Homeಮುಖಪುಟಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ನವಿ ಮುಂಬೈನಲ್ಲಿ ಗೃಹಬಂಧನದಲ್ಲಿದ್ದ ಗೌತಮ್ ನವ್ಲಾಖಾ ಅವರನ್ನು ಶನಿವಾರ ತಡರಾತ್ರಿ 8:30ರ ಸುಮಾರಿಗೆ ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ನೀಡಲಾಗಿದ್ದ ಜಾಮೀನಿನ ಮೇಲಿನ ತಡೆಯನ್ನು ಸುಪ್ರೀಂ ಕೋರ್ಟ್ ಮೇ 14 ರಂದು ತೆರವುಗೊಳಿಸಿತ್ತು. ಇದರ ಬೆನ್ನಲ್ಲಿ ಗೃಹ ಬಂಧನದಿಂದ ಬಿಡುಗಡೆಯಾಗಿ ಗೌತಮ್ ನವ್ಲಾಖಾ ಕುಟುಂಬ ವರ್ಗವನ್ನು ಸೇರಿಕೊಂಡಿದ್ದಾರೆ.

ನವ್ಲಾಖಾ ಪರ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ವಾದ ಮಂಡಿಸಿದರೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ರಾಷ್ಟ್ರೀಯ ತನಿಖಾ ಸಂಸ್ಥೆ ಪರವಾಗಿ ಕೋರ್ಟ್‌ನಲ್ಲಿ ವಾದವನ್ನು ಮಂಡಿಸಿದ್ದಾರೆ.

ಬಾಂಬೆ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್ 19ರಂದು ನವ್ಲಾಖಾಗೆ ಜಾಮೀನು ನೀಡಿತ್ತು, ಆದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ತನ್ನ ತೀರ್ಪಿಗೆ ಮೂರು ವಾರ ತಡೆಯಾಜ್ಞೆ ನೀಡಿತ್ತು. ಗೌತಮ್ ನವ್ಲಾಖಾ ಅವರನ್ನು 2020ರ ಏಪ್ರಿಲ್ 14ರಂದು ಬಂಧಿಸಲಾಗಿದೆ. 2022ರ ನ.19ರಿಂದ ಅವರು ಮುಂಬೈನಲ್ಲಿ ಗೃಹಬಂಧನದಲ್ಲಿದ್ದರು.

ಎಲ್ಗರ್ ಪರಿಷತ್ ಪ್ರಕರಣದಲ್ಲಿ 16 ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು, ಬರಹಗಾರರು ಮತ್ತು ಶಿಕ್ಷಣ ತಜ್ಞರನ್ನು ಬಂಧಿಸಲಾಗಿತ್ತು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆರೋಪಿಗಳ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಪುರಾವೆಗಳನ್ನು ಹಾಕಲು ಹ್ಯಾಕರ್‌ಗಳನ್ನು ಬಳಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿತ್ತು.

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ತೆಲುಗು ಕವಿ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಫೆಬ್ರವರಿ 2021ರಲ್ಲಿ ಆರು ತಿಂಗಳ ಕಾಲ ಜಾಮೀನು ನೀಡಲಾಗಿದೆ. ಜಾಮೀನು ವಿಸ್ತರಿಸಿದಾಗ, ಬಾಂಬೆ ಹೈಕೋರ್ಟ್ ಏಪ್ರಿಲ್ 2022ರಲ್ಲಿ ಶಾಶ್ವತ ಜಾಮೀನಿಗಾಗಿ ಅವರ ಮನವಿಯನ್ನು ತಿರಸ್ಕರಿಸಿದೆ. ಆದರೆ ಆಗಸ್ಟ್ 2022ರಲ್ಲಿ ಸುಪ್ರೀಂ ಕೋರ್ಟ್ ರಾವ್ ಅವರ ಆರೋಗ್ಯದ ಸ್ಥಿತಿ ಆಧಾರದ ಮೇಲೆ ಜಾಮೀನು ನೀಡಿದೆ.

ಏಪ್ರಿಲ್‌ನಲ್ಲಿ ಶೋಮಾ ಸೇನ್‌ಗೆ ಈ ಪ್ರಕರಣದಲ್ಲಿ ಜಾಮೀನು ನೀಡಲಾಗಿತ್ತು. 2021 ರಲ್ಲಿ ವಕೀಲೆ ಸುಧಾ ಭಾರದ್ವಾಜ್ ಅವರು ಡೀಫಾಲ್ಟ್ ಜಾಮೀನು ಪಡೆದಿದ್ದರು. 2022ರಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. 2023ರಲ್ಲಿ ಪ್ರಕರಣಕ್ಕೆ ಸಂಬಂಧಿಸಿ ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಜಾಮೀನು ಪಡೆದಿದ್ದಾರೆ. ಇದಲ್ಲದೆ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿತ್ತು.

ಇನ್ನೂ ಯಾರು ಕಂಬಿಗಳ ಹಿಂದೆ ಇದ್ದಾರೆ?

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಪತ್ರಕರ್ತ ಸುಧೀರ್ ಧಾವಳೆ, ಹೋರಾಟಗಾರ ರೋನಾ ವಿಲ್ಸನ್, ವಕೀಲ ಸುರೇಂದ್ರ ಗಡ್ಲಿಂಗ್, ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಮತ್ತು ಸಾಂಸ್ಕೃತಿಕ ಕಲಾವಿದರು ಮತ್ತು ಕಾರ್ಯಕರ್ತರಾದ ಸಾಗರ್ ಗೋರ್ಖೆ, ರಮೇಶ್ ಗೈಚೋರ್ ಮತ್ತು ಜ್ಯೋತಿ ಜಗತಾಪ್ ಅವರು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ವಿಲ್ಸನ್, ಗ್ಯಾಡ್ಲಿಂಗ್ ಮತ್ತು ಧವಳೆ ಅವರ ಮೇಲ್ಮನವಿಗಳು ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ, ಈ ಹಿಂದೆ ವಿಶೇಷ ನ್ಯಾಯಾಲಯವು ಅವರ ಮನವಿಗಳನ್ನು ತಿರಸ್ಕರಿಸಿತ್ತು. ಇದಲ್ಲದೆ ಬಾಬು ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...