Homeಮುಖಪುಟಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಸಭೆ ಪ್ರಾರಂಭವಾಗುವ ಕೇವಲ 8-10 ನಿಮಿಷ ಮೊದಲು ಶಾರ್ಟ್‌ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರು ನೀಡಲಾಗಿತ್ತು ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಗುರುವಾರ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಈ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರು ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

ನೂತನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮುನ್ನ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರುಗಳನ್ನು ನನಗೆ ಮೊದಲೇ ಕೊಟ್ಟಿರಲಿಲ್ಲ. ಸುದೀರ್ಘ ಪಟ್ಟಿಯಲ್ಲಿ ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಸಮಾನ ಕಾರ್ಯದರ್ಶಿಯಾಗಿ ನಿವೃತ್ತರಾದ 92 ಅಧಿಕಾರಿಗಳು, ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಸಮಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 93 ಅಧಿಕಾರಿಗಳು, ಕಳೆದ ಒಂದು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾದ 15 ಅಧಿಕಾರಿಗಳು, 28 ಮತ್ತು 8 ಅಧಿಕಾರಿಗಳು ಕ್ರಮವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದ್ದರು ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಚುನಾವಣಾ ಆಯುಕ್ತರ ಆಯ್ಕೆ ಸಭೆ ಪ್ರಾರಂಭವಾಗುವ ಕೇವಲ 8 ರಿಂದ 10 ನಿಮಿಷ ಮೊದಲು ಆರು ಶಾರ್ಟ್‌ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರನ್ನು ಸರ್ಕಾರ ನನಗೆ ನೀಡಿತ್ತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ 6 ಅಧಿಕಾರಿಗಳ ವಿವರಗಳು, ಅವರು ನಿರ್ವಹಿಸಿದ ಹುದ್ದೆಗಳು, ಅವರ ಆಡಳಿತ ದಾಖಲೆ ಮತ್ತು ಎಲ್ಲದರ ವಿವರಗಳನ್ನು ಆಯ್ಕೆ ಸಮಿತಿಗೆ ತಿಳಿಸಿದರು. ಈ 6 ಅಧಿಕಾರಿಗಳ ಪಟ್ಟಿಯಿಂದ ಸಮಿತಿಯು ಇಬ್ಬರ ಹೆಸರನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಚೌಧರಿ ಹೇಳಿದ್ದಾರೆ.

ಚೌಧರಿ ಅವರ ಪ್ರಕಾರ ಆರು ಅಧಿಕಾರಿಗಳ ಹೆಸರುಗಳು ಹೀಗಿವೆ.. ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ.

ಕಾನೂನು ಸಚಿವರು ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ ಬಳಿಕ, ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಮತ್ತು ಸುಖಭೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ನಿಮಗೆ ಏನಾದರು ಹೇಳಲಿಕ್ಕೆ ಇದೆಯಾ? ಎಂದು ನನ್ನನ್ನು ಕೇಳಿದರು. ಆಗ ನಾನು, “ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಪ್ರೊಪೈಲ್ ನನಗೆ ಕಳಿಸಿ, ಅದನ್ನು ಪರಿಶೀಲಿಸಿದ ಬಳಿಕ ನನಗೆ ಅಭಿಪ್ರಾಯ ತಿಳಿಸಲು ಸಹಾಯವಾಗುತ್ತದೆ ಎಂದೆ” ಎಂದು ಚೌಧರಿ ಹೇಳಿದ್ದಾರೆ.

“ನಾನು ನಿನ್ನೆ ರಾತ್ರಿ ನನ್ನ ಕ್ಷೇತ್ರದಿಂದ ದೆಹಲಿ ತಲುಪಿದ್ದೆ. ರಾತ್ರಿಯಷ್ಟೇ 212 ಅಧಿಕಾರಿಗಳ ಸಂಪೂರ್ಣ ಪಟ್ಟಿಯನ್ನು ನನಗೆ ನೀಡಲಾಗಿತ್ತು. ಕಡಿಮೆ ಸಮಯದಲ್ಲಿ 212 ಅಧಿಕಾರಿಗಳ ವಿವರ, ಅವರ ಸಮಗ್ರತೆ, ಅನುಭವ ಮತ್ತು ಆಡಳಿತ ಸಾಮರ್ಥ್ಯದ ವಿವರಗಳನ್ನು ನಾನು ಹೇಗೆ ಪರಿಶೀಲಿಸುವುದು? ಹಾಗಾಗಿಯೇ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಫ್ರೊಫೈಲ್ ಕೇಳಿದ್ದೇನೆ” ಎಂದು ಎಂದಿದ್ದಾರೆ.

