Homeಮುಖಪುಟಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಸಭೆ ಪ್ರಾರಂಭವಾಗುವ ಕೇವಲ 8-10 ನಿಮಿಷ ಮೊದಲು ಶಾರ್ಟ್‌ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರು ನೀಡಲಾಗಿತ್ತು ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಗುರುವಾರ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಈ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರು ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

ನೂತನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮುನ್ನ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರುಗಳನ್ನು ನನಗೆ ಮೊದಲೇ ಕೊಟ್ಟಿರಲಿಲ್ಲ. ಸುದೀರ್ಘ ಪಟ್ಟಿಯಲ್ಲಿ ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಸಮಾನ ಕಾರ್ಯದರ್ಶಿಯಾಗಿ ನಿವೃತ್ತರಾದ 92 ಅಧಿಕಾರಿಗಳು, ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಸಮಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 93 ಅಧಿಕಾರಿಗಳು, ಕಳೆದ ಒಂದು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾದ 15 ಅಧಿಕಾರಿಗಳು, 28 ಮತ್ತು 8 ಅಧಿಕಾರಿಗಳು ಕ್ರಮವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದ್ದರು ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಚುನಾವಣಾ ಆಯುಕ್ತರ ಆಯ್ಕೆ ಸಭೆ ಪ್ರಾರಂಭವಾಗುವ ಕೇವಲ 8 ರಿಂದ 10 ನಿಮಿಷ ಮೊದಲು ಆರು ಶಾರ್ಟ್‌ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರನ್ನು ಸರ್ಕಾರ ನನಗೆ ನೀಡಿತ್ತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ 6 ಅಧಿಕಾರಿಗಳ ವಿವರಗಳು, ಅವರು ನಿರ್ವಹಿಸಿದ ಹುದ್ದೆಗಳು, ಅವರ ಆಡಳಿತ ದಾಖಲೆ ಮತ್ತು ಎಲ್ಲದರ ವಿವರಗಳನ್ನು ಆಯ್ಕೆ ಸಮಿತಿಗೆ ತಿಳಿಸಿದರು. ಈ 6 ಅಧಿಕಾರಿಗಳ ಪಟ್ಟಿಯಿಂದ ಸಮಿತಿಯು ಇಬ್ಬರ ಹೆಸರನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಚೌಧರಿ ಹೇಳಿದ್ದಾರೆ.

ಚೌಧರಿ ಅವರ ಪ್ರಕಾರ ಆರು ಅಧಿಕಾರಿಗಳ ಹೆಸರುಗಳು ಹೀಗಿವೆ.. ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ.

ಕಾನೂನು ಸಚಿವರು ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ ಬಳಿಕ, ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಮತ್ತು ಸುಖಭೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ನಿಮಗೆ ಏನಾದರು ಹೇಳಲಿಕ್ಕೆ ಇದೆಯಾ? ಎಂದು ನನ್ನನ್ನು ಕೇಳಿದರು. ಆಗ ನಾನು, “ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಪ್ರೊಪೈಲ್ ನನಗೆ ಕಳಿಸಿ, ಅದನ್ನು ಪರಿಶೀಲಿಸಿದ ಬಳಿಕ ನನಗೆ ಅಭಿಪ್ರಾಯ ತಿಳಿಸಲು ಸಹಾಯವಾಗುತ್ತದೆ ಎಂದೆ” ಎಂದು ಚೌಧರಿ ಹೇಳಿದ್ದಾರೆ.

“ನಾನು ನಿನ್ನೆ ರಾತ್ರಿ ನನ್ನ ಕ್ಷೇತ್ರದಿಂದ ದೆಹಲಿ ತಲುಪಿದ್ದೆ. ರಾತ್ರಿಯಷ್ಟೇ 212 ಅಧಿಕಾರಿಗಳ ಸಂಪೂರ್ಣ ಪಟ್ಟಿಯನ್ನು ನನಗೆ ನೀಡಲಾಗಿತ್ತು. ಕಡಿಮೆ ಸಮಯದಲ್ಲಿ 212 ಅಧಿಕಾರಿಗಳ ವಿವರ, ಅವರ ಸಮಗ್ರತೆ, ಅನುಭವ ಮತ್ತು ಆಡಳಿತ ಸಾಮರ್ಥ್ಯದ ವಿವರಗಳನ್ನು ನಾನು ಹೇಗೆ ಪರಿಶೀಲಿಸುವುದು? ಹಾಗಾಗಿಯೇ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಫ್ರೊಫೈಲ್ ಕೇಳಿದ್ದೇನೆ” ಎಂದು ಎಂದಿದ್ದಾರೆ.

