Homeಮುಖಪುಟಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ನವಿ ಮುಂಬೈನಲ್ಲಿ ಗೃಹಬಂಧನದಲ್ಲಿದ್ದ ಗೌತಮ್ ನವ್ಲಾಖಾ ಅವರನ್ನು ಶನಿವಾರ ತಡರಾತ್ರಿ 8:30ರ ಸುಮಾರಿಗೆ ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ನೀಡಲಾಗಿದ್ದ ಜಾಮೀನಿನ ಮೇಲಿನ ತಡೆಯನ್ನು ಸುಪ್ರೀಂ ಕೋರ್ಟ್ ಮೇ 14 ರಂದು ತೆರವುಗೊಳಿಸಿತ್ತು. ಇದರ ಬೆನ್ನಲ್ಲಿ ಗೃಹ ಬಂಧನದಿಂದ ಬಿಡುಗಡೆಯಾಗಿ ಗೌತಮ್ ನವ್ಲಾಖಾ ಕುಟುಂಬ ವರ್ಗವನ್ನು ಸೇರಿಕೊಂಡಿದ್ದಾರೆ.

ನವ್ಲಾಖಾ ಪರ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ವಾದ ಮಂಡಿಸಿದರೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ರಾಷ್ಟ್ರೀಯ ತನಿಖಾ ಸಂಸ್ಥೆ ಪರವಾಗಿ ಕೋರ್ಟ್‌ನಲ್ಲಿ ವಾದವನ್ನು ಮಂಡಿಸಿದ್ದಾರೆ.

ಬಾಂಬೆ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್ 19ರಂದು ನವ್ಲಾಖಾಗೆ ಜಾಮೀನು ನೀಡಿತ್ತು, ಆದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ತನ್ನ ತೀರ್ಪಿಗೆ ಮೂರು ವಾರ ತಡೆಯಾಜ್ಞೆ ನೀಡಿತ್ತು. ಗೌತಮ್ ನವ್ಲಾಖಾ ಅವರನ್ನು 2020ರ ಏಪ್ರಿಲ್ 14ರಂದು ಬಂಧಿಸಲಾಗಿದೆ. 2022ರ ನ.19ರಿಂದ ಅವರು ಮುಂಬೈನಲ್ಲಿ ಗೃಹಬಂಧನದಲ್ಲಿದ್ದರು.

ಎಲ್ಗರ್ ಪರಿಷತ್ ಪ್ರಕರಣದಲ್ಲಿ 16 ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು, ಬರಹಗಾರರು ಮತ್ತು ಶಿಕ್ಷಣ ತಜ್ಞರನ್ನು ಬಂಧಿಸಲಾಗಿತ್ತು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆರೋಪಿಗಳ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಪುರಾವೆಗಳನ್ನು ಹಾಕಲು ಹ್ಯಾಕರ್‌ಗಳನ್ನು ಬಳಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿತ್ತು.

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ತೆಲುಗು ಕವಿ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಫೆಬ್ರವರಿ 2021ರಲ್ಲಿ ಆರು ತಿಂಗಳ ಕಾಲ ಜಾಮೀನು ನೀಡಲಾಗಿದೆ. ಜಾಮೀನು ವಿಸ್ತರಿಸಿದಾಗ, ಬಾಂಬೆ ಹೈಕೋರ್ಟ್ ಏಪ್ರಿಲ್ 2022ರಲ್ಲಿ ಶಾಶ್ವತ ಜಾಮೀನಿಗಾಗಿ ಅವರ ಮನವಿಯನ್ನು ತಿರಸ್ಕರಿಸಿದೆ. ಆದರೆ ಆಗಸ್ಟ್ 2022ರಲ್ಲಿ ಸುಪ್ರೀಂ ಕೋರ್ಟ್ ರಾವ್ ಅವರ ಆರೋಗ್ಯದ ಸ್ಥಿತಿ ಆಧಾರದ ಮೇಲೆ ಜಾಮೀನು ನೀಡಿದೆ.

ಏಪ್ರಿಲ್‌ನಲ್ಲಿ ಶೋಮಾ ಸೇನ್‌ಗೆ ಈ ಪ್ರಕರಣದಲ್ಲಿ ಜಾಮೀನು ನೀಡಲಾಗಿತ್ತು. 2021 ರಲ್ಲಿ ವಕೀಲೆ ಸುಧಾ ಭಾರದ್ವಾಜ್ ಅವರು ಡೀಫಾಲ್ಟ್ ಜಾಮೀನು ಪಡೆದಿದ್ದರು. 2022ರಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. 2023ರಲ್ಲಿ ಪ್ರಕರಣಕ್ಕೆ ಸಂಬಂಧಿಸಿ ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಜಾಮೀನು ಪಡೆದಿದ್ದಾರೆ. ಇದಲ್ಲದೆ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿತ್ತು.

ಇನ್ನೂ ಯಾರು ಕಂಬಿಗಳ ಹಿಂದೆ ಇದ್ದಾರೆ?

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಪತ್ರಕರ್ತ ಸುಧೀರ್ ಧಾವಳೆ, ಹೋರಾಟಗಾರ ರೋನಾ ವಿಲ್ಸನ್, ವಕೀಲ ಸುರೇಂದ್ರ ಗಡ್ಲಿಂಗ್, ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಮತ್ತು ಸಾಂಸ್ಕೃತಿಕ ಕಲಾವಿದರು ಮತ್ತು ಕಾರ್ಯಕರ್ತರಾದ ಸಾಗರ್ ಗೋರ್ಖೆ, ರಮೇಶ್ ಗೈಚೋರ್ ಮತ್ತು ಜ್ಯೋತಿ ಜಗತಾಪ್ ಅವರು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ವಿಲ್ಸನ್, ಗ್ಯಾಡ್ಲಿಂಗ್ ಮತ್ತು ಧವಳೆ ಅವರ ಮೇಲ್ಮನವಿಗಳು ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ, ಈ ಹಿಂದೆ ವಿಶೇಷ ನ್ಯಾಯಾಲಯವು ಅವರ ಮನವಿಗಳನ್ನು ತಿರಸ್ಕರಿಸಿತ್ತು. ಇದಲ್ಲದೆ ಬಾಬು ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...