Homeಚಳವಳಿಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ.

- Advertisement -
- Advertisement -

ಗೌತಮ್ ನೌಲಾಖ ಅವರು 1980ರ ದಶಕದಲ್ಲಿ ’ಇಂಡಿಪೆಂಡೆಂಟ್ ಇನಿಷಿಯೇಟಿವ್ ಆನ್ ಕಾಶ್ಮೀರ್’ ಎಂಬ ಒಂದು ಅಭಿಯಾನವನ್ನು ಆರಂಭಿಸಿದ್ದರು. ಆಗಲೇ ನಾವು ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರದ ವಿಷಯದಲ್ಲಿ ಸ್ವಲ್ಪ ಮಟ್ಟಿನ ಗಂಭೀರ ಚರ್ಚೆಯನ್ನು ಮಾಡಿದ್ದು. ನಮ್ಮಲ್ಲಿ ಅನೇಕರು ಜಮ್ಮು ಮತ್ತು ಕಾಶ್ಮೀರದ ಪ್ರಶ್ನೆಯನ್ನು ಹೇಗೆ ರೂಪಿಸುವುದು ಎಂಬ ಬಗ್ಗೆಯೇ ತುಂಬಾ ಗೊಂದಲದಲ್ಲಿದ್ದೆವು ಮತ್ತು ಬಹುತೇಕರಿಗೆ ಐತಿಹಾಸಿಕ ವಾಸ್ತವಾಂಶಗಳ ಬಗ್ಗೆ ತಿಳಿದಿರಲಿಲ್ಲ. ಆಗ ’ಇಕನಾಮಿಕ್ ಎಂಡ್ ಪೊಲಿಟಿಕಲ್ ವೀಕ್ಲಿ’ಯ ಜೊತೆಗಿದ್ದ ಗೌತಮ್, ಚರ್ಚೆಯ ಕೇಂದ್ರವಾಗಿದ್ದ ಸ್ವಾಯತ್ತತೆಯ ರಾಜಕೀಯ ಪ್ರಶ್ನೆಯನ್ನು ಸ್ಪಷ್ಟವಾಗಿ ವಿವರಿಸಬಲ್ಲ ಕೆಲವರಲ್ಲಿ ಒಬ್ಬರಾಗಿದ್ದರು. ಗೌತಮ್ ಈ ಸಮಸ್ಯೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡ ಕೆಲವೇ ಕೆಲವರಲ್ಲಿ ಒಬ್ಬರಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನೆಲಮಟ್ಟದ ಪರಿಸ್ಥಿತಿಯನ್ನು ವೈಯಕ್ತಿಕವಾಗಿ ತನಿಖೆ ಮಾಡಿ, ಭಾರತದಲ್ಲಿ ನಾಗರಿಕ ಹಕ್ಕುಗಳ ಚಳವಳಿಯ ಚಿಂತನೆಯನ್ನು ರೂಪಿಸಿದ ಹಲವಾರು ಸತ್ಯಶೋಧನಾ ವರದಿಗಳನ್ನು ರೂಪಿಸಿ ನೀಡಿದ್ದರು. ಅದು ಅಲ್ಲಿನ ನಾಡಿ ಮಿಡಿತವನ್ನು ಅರ್ಥಮಾಡಿಕೊಳ್ಳಲು ತವಕಿಸುತ್ತಿದ್ದ ಹಾಗೂ ಜಮ್ಮು ಮತ್ತು ಕಾಶ್ಮೀರದ ಜನತೆಯ ಜೊತೆಗೆ ಐಕಮತ್ಯದ ಶಪಥ ಮಾಡಲು ಉತ್ಸುಕರಾಗಿದ್ದ ಎಲ್ಲರಿಗೂ ನೆರವಾಯಿತು.

