Homeಮುಖಪುಟಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಸಭೆ ಪ್ರಾರಂಭವಾಗುವ ಕೇವಲ 8-10 ನಿಮಿಷ ಮೊದಲು ಶಾರ್ಟ್‌ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರು ನೀಡಲಾಗಿತ್ತು ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಗುರುವಾರ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಈ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರು ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

ನೂತನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮುನ್ನ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರುಗಳನ್ನು ನನಗೆ ಮೊದಲೇ ಕೊಟ್ಟಿರಲಿಲ್ಲ. ಸುದೀರ್ಘ ಪಟ್ಟಿಯಲ್ಲಿ ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಸಮಾನ ಕಾರ್ಯದರ್ಶಿಯಾಗಿ ನಿವೃತ್ತರಾದ 92 ಅಧಿಕಾರಿಗಳು, ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಸಮಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 93 ಅಧಿಕಾರಿಗಳು, ಕಳೆದ ಒಂದು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾದ 15 ಅಧಿಕಾರಿಗಳು, 28 ಮತ್ತು 8 ಅಧಿಕಾರಿಗಳು ಕ್ರಮವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದ್ದರು ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಚುನಾವಣಾ ಆಯುಕ್ತರ ಆಯ್ಕೆ ಸಭೆ ಪ್ರಾರಂಭವಾಗುವ ಕೇವಲ 8 ರಿಂದ 10 ನಿಮಿಷ ಮೊದಲು ಆರು ಶಾರ್ಟ್‌ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರನ್ನು ಸರ್ಕಾರ ನನಗೆ ನೀಡಿತ್ತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ 6 ಅಧಿಕಾರಿಗಳ ವಿವರಗಳು, ಅವರು ನಿರ್ವಹಿಸಿದ ಹುದ್ದೆಗಳು, ಅವರ ಆಡಳಿತ ದಾಖಲೆ ಮತ್ತು ಎಲ್ಲದರ ವಿವರಗಳನ್ನು ಆಯ್ಕೆ ಸಮಿತಿಗೆ ತಿಳಿಸಿದರು. ಈ 6 ಅಧಿಕಾರಿಗಳ ಪಟ್ಟಿಯಿಂದ ಸಮಿತಿಯು ಇಬ್ಬರ ಹೆಸರನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಚೌಧರಿ ಹೇಳಿದ್ದಾರೆ.

ಚೌಧರಿ ಅವರ ಪ್ರಕಾರ ಆರು ಅಧಿಕಾರಿಗಳ ಹೆಸರುಗಳು ಹೀಗಿವೆ.. ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ.

ಕಾನೂನು ಸಚಿವರು ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ ಬಳಿಕ, ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಮತ್ತು ಸುಖಭೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ನಿಮಗೆ ಏನಾದರು ಹೇಳಲಿಕ್ಕೆ ಇದೆಯಾ? ಎಂದು ನನ್ನನ್ನು ಕೇಳಿದರು. ಆಗ ನಾನು, “ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಪ್ರೊಪೈಲ್ ನನಗೆ ಕಳಿಸಿ, ಅದನ್ನು ಪರಿಶೀಲಿಸಿದ ಬಳಿಕ ನನಗೆ ಅಭಿಪ್ರಾಯ ತಿಳಿಸಲು ಸಹಾಯವಾಗುತ್ತದೆ ಎಂದೆ” ಎಂದು ಚೌಧರಿ ಹೇಳಿದ್ದಾರೆ.

“ನಾನು ನಿನ್ನೆ ರಾತ್ರಿ ನನ್ನ ಕ್ಷೇತ್ರದಿಂದ ದೆಹಲಿ ತಲುಪಿದ್ದೆ. ರಾತ್ರಿಯಷ್ಟೇ 212 ಅಧಿಕಾರಿಗಳ ಸಂಪೂರ್ಣ ಪಟ್ಟಿಯನ್ನು ನನಗೆ ನೀಡಲಾಗಿತ್ತು. ಕಡಿಮೆ ಸಮಯದಲ್ಲಿ 212 ಅಧಿಕಾರಿಗಳ ವಿವರ, ಅವರ ಸಮಗ್ರತೆ, ಅನುಭವ ಮತ್ತು ಆಡಳಿತ ಸಾಮರ್ಥ್ಯದ ವಿವರಗಳನ್ನು ನಾನು ಹೇಗೆ ಪರಿಶೀಲಿಸುವುದು? ಹಾಗಾಗಿಯೇ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಫ್ರೊಫೈಲ್ ಕೇಳಿದ್ದೇನೆ” ಎಂದು ಎಂದಿದ್ದಾರೆ.

