Homeಮುಖಪುಟಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಸಭೆ ಪ್ರಾರಂಭವಾಗುವ ಕೇವಲ 8-10 ನಿಮಿಷ ಮೊದಲು ಶಾರ್ಟ್‌ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರು ನೀಡಲಾಗಿತ್ತು ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಗುರುವಾರ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಈ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರು ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

ನೂತನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮುನ್ನ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರುಗಳನ್ನು ನನಗೆ ಮೊದಲೇ ಕೊಟ್ಟಿರಲಿಲ್ಲ. ಸುದೀರ್ಘ ಪಟ್ಟಿಯಲ್ಲಿ ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಸಮಾನ ಕಾರ್ಯದರ್ಶಿಯಾಗಿ ನಿವೃತ್ತರಾದ 92 ಅಧಿಕಾರಿಗಳು, ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಸಮಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 93 ಅಧಿಕಾರಿಗಳು, ಕಳೆದ ಒಂದು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾದ 15 ಅಧಿಕಾರಿಗಳು, 28 ಮತ್ತು 8 ಅಧಿಕಾರಿಗಳು ಕ್ರಮವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದ್ದರು ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಚುನಾವಣಾ ಆಯುಕ್ತರ ಆಯ್ಕೆ ಸಭೆ ಪ್ರಾರಂಭವಾಗುವ ಕೇವಲ 8 ರಿಂದ 10 ನಿಮಿಷ ಮೊದಲು ಆರು ಶಾರ್ಟ್‌ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರನ್ನು ಸರ್ಕಾರ ನನಗೆ ನೀಡಿತ್ತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ 6 ಅಧಿಕಾರಿಗಳ ವಿವರಗಳು, ಅವರು ನಿರ್ವಹಿಸಿದ ಹುದ್ದೆಗಳು, ಅವರ ಆಡಳಿತ ದಾಖಲೆ ಮತ್ತು ಎಲ್ಲದರ ವಿವರಗಳನ್ನು ಆಯ್ಕೆ ಸಮಿತಿಗೆ ತಿಳಿಸಿದರು. ಈ 6 ಅಧಿಕಾರಿಗಳ ಪಟ್ಟಿಯಿಂದ ಸಮಿತಿಯು ಇಬ್ಬರ ಹೆಸರನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಚೌಧರಿ ಹೇಳಿದ್ದಾರೆ.

ಚೌಧರಿ ಅವರ ಪ್ರಕಾರ ಆರು ಅಧಿಕಾರಿಗಳ ಹೆಸರುಗಳು ಹೀಗಿವೆ.. ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ.

ಕಾನೂನು ಸಚಿವರು ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ ಬಳಿಕ, ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಮತ್ತು ಸುಖಭೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ನಿಮಗೆ ಏನಾದರು ಹೇಳಲಿಕ್ಕೆ ಇದೆಯಾ? ಎಂದು ನನ್ನನ್ನು ಕೇಳಿದರು. ಆಗ ನಾನು, “ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಪ್ರೊಪೈಲ್ ನನಗೆ ಕಳಿಸಿ, ಅದನ್ನು ಪರಿಶೀಲಿಸಿದ ಬಳಿಕ ನನಗೆ ಅಭಿಪ್ರಾಯ ತಿಳಿಸಲು ಸಹಾಯವಾಗುತ್ತದೆ ಎಂದೆ” ಎಂದು ಚೌಧರಿ ಹೇಳಿದ್ದಾರೆ.

“ನಾನು ನಿನ್ನೆ ರಾತ್ರಿ ನನ್ನ ಕ್ಷೇತ್ರದಿಂದ ದೆಹಲಿ ತಲುಪಿದ್ದೆ. ರಾತ್ರಿಯಷ್ಟೇ 212 ಅಧಿಕಾರಿಗಳ ಸಂಪೂರ್ಣ ಪಟ್ಟಿಯನ್ನು ನನಗೆ ನೀಡಲಾಗಿತ್ತು. ಕಡಿಮೆ ಸಮಯದಲ್ಲಿ 212 ಅಧಿಕಾರಿಗಳ ವಿವರ, ಅವರ ಸಮಗ್ರತೆ, ಅನುಭವ ಮತ್ತು ಆಡಳಿತ ಸಾಮರ್ಥ್ಯದ ವಿವರಗಳನ್ನು ನಾನು ಹೇಗೆ ಪರಿಶೀಲಿಸುವುದು? ಹಾಗಾಗಿಯೇ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಫ್ರೊಫೈಲ್ ಕೇಳಿದ್ದೇನೆ” ಎಂದು ಎಂದಿದ್ದಾರೆ.