“ಪ್ರಧಾನಿ ಮತ್ತು ಗೃಹ ಸಚಿವರು ನನ್ನ ಅಭಿಪ್ರಾಯ ಕೇಳಿದಾಗ, ನಿಮಗೆ ಬಹುಮತ ಇದೆ. ಏನು ಬೇಕಾದರು ಮಾಡಬಹುದು ಎಂದು ನಾನು ಹೇಳಿದೆ. ಇಲ್ಲದಿದ್ದರೂ ನಾನೇನು ಮಾಡಲು ಸಾಧ್ಯ? ನನಗೆ ಅಧಿಕಾರಿಗಳ ಬಗ್ಗೆ ಯಾವುದೇ ಅಸಮಧಾನ ಇಲ್ಲ. ಅವರು ಸಮರ್ಥರಾಗಿದ್ದರೆ ಆಯ್ಕೆ ಆಗಲಿ. ಶಾರ್ಟ್ ಲಿಸ್ಟ್ ಮಾಡಲಾದ ಯಾವುದೇ ಅಧಿಕಾರಿ ನನಗೆ ಪರಿಚಯಸ್ಥರೂ ಅಲ್ಲ. ಅವರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಟ್ಟಿಯಲ್ಲಿ ನನ್ನ ರಾಜ್ಯ ಪಶ್ಚಿಮ ಬಂಗಾಳದ ಇಂದೇವರ್ ಪಾಂಡೆ ಕೂಡ ಇದ್ದರು. ಅವರ ಬಗ್ಗೆ ನನಗೆ ಗೊತ್ತಿದೆ. ಅವರು ಉತ್ತಮ ಸಮರ್ಥ ಅಧಿಕಾರಿ. ಅಧಿಕಾರಿಗಳು ಯಾರು ಬೇಕಾದರು ಆಯ್ಕೆಯಾಗಲಿ. ಆದರೆ, ಆಯ್ಕೆ ಮಾಡಿದ ವಿಧಾನದ ಬಗ್ಗೆ ನನಗೆ ಅಸಮಧಾನವಿದೆ. ಪ್ರತಿಪಕ್ಷ ಸದಸ್ಯರು ಆಯ್ಕೆ ಪ್ರಕ್ರಿಯೆ ಭಾಗವಾಗಬೇಕಾದರೆ, ಅದನ್ನು ಸರಿಯಾಗಿ ಮಾಡಲಿ. ಆಗ ನಾವೇನಾದರು ಸಲಹೆ ನೀಡಲು ಸಾಧ್ಯ” ಎಂದು ಅಧೀರ್ ರಂಜನ್ ಚೌಧರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನೀವು ಔಪಚಾರಿಕವಾಗಿ ನನ್ನನ್ನು ಸಮಿತಿಯಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿದ್ದೀರಿ. ನಾನೂ ಅದೇ ರೀತಿ ಪರಿಗಣಿಸಿದ್ದೇನೆ. ನನ್ನ ಭಿನ್ನಭಿಪ್ರಾಯವನ್ನು ದಾಖಲೆಗೆ ಸೇರಿಸುವಂತೆ ಕೇಳಿಕೊಂಡಿದ್ದೇನೆ. ಇಲ್ಲದಿದ್ದರೆ, ಅವರು ಕೊಟ್ಟ 212 ಅಧಿಕಾರಿಗಳ ಹೆಸರುಗಳನ್ನು ಕಡಿಮೆ ಅವಧಿಯಲ್ಲಿ ಪರಿಶೀಲಿಸಿದ ಅಭಿಪ್ರಾಯ ಹೇಳಲು ನಾನು ಜಾದುಗಾರನಲ್ಲ” ಎಂದು ಚೌಧರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...