ಹಿಂಸೆ ಮತ್ತು ಪ್ರತಿ ಹಿಂಸೆ ಹೆಚ್ಚುತ್ತಿದ್ದಂತೆ ಮತ್ತು ಭದ್ರತಾ ಪಡೆಗಳ ದಬ್ಬಾಳಿಕೆ ಮತ್ತು ಉಗ್ರಗಾಮಿಗಳ ದಾಳಿಗಳು ಬಿಡದೆ ಮುಂದುವರಿದಂತೆ, ಗೌತಮ್ ಸೇರಿದಂತೆ, ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದ ನಾಗರಿಕ ಹಕ್ಕುಗಳ ಕಾರ್ಯಕರ್ತರು ವಿವೇಕದ ಧ್ವನಿಗಳಾಗಿದ್ದುದು ಮಾತ್ರವಲ್ಲ; ಮಾನವ ಹಕ್ಕುಗಳಿಗೆ ಗೌರವ ನೀಡುವುದು ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ಅಗತ್ಯವನ್ನು ಒತ್ತಿಹೇಳುವ ಧ್ವನಿಗಳಾಗಿದ್ದರು. ಗೌತಮ್ ಮತ್ತು ಈ ಪ್ರಜಾಸತ್ತಾತ್ಮಕ ಹಕ್ಕುಗಳ ಪರವಾದ ಶಕ್ತಿಗಳು ಜಮ್ಮು ಮತ್ತು ಕಾಶ್ಮೀರದ ಹಾಗೂ ಉಳಿದ ಭಾರತದ ಜನರ ನಡುವಿನ ಅತ್ಯಂತ ಗಟ್ಟಿಯಾದ ಕೊಂಡಿಯಾಗಿದ್ದರು. ಇಂದು ನಾವು ನೋಡುವಂತೆ, ಈ ಐಕಮತ್ಯವು ವರ್ಷಗಳು ಕಳೆದಂತೆ ಬೆಳೆಯುತ್ತಲೇ ಬಂದಿದೆ.


ಇದನ್ನೂ ಓದಿ: ಪಿತೃಪ್ರಧಾನ ಪ್ರಭುತ್ವದಲ್ಲಿ ಜಡ್ಡುಗಟ್ಟಿದ ಸಮಾಜಕ್ಕೆ ಸವಾಲೆಸೆದ ಶೋಮಾ ಸೇನ್


ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರವಾದ ದಮನದ ನಡುವೆ, ಪ್ರಜಾಪ್ರಭುತ್ವಕ್ಕಾಗಿ ಹೋರಾಟ ನಡೆಯುತ್ತಿರುವಾಗ, ಗೌತಮ್ ನೌಲಾಖ ಅವರು ಭೀಮಾ ಕೋರೆಗಾಂವ್-12’ರಲ್ಲಿ (ಕೆಲ ದಿನಗಳ ಹಿಂದೆ ಬಂಧಿತರಾದ ದಿಲ್ಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಹನಿ ಬಾಬು ಹನ್ನೆರಡನೆಯವರಾದರು) ಒಬ್ಬರಾಗಿ ಪುಣೆಯ ಜೈಲಿನಲ್ಲಿದ್ದಾರೆ. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾದ ಪ್ರಸಿದ್ಧ ಕವಿಗಳು, ವಕೀಲರು, ಶಿಕ್ಷಕರು ಮತ್ತು ಸಾಮಾಜಿಕ ಕಾರ್ಯಕರ್ತರಲ್ಲಿ ಒಬ್ಬರಾಗಿದ್ದಾರೆ. ಭಾರತದ ಪ್ರಭುತ್ವ ಮಾನವ ಹಕ್ಕು ಕಾರ್ಯಕರ್ತರಿಗೆ ಎಷ್ಟು ಬೆದರುತ್ತಿದೆ ಎಂದು ತೋರಿಸುವ ಈ ಸುಳ್ಳು ಪ್ರಕರಣವು ಭಾರತದಾದ್ಯಂತ ಮತ್ತು ವಿದೇಶಗಳಲ್ಲಿ- ಅತಾರ್ಕಿಕ ನಿರಂಕುಶ ಬಂಧನಗಳು ಮತ್ತು ಕೋವಿಡ್ ಸೋಂಕಿನ ಹೊರತಾಗಿಯೂ ಜಾಮೀನು ನಿರಾಕರಣೆಯ ವಿರುದ್ಧ- ಬಲವಾದ ಪ್ರತಿಭಟನೆಗಳನ್ನು ಪ್ರೇರೇಪಿಸಿದೆ.

