುಶ ಬಂಧನಗಳು ಮತ್ತು ಕೋವಿಡ್ ಸೋಂಕಿನ ಹೊರತಾಗಿಯೂ ಜಾಮೀನು ನಿರಾಕರಣೆಯ ವಿರುದ್ಧ- ಬಲವಾದ ಪ್ರತಿಭಟನೆಗಳನ್ನು ಪ್ರೇರೇಪಿಸಿದೆ.

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ. ನಾನು ಪಿಯುಡಿಆರ್ (ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್, ದಿಲ್ಲಿ) ಮತ್ತು ಪಿಐಪಿಎಫ್‌ಪಿಡಿ (ಪಾಕಿಸ್ತಾನ್- ಇಂಡಿಯಾ ಪೀಪಲ್ಸ್ ಫೋರಂ ಫಾರ್ ಪೀಸ್ ಎಂಡ್ ಡೆಮೋಕ್ರಸಿ) ಸಂಘಟನೆಗಳಲ್ಲಿ ಗೌತಮ್ ಜೊತೆ ಮೂರು ದಶಕಗಳಿಗೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಹೊಂದಿದ್ದೆ. ತಮ್ಮ ದೃಢ ಸಂಕಲ್ಪ, ಉದ್ದೇಶದ ಸ್ಪಷ್ಟತೆ ಮತ್ತು ಧೈರ್ಯದಿಂದ ಒಂದು ತಲೆಮಾರಿನ ಪ್ರಜಾಸತ್ತಾತ್ಮಕ ಮನೋಭಾವದ ಯುವಜನರನ್ನು ಪ್ರೇರೇಪಿಸುತ್ತಲೇ ಇರುವ ಒಂದು ಪೀಳಿಗೆಯ ಸಾಮಾಜಿಕ ಕಾರ್ಯಕರ್ತ ಬುದ್ಧಿಜೀವಿಗಳನ್ನು ಗೌತಮ್ ಪ್ರತಿನಿಧಿಸುತ್ತಾರೆ.

ಸವಾಲುಗಳ ಹೊರತಾಗಿಯೂ ಪ್ರಜಾಪ್ರಭುತ್ವಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಮತ್ತು ಗೌತಮ್ ಹಾಗೂ ಭೀಮಾ ಕೋರೆಗಾಂವ್ ಪ್ರಕರಣದ ಎಲ್ಲಾ 12 ಮಂದಿ ಹೊರಬಂದು ನಮ್ಮನ್ನು ಮುನ್ನಡೆಸಲು ಖಂಡಿತವಾಗಿಯೂ ನಮ್ಮ ನಡುವೆ ಇರುತ್ತಾರೆ.

ಐಕಮತ್ಯದೊಂದಿಗೆ,

  • ಪ್ರೊ. ಮನೋರಂಜನ್ ಮೊಹಂತಿ, ಪ್ರಾಧ್ಯಾಪಕ, ಸಂಶೋಧಕ ಮತ್ತು ಲೇಖಕ. ರಾಜಕೀಯ ಶಾಸ್ತ್ರಜ್ಞರಾಗಿ, ಮಾನವ ಹಕ್ಕುಗಳ ಕಾರ್ಯಕರ್ತರಾಗಿ ಹಲವು ಚಳವಳಿಗಳ ಸಂಗಾತಿ ಮೊಹಂತಿಯವರು. ದೆಹಲಿ ವಿಶ್ವವಿದ್ಯಾಲಯ ಸುಧೀರ್ಘ ಸೇವೆ ಸಲ್ಲಿಸಿರುವುದಲ್ಲದೆ, ವಿಶ್ವದ ಹಲವು ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚೀನಾ ದೇಶದ ಬಗ್ಗೆ ವಿದ್ವತ್ತು ಹೊಂದಿರುವ ಮೊಹಂತಿ ಅವರು ಚೈನಾ ಅಟ್ ಎ ಟರ್ನಿಂಗ್ ಪಾಯಿಂಟ್, ಕಾಂಟೆಂಪೊರರಿ ಇಂಡಿಯನ್ ಪೊಲಿಟಿಕಲ್ ಥಿಯರಿ ಸೇರಿದಂತೆ ಹಲವು ಪುಸ್ತಕಗಳ ಲೇಖಕರು.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...