“ಪ್ರಧಾನಿ ಮತ್ತು ಗೃಹ ಸಚಿವರು ನನ್ನ ಅಭಿಪ್ರಾಯ ಕೇಳಿದಾಗ, ನಿಮಗೆ ಬಹುಮತ ಇದೆ. ಏನು ಬೇಕಾದರು ಮಾಡಬಹುದು ಎಂದು ನಾನು ಹೇಳಿದೆ. ಇಲ್ಲದಿದ್ದರೂ ನಾನೇನು ಮಾಡಲು ಸಾಧ್ಯ? ನನಗೆ ಅಧಿಕಾರಿಗಳ ಬಗ್ಗೆ ಯಾವುದೇ ಅಸಮಧಾನ ಇಲ್ಲ. ಅವರು ಸಮರ್ಥರಾಗಿದ್ದರೆ ಆಯ್ಕೆ ಆಗಲಿ. ಶಾರ್ಟ್ ಲಿಸ್ಟ್ ಮಾಡಲಾದ ಯಾವುದೇ ಅಧಿಕಾರಿ ನನಗೆ ಪರಿಚಯಸ್ಥರೂ ಅಲ್ಲ. ಅವರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಟ್ಟಿಯಲ್ಲಿ ನನ್ನ ರಾಜ್ಯ ಪಶ್ಚಿಮ ಬಂಗಾಳದ ಇಂದೇವರ್ ಪಾಂಡೆ ಕೂಡ ಇದ್ದರು. ಅವರ ಬಗ್ಗೆ ನನಗೆ ಗೊತ್ತಿದೆ. ಅವರು ಉತ್ತಮ ಸಮರ್ಥ ಅಧಿಕಾರಿ. ಅಧಿಕಾರಿಗಳು ಯಾರು ಬೇಕಾದರು ಆಯ್ಕೆಯಾಗಲಿ. ಆದರೆ, ಆಯ್ಕೆ ಮಾಡಿದ ವಿಧಾನದ ಬಗ್ಗೆ ನನಗೆ ಅಸಮಧಾನವಿದೆ. ಪ್ರತಿಪಕ್ಷ ಸದಸ್ಯರು ಆಯ್ಕೆ ಪ್ರಕ್ರಿಯೆ ಭಾಗವಾಗಬೇಕಾದರೆ, ಅದನ್ನು ಸರಿಯಾಗಿ ಮಾಡಲಿ. ಆಗ ನಾವೇನಾದರು ಸಲಹೆ ನೀಡಲು ಸಾಧ್ಯ” ಎಂದು ಅಧೀರ್ ರಂಜನ್ ಚೌಧರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನೀವು ಔಪಚಾರಿಕವಾಗಿ ನನ್ನನ್ನು ಸಮಿತಿಯಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿದ್ದೀರಿ. ನಾನೂ ಅದೇ ರೀತಿ ಪರಿಗಣಿಸಿದ್ದೇನೆ. ನನ್ನ ಭಿನ್ನಭಿಪ್ರಾಯವನ್ನು ದಾಖಲೆಗೆ ಸೇರಿಸುವಂತೆ ಕೇಳಿಕೊಂಡಿದ್ದೇನೆ. ಇಲ್ಲದಿದ್ದರೆ, ಅವರು ಕೊಟ್ಟ 212 ಅಧಿಕಾರಿಗಳ ಹೆಸರುಗಳನ್ನು ಕಡಿಮೆ ಅವಧಿಯಲ್ಲಿ ಪರಿಶೀಲಿಸಿದ ಅಭಿಪ್ರಾಯ ಹೇಳಲು ನಾನು ಜಾದುಗಾರನಲ್ಲ” ಎಂದು ಚೌಧರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...