“ಪ್ರಧಾನಿ ಮತ್ತು ಗೃಹ ಸಚಿವರು ನನ್ನ ಅಭಿಪ್ರಾಯ ಕೇಳಿದಾಗ, ನಿಮಗೆ ಬಹುಮತ ಇದೆ. ಏನು ಬೇಕಾದರು ಮಾಡಬಹುದು ಎಂದು ನಾನು ಹೇಳಿದೆ. ಇಲ್ಲದಿದ್ದರೂ ನಾನೇನು ಮಾಡಲು ಸಾಧ್ಯ? ನನಗೆ ಅಧಿಕಾರಿಗಳ ಬಗ್ಗೆ ಯಾವುದೇ ಅಸಮಧಾನ ಇಲ್ಲ. ಅವರು ಸಮರ್ಥರಾಗಿದ್ದರೆ ಆಯ್ಕೆ ಆಗಲಿ. ಶಾರ್ಟ್ ಲಿಸ್ಟ್ ಮಾಡಲಾದ ಯಾವುದೇ ಅಧಿಕಾರಿ ನನಗೆ ಪರಿಚಯಸ್ಥರೂ ಅಲ್ಲ. ಅವರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಟ್ಟಿಯಲ್ಲಿ ನನ್ನ ರಾಜ್ಯ ಪಶ್ಚಿಮ ಬಂಗಾಳದ ಇಂದೇವರ್ ಪಾಂಡೆ ಕೂಡ ಇದ್ದರು. ಅವರ ಬಗ್ಗೆ ನನಗೆ ಗೊತ್ತಿದೆ. ಅವರು ಉತ್ತಮ ಸಮರ್ಥ ಅಧಿಕಾರಿ. ಅಧಿಕಾರಿಗಳು ಯಾರು ಬೇಕಾದರು ಆಯ್ಕೆಯಾಗಲಿ. ಆದರೆ, ಆಯ್ಕೆ ಮಾಡಿದ ವಿಧಾನದ ಬಗ್ಗೆ ನನಗೆ ಅಸಮಧಾನವಿದೆ. ಪ್ರತಿಪಕ್ಷ ಸದಸ್ಯರು ಆಯ್ಕೆ ಪ್ರಕ್ರಿಯೆ ಭಾಗವಾಗಬೇಕಾದರೆ, ಅದನ್ನು ಸರಿಯಾಗಿ ಮಾಡಲಿ. ಆಗ ನಾವೇನಾದರು ಸಲಹೆ ನೀಡಲು ಸಾಧ್ಯ” ಎಂದು ಅಧೀರ್ ರಂಜನ್ ಚೌಧರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನೀವು ಔಪಚಾರಿಕವಾಗಿ ನನ್ನನ್ನು ಸಮಿತಿಯಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿದ್ದೀರಿ. ನಾನೂ ಅದೇ ರೀತಿ ಪರಿಗಣಿಸಿದ್ದೇನೆ. ನನ್ನ ಭಿನ್ನಭಿಪ್ರಾಯವನ್ನು ದಾಖಲೆಗೆ ಸೇರಿಸುವಂತೆ ಕೇಳಿಕೊಂಡಿದ್ದೇನೆ. ಇಲ್ಲದಿದ್ದರೆ, ಅವರು ಕೊಟ್ಟ 212 ಅಧಿಕಾರಿಗಳ ಹೆಸರುಗಳನ್ನು ಕಡಿಮೆ ಅವಧಿಯಲ್ಲಿ ಪರಿಶೀಲಿಸಿದ ಅಭಿಪ್ರಾಯ ಹೇಳಲು ನಾನು ಜಾದುಗಾರನಲ್ಲ” ಎಂದು ಚೌಧರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...