ಗೌತಮ್ ನೌಲಾಖ ಮತ್ತವರ ಸಂಗಾತಿಗಳು ಮಾಡಿರುವ ಕೆಲಸಗಳು ಭಾರತ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತ್ತಾತ್ಮಕ ಹಕ್ಕುಗಳ ಹೋರಾಟಗಳಿಗೆ ಈಗಲೂ ಸ್ಫೂರ್ತಿ ನೀಡುತ್ತಿವೆ. ನಾನು ಪಿಯುಡಿಆರ್ (ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್, ದಿಲ್ಲಿ) ಮತ್ತು ಪಿಐಪಿಎಫ್‌ಪಿಡಿ (ಪಾಕಿಸ್ತಾನ್- ಇಂಡಿಯಾ ಪೀಪಲ್ಸ್ ಫೋರಂ ಫಾರ್ ಪೀಸ್ ಎಂಡ್ ಡೆಮೋಕ್ರಸಿ) ಸಂಘಟನೆಗಳಲ್ಲಿ ಗೌತಮ್ ಜೊತೆ ಮೂರು ದಶಕಗಳಿಗೂ ಹೆಚ್ಚು ಕಾಲ ಕೆಲಸ ಮಾಡುವ ಅವಕಾಶ ಹೊಂದಿದ್ದೆ. ತಮ್ಮ ದೃಢ ಸಂಕಲ್ಪ, ಉದ್ದೇಶದ ಸ್ಪಷ್ಟತೆ ಮತ್ತು ಧೈರ್ಯದಿಂದ ಒಂದು ತಲೆಮಾರಿನ ಪ್ರಜಾಸತ್ತಾತ್ಮಕ ಮನೋಭಾವದ ಯುವಜನರನ್ನು ಪ್ರೇರೇಪಿಸುತ್ತಲೇ ಇರುವ ಒಂದು ಪೀಳಿಗೆಯ ಸಾಮಾಜಿಕ ಕಾರ್ಯಕರ್ತ ಬುದ್ಧಿಜೀವಿಗಳನ್ನು ಗೌತಮ್ ಪ್ರತಿನಿಧಿಸುತ್ತಾರೆ.

ಸವಾಲುಗಳ ಹೊರತಾಗಿಯೂ ಪ್ರಜಾಪ್ರಭುತ್ವಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಮತ್ತು ಗೌತಮ್ ಹಾಗೂ ಭೀಮಾ ಕೋರೆಗಾಂವ್ ಪ್ರಕರಣದ ಎಲ್ಲಾ 12 ಮಂದಿ ಹೊರಬಂದು ನಮ್ಮನ್ನು ಮುನ್ನಡೆಸಲು ಖಂಡಿತವಾಗಿಯೂ ನಮ್ಮ ನಡುವೆ ಇರುತ್ತಾರೆ.

ಐಕಮತ್ಯದೊಂದಿಗೆ,

  • ಪ್ರೊ. ಮನೋರಂಜನ್ ಮೊಹಂತಿ, ಪ್ರಾಧ್ಯಾಪಕ, ಸಂಶೋಧಕ ಮತ್ತು ಲೇಖಕ. ರಾಜಕೀಯ ಶಾಸ್ತ್ರಜ್ಞರಾಗಿ, ಮಾನವ ಹಕ್ಕುಗಳ ಕಾರ್ಯಕರ್ತರಾಗಿ ಹಲವು ಚಳವಳಿಗಳ ಸಂಗಾತಿ ಮೊಹಂತಿಯವರು. ದೆಹಲಿ ವಿಶ್ವವಿದ್ಯಾಲಯ ಸುಧೀರ್ಘ ಸೇವೆ ಸಲ್ಲಿಸಿರುವುದಲ್ಲದೆ, ವಿಶ್ವದ ಹಲವು ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚೀನಾ ದೇಶದ ಬಗ್ಗೆ ವಿದ್ವತ್ತು ಹೊಂದಿರುವ ಮೊಹಂತಿ ಅವರು ಚೈನಾ ಅಟ್ ಎ ಟರ್ನಿಂಗ್ ಪಾಯಿಂಟ್, ಕಾಂಟೆಂಪೊರರಿ ಇಂಡಿಯನ್ ಪೊಲಿಟಿಕಲ್ ಥಿಯರಿ ಸೇರಿದಂತೆ ಹಲವು ಪುಸ್ತಕಗಳ ಲೇಖಕರು.

ಅನುವಾದ: ನಿಖಿಲ್ ಕೋಲ್ಪೆ


ಇದನ್ನೂ ಓದಿ: ಎಷ್ಟೋ ಆದಿವಾಸಿ ಕುಟುಂಬಗಳ ಪ್ರೀತಿಯ ಪುತ್ರ ಮಹೇಶ್ ರಾವುತ್ ಬಂಧನ ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....