Homeಚಳವಳಿಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ.

- Advertisement -
- Advertisement -

ಗೌತಮ್ ನೌಲಾಖ ಅವರು 1980ರ ದಶಕದಲ್ಲಿ ’ಇಂಡಿಪೆಂಡೆಂಟ್ ಇನಿಷಿಯೇಟಿವ್ ಆನ್ ಕಾಶ್ಮೀರ್’ ಎಂಬ ಒಂದು ಅಭಿಯಾನವನ್ನು ಆರಂಭಿಸಿದ್ದರು. ಆಗಲೇ ನಾವು ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರದ ವಿಷಯದಲ್ಲಿ ಸ್ವಲ್ಪ ಮಟ್ಟಿನ ಗಂಭೀರ ಚರ್ಚೆಯನ್ನು ಮಾಡಿದ್ದು. ನಮ್ಮಲ್ಲಿ ಅನೇಕರು ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯನ್ನು ಹೇಗೆ ರೂಪಿಸುವುದು ಎಂಬ ಬಗ್ಗೆಯೇ ತುಂಬಾ ಗೊಂದಲದಲ್ಲಿದ್ದೆವು ಮತ್ತು ಬಹುತೇಕರಿಗೆ ಐತಿಹಾಸಿಕ ವಾಸ್ತವಾಂಶಗಳ ಬಗ್ಗೆ ತಿಳಿದಿರಲಿಲ್ಲ. ಆಗ ’ಇಕನಾಮಿಕ್ ಎಂಡ್ ಪೊಲಿಟಿಕಲ್ ವೀಕ್ಲಿ’ಯ ಜೊತೆಗಿದ್ದ ಗೌತಮ್, ಚರ್ಚೆಯ ಕೇಂದ್ರವಾಗಿದ್ದ ಸ್ವಾಯತ್ತತೆಯ ರಾಜಕೀಯ ಪ್ರಶ್ನೆಯನ್ನು ಸ್ಪಷ್ಟವಾಗಿ ವಿವರಿಸಬಲ್ಲ ಕೆಲವರಲ್ಲಿ ಒಬ್ಬರಾಗಿದ್ದರು. ಗೌತಮ್ ಈ ಸಮಸ್ಯೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡ ಕೆಲವೇ ಕೆಲವರಲ್ಲಿ ಒಬ್ಬರಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನೆಲಮಟ್ಟದ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ತನಿಖೆ ಮಾಡಿ, ಭಾರತದಲ್ಲಿ ನಾಗರಿಕ ಹಕ್ಕುಗಳ ಚಳವಳಿಯ ಚಿಂತನೆಯನ್ನು ರೂಪಿಸಿದ ಹಲವಾರು ಸತ್ಯಶೋಧನಾ ವರದಿಗಳನ್ನು ರೂಪಿಸಿ ನೀಡಿದ್ದರು. ಅದು ಅಲ್ಲಿನ ನಾಡಿ ಮಿಡಿತವನ್ನು ಅರ್ಥಮಾಡಿಕೊಳ್ಳಲು ತವಕಿಸುತ್ತಿದ್ದ ಹಾಗೂ ಜಮ್ಮು ಮತ್ತು ಕಾಶ್ಮೀರದ ಜನತೆಯ ಜೊತೆಗೆ ಐಕಮತ್ಯದ ಶಪಥ ಮಾಡಲು ಉತ್ಸುಕರಾಗಿದ್ದ ಎಲ್ಲರಿಗೂ ನೆರವಾಯಿತು.

ಹಿಂಸೆ ಮತ್ತು ಪ್ರತಿ ಹಿಂಸೆ ಹೆಚ್ಚುತ್ತಿದ್ದಂತೆ ಮತ್ತು ಭದ್ರತಾ ಪಡೆಗಳ ದಬ್ಬಾಳಿಕೆ ಮತ್ತು ಉಗ್ರಗಾಮಿಗಳ ದಾಳಿಗಳು ಬಿಡದೆ ಮುಂದುವರಿದಂತೆ, ಗೌತಮ್ ಸೇರಿದಂತೆ, ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದ ನಾಗರಿಕ ಹಕ್ಕುಗಳ ಕಾರ್ಯಕರ್ತರು ವಿವೇಕದ ಧ್ವನಿಗಳಾಗಿದ್ದುದು ಮಾತ್ರವಲ್ಲ; ಮಾನವ ಹಕ್ಕುಗಳಿಗೆ ಗೌರವ ನೀಡುವುದು ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಅಗತ್ಯವನ್ನು ಒತ್ತಿಹೇಳುವ ಧ್ವನಿಗಳಾಗಿದ್ದರು. ಗೌತಮ್ ಮತ್ತು ಈ ಪ್ರಜಾಸತ್ತಾತ್ಮಕ ಹಕ್ಕುಗಳ ಪರವಾದ ಶಕ್ತಿಗಳು ಜಮ್ಮು ಮತ್ತು ಕಾಶ್ಮೀರದ ಹಾಗೂ ಉಳಿದ ಭಾರತದ ಜನರ ನಡುವಿನ ಅತ್ಯಂತ ಗಟ್ಟಿಯಾದ ಕೊಂಡಿಯಾಗಿದ್ದರು. ಇಂದು ನಾವು ನೋಡುವಂತೆ, ಈ ಐಕಮತ್ಯವು ವರ್ಷಗಳು ಕಳೆದಂತೆ ಬೆಳೆಯುತ್ತಲೇ ಬಂದಿದೆ.