“ಪ್ರಧಾನಿ ಮತ್ತು ಗೃಹ ಸಚಿವರು ನನ್ನ ಅಭಿಪ್ರಾಯ ಕೇಳಿದಾಗ, ನಿಮಗೆ ಬಹುಮತ ಇದೆ. ಏನು ಬೇಕಾದರು ಮಾಡಬಹುದು ಎಂದು ನಾನು ಹೇಳಿದೆ. ಇಲ್ಲದಿದ್ದರೂ ನಾನೇನು ಮಾಡಲು ಸಾಧ್ಯ? ನನಗೆ ಅಧಿಕಾರಿಗಳ ಬಗ್ಗೆ ಯಾವುದೇ ಅಸಮಧಾನ ಇಲ್ಲ. ಅವರು ಸಮರ್ಥರಾಗಿದ್ದರೆ ಆಯ್ಕೆ ಆಗಲಿ. ಶಾರ್ಟ್ ಲಿಸ್ಟ್ ಮಾಡಲಾದ ಯಾವುದೇ ಅಧಿಕಾರಿ ನನಗೆ ಪರಿಚಯಸ್ಥರೂ ಅಲ್ಲ. ಅವರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಟ್ಟಿಯಲ್ಲಿ ನನ್ನ ರಾಜ್ಯ ಪಶ್ಚಿಮ ಬಂಗಾಳದ ಇಂದೇವರ್ ಪಾಂಡೆ ಕೂಡ ಇದ್ದರು. ಅವರ ಬಗ್ಗೆ ನನಗೆ ಗೊತ್ತಿದೆ. ಅವರು ಉತ್ತಮ ಸಮರ್ಥ ಅಧಿಕಾರಿ. ಅಧಿಕಾರಿಗಳು ಯಾರು ಬೇಕಾದರು ಆಯ್ಕೆಯಾಗಲಿ. ಆದರೆ, ಆಯ್ಕೆ ಮಾಡಿದ ವಿಧಾನದ ಬಗ್ಗೆ ನನಗೆ ಅಸಮಧಾನವಿದೆ. ಪ್ರತಿಪಕ್ಷ ಸದಸ್ಯರು ಆಯ್ಕೆ ಪ್ರಕ್ರಿಯೆ ಭಾಗವಾಗಬೇಕಾದರೆ, ಅದನ್ನು ಸರಿಯಾಗಿ ಮಾಡಲಿ. ಆಗ ನಾವೇನಾದರು ಸಲಹೆ ನೀಡಲು ಸಾಧ್ಯ” ಎಂದು ಅಧೀರ್ ರಂಜನ್ ಚೌಧರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನೀವು ಔಪಚಾರಿಕವಾಗಿ ನನ್ನನ್ನು ಸಮಿತಿಯಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿದ್ದೀರಿ. ನಾನೂ ಅದೇ ರೀತಿ ಪರಿಗಣಿಸಿದ್ದೇನೆ. ನನ್ನ ಭಿನ್ನಭಿಪ್ರಾಯವನ್ನು ದಾಖಲೆಗೆ ಸೇರಿಸುವಂತೆ ಕೇಳಿಕೊಂಡಿದ್ದೇನೆ. ಇಲ್ಲದಿದ್ದರೆ, ಅವರು ಕೊಟ್ಟ 212 ಅಧಿಕಾರಿಗಳ ಹೆಸರುಗಳನ್ನು ಕಡಿಮೆ ಅವಧಿಯಲ್ಲಿ ಪರಿಶೀಲಿಸಿದ ಅಭಿಪ್ರಾಯ ಹೇಳಲು ನಾನು ಜಾದುಗಾರನಲ್ಲ” ಎಂದು ಚೌಧರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...