Homeಚಳವಳಿಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ.

- Advertisement -
- Advertisement -

ಗೌತಮ್ ನೌಲಾಖ ಅವರು 1980ರ ದಶಕದಲ್ಲಿ ’ಇಂಡಿಪೆಂಡೆಂಟ್ ಇನಿಷಿಯೇಟಿವ್ ಆನ್ ಕಾಶ್ಮೀರ್’ ಎಂಬ ಒಂದು ಅಭಿಯಾನವನ್ನು ಆರಂಭಿಸಿದ್ದರು. ಆಗಲೇ ನಾವು ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರದ ವಿಷಯದಲ್ಲಿ ಸ್ವಲ್ಪ ಮಟ್ಟಿನ ಗಂಭೀರ ಚರ್ಚೆಯನ್ನು ಮಾಡಿದ್ದು. ನಮ್ಮಲ್ಲಿ ಅನೇಕರು ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯನ್ನು ಹೇಗೆ ರೂಪಿಸುವುದು ಎಂಬ ಬಗ್ಗೆಯೇ ತುಂಬಾ ಗೊಂದಲದಲ್ಲಿದ್ದೆವು ಮತ್ತು ಬಹುತೇಕರಿಗೆ ಐತಿಹಾಸಿಕ ವಾಸ್ತವಾಂಶಗಳ ಬಗ್ಗೆ ತಿಳಿದಿರಲಿಲ್ಲ. ಆಗ ’ಇಕನಾಮಿಕ್ ಎಂಡ್ ಪೊಲಿಟಿಕಲ್ ವೀಕ್ಲಿ’ಯ ಜೊತೆಗಿದ್ದ ಗೌತಮ್, ಚರ್ಚೆಯ ಕೇಂದ್ರವಾಗಿದ್ದ ಸ್ವಾಯತ್ತತೆಯ ರಾಜಕೀಯ ಪ್ರಶ್ನೆಯನ್ನು ಸ್ಪಷ್ಟವಾಗಿ ವಿವರಿಸಬಲ್ಲ ಕೆಲವರಲ್ಲಿ ಒಬ್ಬರಾಗಿದ್ದರು. ಗೌತಮ್ ಈ ಸಮಸ್ಯೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡ ಕೆಲವೇ ಕೆಲವರಲ್ಲಿ ಒಬ್ಬರಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನೆಲಮಟ್ಟದ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ತನಿಖೆ ಮಾಡಿ, ಭಾರತದಲ್ಲಿ ನಾಗರಿಕ ಹಕ್ಕುಗಳ ಚಳವಳಿಯ ಚಿಂತನೆಯನ್ನು ರೂಪಿಸಿದ ಹಲವಾರು ಸತ್ಯಶೋಧನಾ ವರದಿಗಳನ್ನು ರೂಪಿಸಿ ನೀಡಿದ್ದರು. ಅದು ಅಲ್ಲಿನ ನಾಡಿ ಮಿಡಿತವನ್ನು ಅರ್ಥಮಾಡಿಕೊಳ್ಳಲು ತವಕಿಸುತ್ತಿದ್ದ ಹಾಗೂ ಜಮ್ಮು ಮತ್ತು ಕಾಶ್ಮೀರದ ಜನತೆಯ ಜೊತೆಗೆ ಐಕಮತ್ಯದ ಶಪಥ ಮಾಡಲು ಉತ್ಸುಕರಾಗಿದ್ದ ಎಲ್ಲರಿಗೂ ನೆರವಾಯಿತು.

ಹಿಂಸೆ ಮತ್ತು ಪ್ರತಿ ಹಿಂಸೆ ಹೆಚ್ಚುತ್ತಿದ್ದಂತೆ ಮತ್ತು ಭದ್ರತಾ ಪಡೆಗಳ ದಬ್ಬಾಳಿಕೆ ಮತ್ತು ಉಗ್ರಗಾಮಿಗಳ ದಾಳಿಗಳು ಬಿಡದೆ ಮುಂದುವರಿದಂತೆ, ಗೌತಮ್ ಸೇರಿದಂತೆ, ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದ ನಾಗರಿಕ ಹಕ್ಕುಗಳ ಕಾರ್ಯಕರ್ತರು ವಿವೇಕದ ಧ್ವನಿಗಳಾಗಿದ್ದುದು ಮಾತ್ರವಲ್ಲ; ಮಾನವ ಹಕ್ಕುಗಳಿಗೆ ಗೌರವ ನೀಡುವುದು ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಅಗತ್ಯವನ್ನು ಒತ್ತಿಹೇಳುವ ಧ್ವನಿಗಳಾಗಿದ್ದರು. ಗೌತಮ್ ಮತ್ತು ಈ ಪ್ರಜಾಸತ್ತಾತ್ಮಕ ಹಕ್ಕುಗಳ ಪರವಾದ ಶಕ್ತಿಗಳು ಜಮ್ಮು ಮತ್ತು ಕಾಶ್ಮೀರದ ಹಾಗೂ ಉಳಿದ ಭಾರತದ ಜನರ ನಡುವಿನ ಅತ್ಯಂತ ಗಟ್ಟಿಯಾದ ಕೊಂಡಿಯಾಗಿದ್ದರು. ಇಂದು ನಾವು ನೋಡುವಂತೆ, ಈ ಐಕಮತ್ಯವು ವರ್ಷಗಳು ಕಳೆದಂತೆ ಬೆಳೆಯುತ್ತಲೇ ಬಂದಿದೆ.