ಇದನ್ನೂ ಓದಿ: ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್


ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾದ ದಮನದ ನಡುವೆ, ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಯುತ್ತಿರುವಾಗ, ಗೌತಮ್ ನೌಲಾಖ ಅವರು ಭೀಮಾ ಕೋರೆಗಾಂವ್-12’ರಲ್ಲಿ (ಕೆಲ ದಿನಗಳ ಹಿಂದೆ ಬಂಧಿತರಾದ ದಿಲ್ಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹನಿ ಬಾಬು ಹನ್ನೆರಡನೆಯವರಾದರು) ಒಬ್ಬರಾಗಿ ಪುಣೆಯ ಜೈಲಿನಲ್ಲಿದ್ದಾರೆ. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಪ್ರಸಿದ್ಧ ಕವಿಗಳು, ವಕೀಲರು, ಶಿಕ್ಷಕರು ಮತ್ತು ಸಾಮಾಜಿಕ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭಾರತದ ಪ್ರಭುತ್ವ ಮಾನವ ಹಕ್ಕು ಕಾರ್ಯಕರ್ತರಿಗೆ ಎಷ್ಟು ಬೆದರುತ್ತಿದೆ ಎಂದು ತೋರಿಸುವ ಈ ಸುಳ್ಳು ಪ್ರಕರಣವು ಭಾರತದಾದ್ಯಂತ ಮತ್ತು ವಿದೇಶಗಳಲ್ಲಿ- ಅತಾರ್ಕಿಕ ನಿರಂಕುಶ ಬಂಧನಗಳು ಮತ್ತು ಕೋವಿಡ್ ಸೋಂಕಿನ ಹೊರತಾಗಿಯೂ ಜಾಮೀನು ನಿರಾಕರಣೆಯ ವಿರುದ್ಧ- ಬಲವಾದ ಪ್ರತಿಭಟನೆಗಳನ್ನು ಪ್ರೇರೇಪಿಸಿದೆ.

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ. ನಾನು ಪಿಯುಡಿಆರ್ (ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್, ದಿಲ್ಲಿ) ಮತ್ತು ಪಿಐಪಿಎಫ್‌ಪಿಡಿ (ಪಾಕಿಸ್ತಾನ್- ಇಂಡಿಯಾ ಪೀಪಲ್ಸ್ ಫೋರಂ ಫಾರ್ ಪೀಸ್ ಎಂಡ್ ಡೆಮೋಕ್ರಸಿ) ಸಂಘಟನೆಗಳಲ್ಲಿ ಗೌತಮ್ ಜೊತೆ ಮೂರು ದಶಕಗಳಿಗೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಹೊಂದಿದ್ದೆ. ತಮ್ಮ ದೃಢ ಸಂಕಲ್ಪ, ಉದ್ದೇಶದ ಸ್ಪಷ್ಟತೆ ಮತ್ತು ಧೈರ್ಯದಿಂದ ಒಂದು ತಲೆಮಾರಿನ ಪ್ರಜಾಸತ್ತಾತ್ಮಕ ಮನೋಭಾವದ ಯುವಜನರನ್ನು ಪ್ರೇರೇಪಿಸುತ್ತಲೇ ಇರುವ ಒಂದು ಪೀಳಿಗೆಯ ಸಾಮಾಜಿಕ ಕಾರ್ಯಕರ್ತ ಬುದ್ಧಿಜೀವಿಗಳನ್ನು ಗೌತಮ್ ಪ್ರತಿನಿಧಿಸುತ್ತಾರೆ.

ಸವಾಲುಗಳ ಹೊರತಾಗಿಯೂ ಪ್ರಜಾಪ್ರಭುತ್ವಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಮತ್ತು ಗೌತಮ್ ಹಾಗೂ ಭೀಮಾ ಕೋರೆಗಾಂವ್ ಪ್ರಕರಣದ ಎಲ್ಲಾ 12 ಮಂದಿ ಹೊರಬಂದು ನಮ್ಮನ್ನು ಮುನ್ನಡೆಸಲು ಖಂಡಿತವಾಗಿಯೂ ನಮ್ಮ ನಡುವೆ ಇರುತ್ತಾರೆ.

ಐಕಮತ್ಯದೊಂದಿಗೆ,

  • ಪ್ರೊ. ಮನೋರಂಜನ್ ಮೊಹಂತಿ, ಪ್ರಾಧ್ಯಾಪಕ, ಸಂಶೋಧಕ ಮತ್ತು ಲೇಖಕ. ರಾಜಕೀಯ ಶಾಸ್ತ್ರಜ್ಞರಾಗಿ, ಮಾನವ ಹಕ್ಕುಗಳ ಕಾರ್ಯಕರ್ತರಾಗಿ ಹಲವು ಚಳವಳಿಗಳ ಸಂಗಾತಿ ಮೊಹಂತಿಯವರು. ದೆಹಲಿ ವಿಶ್ವವಿದ್ಯಾಲಯ ಸುಧೀರ್ಘ ಸೇವೆ ಸಲ್ಲಿಸಿರುವುದಲ್ಲದೆ, ವಿಶ್ವದ ಹಲವು ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚೀನಾ ದೇಶದ ಬಗ್ಗೆ ವಿದ್ವತ್ತು ಹೊಂದಿರುವ ಮೊಹಂತಿ ಅವರು ಚೈನಾ ಅಟ್ ಎ ಟರ್ನಿಂಗ್ ಪಾಯಿಂಟ್, ಕಾಂಟೆಂಪೊರರಿ ಇಂಡಿಯನ್ ಪೊಲಿಟಿಕಲ್ ಥಿಯರಿ ಸೇರಿದಂತೆ ಹಲವು ಪುಸ್ತಕಗಳ ಲೇಖಕರು.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...