ಇದನ್ನೂ ಓದಿ: ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್


ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾದ ದಮನದ ನಡುವೆ, ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಯುತ್ತಿರುವಾಗ, ಗೌತಮ್ ನೌಲಾಖ ಅವರು ಭೀಮಾ ಕೋರೆಗಾಂವ್-12’ರಲ್ಲಿ (ಕೆಲ ದಿನಗಳ ಹಿಂದೆ ಬಂಧಿತರಾದ ದಿಲ್ಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹನಿ ಬಾಬು ಹನ್ನೆರಡನೆಯವರಾದರು) ಒಬ್ಬರಾಗಿ ಪುಣೆಯ ಜೈಲಿನಲ್ಲಿದ್ದಾರೆ. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಪ್ರಸಿದ್ಧ ಕವಿಗಳು, ವಕೀಲರು, ಶಿಕ್ಷಕರು ಮತ್ತು ಸಾಮಾಜಿಕ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭಾರತದ ಪ್ರಭುತ್ವ ಮಾನವ ಹಕ್ಕು ಕಾರ್ಯಕರ್ತರಿಗೆ ಎಷ್ಟು ಬೆದರುತ್ತಿದೆ ಎಂದು ತೋರಿಸುವ ಈ ಸುಳ್ಳು ಪ್ರಕರಣವು ಭಾರತದಾದ್ಯಂತ ಮತ್ತು ವಿದೇಶಗಳಲ್ಲಿ- ಅತಾರ್ಕಿಕ ನಿರಂಕುಶ ಬಂಧನಗಳು ಮತ್ತು ಕೋವಿಡ್ ಸೋಂಕಿನ ಹೊರತಾಗಿಯೂ ಜಾಮೀನು ನಿರಾಕರಣೆಯ ವಿರುದ್ಧ- ಬಲವಾದ ಪ್ರತಿಭಟನೆಗಳನ್ನು ಪ್ರೇರೇಪಿಸಿದೆ.

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ. ನಾನು ಪಿಯುಡಿಆರ್ (ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್, ದಿಲ್ಲಿ) ಮತ್ತು ಪಿಐಪಿಎಫ್‌ಪಿಡಿ (ಪಾಕಿಸ್ತಾನ್- ಇಂಡಿಯಾ ಪೀಪಲ್ಸ್ ಫೋರಂ ಫಾರ್ ಪೀಸ್ ಎಂಡ್ ಡೆಮೋಕ್ರಸಿ) ಸಂಘಟನೆಗಳಲ್ಲಿ ಗೌತಮ್ ಜೊತೆ ಮೂರು ದಶಕಗಳಿಗೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಹೊಂದಿದ್ದೆ. ತಮ್ಮ ದೃಢ ಸಂಕಲ್ಪ, ಉದ್ದೇಶದ ಸ್ಪಷ್ಟತೆ ಮತ್ತು ಧೈರ್ಯದಿಂದ ಒಂದು ತಲೆಮಾರಿನ ಪ್ರಜಾಸತ್ತಾತ್ಮಕ ಮನೋಭಾವದ ಯುವಜನರನ್ನು ಪ್ರೇರೇಪಿಸುತ್ತಲೇ ಇರುವ ಒಂದು ಪೀಳಿಗೆಯ ಸಾಮಾಜಿಕ ಕಾರ್ಯಕರ್ತ ಬುದ್ಧಿಜೀವಿಗಳನ್ನು ಗೌತಮ್ ಪ್ರತಿನಿಧಿಸುತ್ತಾರೆ.

ಸವಾಲುಗಳ ಹೊರತಾಗಿಯೂ ಪ್ರಜಾಪ್ರಭುತ್ವಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಮತ್ತು ಗೌತಮ್ ಹಾಗೂ ಭೀಮಾ ಕೋರೆಗಾಂವ್ ಪ್ರಕರಣದ ಎಲ್ಲಾ 12 ಮಂದಿ ಹೊರಬಂದು ನಮ್ಮನ್ನು ಮುನ್ನಡೆಸಲು ಖಂಡಿತವಾಗಿಯೂ ನಮ್ಮ ನಡುವೆ ಇರುತ್ತಾರೆ.

ಐಕಮತ್ಯದೊಂದಿಗೆ,

  • ಪ್ರೊ. ಮನೋರಂಜನ್ ಮೊಹಂತಿ, ಪ್ರಾಧ್ಯಾಪಕ, ಸಂಶೋಧಕ ಮತ್ತು ಲೇಖಕ. ರಾಜಕೀಯ ಶಾಸ್ತ್ರಜ್ಞರಾಗಿ, ಮಾನವ ಹಕ್ಕುಗಳ ಕಾರ್ಯಕರ್ತರಾಗಿ ಹಲವು ಚಳವಳಿಗಳ ಸಂಗಾತಿ ಮೊಹಂತಿಯವರು. ದೆಹಲಿ ವಿಶ್ವವಿದ್ಯಾಲಯ ಸುಧೀರ್ಘ ಸೇವೆ ಸಲ್ಲಿಸಿರುವುದಲ್ಲದೆ, ವಿಶ್ವದ ಹಲವು ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚೀನಾ ದೇಶದ ಬಗ್ಗೆ ವಿದ್ವತ್ತು ಹೊಂದಿರುವ ಮೊಹಂತಿ ಅವರು ಚೈನಾ ಅಟ್ ಎ ಟರ್ನಿಂಗ್ ಪಾಯಿಂಟ್, ಕಾಂಟೆಂಪೊರರಿ ಇಂಡಿಯನ್ ಪೊಲಿಟಿಕಲ್ ಥಿಯರಿ ಸೇರಿದಂತೆ ಹಲವು ಪುಸ್ತಕಗಳ ಲೇಖಕರು.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...