Homeಮುಖಪುಟಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಸಭೆ ಪ್ರಾರಂಭವಾಗುವ ಕೇವಲ 8-10 ನಿಮಿಷ ಮೊದಲು ಶಾರ್ಟ್‌ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರು ನೀಡಲಾಗಿತ್ತು ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಗುರುವಾರ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಈ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರು ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

ನೂತನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮುನ್ನ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರುಗಳನ್ನು ನನಗೆ ಮೊದಲೇ ಕೊಟ್ಟಿರಲಿಲ್ಲ. ಸುದೀರ್ಘ ಪಟ್ಟಿಯಲ್ಲಿ ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಸಮಾನ ಕಾರ್ಯದರ್ಶಿಯಾಗಿ ನಿವೃತ್ತರಾದ 92 ಅಧಿಕಾರಿಗಳು, ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಸಮಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 93 ಅಧಿಕಾರಿಗಳು, ಕಳೆದ ಒಂದು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾದ 15 ಅಧಿಕಾರಿಗಳು, 28 ಮತ್ತು 8 ಅಧಿಕಾರಿಗಳು ಕ್ರಮವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದ್ದರು ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಚುನಾವಣಾ ಆಯುಕ್ತರ ಆಯ್ಕೆ ಸಭೆ ಪ್ರಾರಂಭವಾಗುವ ಕೇವಲ 8 ರಿಂದ 10 ನಿಮಿಷ ಮೊದಲು ಆರು ಶಾರ್ಟ್‌ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರನ್ನು ಸರ್ಕಾರ ನನಗೆ ನೀಡಿತ್ತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ 6 ಅಧಿಕಾರಿಗಳ ವಿವರಗಳು, ಅವರು ನಿರ್ವಹಿಸಿದ ಹುದ್ದೆಗಳು, ಅವರ ಆಡಳಿತ ದಾಖಲೆ ಮತ್ತು ಎಲ್ಲದರ ವಿವರಗಳನ್ನು ಆಯ್ಕೆ ಸಮಿತಿಗೆ ತಿಳಿಸಿದರು. ಈ 6 ಅಧಿಕಾರಿಗಳ ಪಟ್ಟಿಯಿಂದ ಸಮಿತಿಯು ಇಬ್ಬರ ಹೆಸರನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಚೌಧರಿ ಹೇಳಿದ್ದಾರೆ.

ಚೌಧರಿ ಅವರ ಪ್ರಕಾರ ಆರು ಅಧಿಕಾರಿಗಳ ಹೆಸರುಗಳು ಹೀಗಿವೆ.. ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ.

ಕಾನೂನು ಸಚಿವರು ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ ಬಳಿಕ, ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಮತ್ತು ಸುಖಭೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ನಿಮಗೆ ಏನಾದರು ಹೇಳಲಿಕ್ಕೆ ಇದೆಯಾ? ಎಂದು ನನ್ನನ್ನು ಕೇಳಿದರು. ಆಗ ನಾನು, “ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಪ್ರೊಪೈಲ್ ನನಗೆ ಕಳಿಸಿ, ಅದನ್ನು ಪರಿಶೀಲಿಸಿದ ಬಳಿಕ ನನಗೆ ಅಭಿಪ್ರಾಯ ತಿಳಿಸಲು ಸಹಾಯವಾಗುತ್ತದೆ ಎಂದೆ” ಎಂದು ಚೌಧರಿ ಹೇಳಿದ್ದಾರೆ.

“ನಾನು ನಿನ್ನೆ ರಾತ್ರಿ ನನ್ನ ಕ್ಷೇತ್ರದಿಂದ ದೆಹಲಿ ತಲುಪಿದ್ದೆ. ರಾತ್ರಿಯಷ್ಟೇ 212 ಅಧಿಕಾರಿಗಳ ಸಂಪೂರ್ಣ ಪಟ್ಟಿಯನ್ನು ನನಗೆ ನೀಡಲಾಗಿತ್ತು. ಕಡಿಮೆ ಸಮಯದಲ್ಲಿ 212 ಅಧಿಕಾರಿಗಳ ವಿವರ, ಅವರ ಸಮಗ್ರತೆ, ಅನುಭವ ಮತ್ತು ಆಡಳಿತ ಸಾಮರ್ಥ್ಯದ ವಿವರಗಳನ್ನು ನಾನು ಹೇಗೆ ಪರಿಶೀಲಿಸುವುದು? ಹಾಗಾಗಿಯೇ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಫ್ರೊಫೈಲ್ ಕೇಳಿದ್ದೇನೆ” ಎಂದು ಎಂದಿದ್ದಾರೆ.

“ಪ್ರಧಾನಿ ಮತ್ತು ಗೃಹ ಸಚಿವರು ನನ್ನ ಅಭಿಪ್ರಾಯ ಕೇಳಿದಾಗ, ನಿಮಗೆ ಬಹುಮತ ಇದೆ. ಏನು ಬೇಕಾದರು ಮಾಡಬಹುದು ಎಂದು ನಾನು ಹೇಳಿದೆ. ಇಲ್ಲದಿದ್ದರೂ ನಾನೇನು ಮಾಡಲು ಸಾಧ್ಯ? ನನಗೆ ಅಧಿಕಾರಿಗಳ ಬಗ್ಗೆ ಯಾವುದೇ ಅಸಮಧಾನ ಇಲ್ಲ. ಅವರು ಸಮರ್ಥರಾಗಿದ್ದರೆ ಆಯ್ಕೆ ಆಗಲಿ. ಶಾರ್ಟ್ ಲಿಸ್ಟ್ ಮಾಡಲಾದ ಯಾವುದೇ ಅಧಿಕಾರಿ ನನಗೆ ಪರಿಚಯಸ್ಥರೂ ಅಲ್ಲ. ಅವರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಟ್ಟಿಯಲ್ಲಿ ನನ್ನ ರಾಜ್ಯ ಪಶ್ಚಿಮ ಬಂಗಾಳದ ಇಂದೇವರ್ ಪಾಂಡೆ ಕೂಡ ಇದ್ದರು. ಅವರ ಬಗ್ಗೆ ನನಗೆ ಗೊತ್ತಿದೆ. ಅವರು ಉತ್ತಮ ಸಮರ್ಥ ಅಧಿಕಾರಿ. ಅಧಿಕಾರಿಗಳು ಯಾರು ಬೇಕಾದರು ಆಯ್ಕೆಯಾಗಲಿ. ಆದರೆ, ಆಯ್ಕೆ ಮಾಡಿದ ವಿಧಾನದ ಬಗ್ಗೆ ನನಗೆ ಅಸಮಧಾನವಿದೆ. ಪ್ರತಿಪಕ್ಷ ಸದಸ್ಯರು ಆಯ್ಕೆ ಪ್ರಕ್ರಿಯೆ ಭಾಗವಾಗಬೇಕಾದರೆ, ಅದನ್ನು ಸರಿಯಾಗಿ ಮಾಡಲಿ. ಆಗ ನಾವೇನಾದರು ಸಲಹೆ ನೀಡಲು ಸಾಧ್ಯ” ಎಂದು ಅಧೀರ್ ರಂಜನ್ ಚೌಧರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನೀವು ಔಪಚಾರಿಕವಾಗಿ ನನ್ನನ್ನು ಸಮಿತಿಯಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿದ್ದೀರಿ. ನಾನೂ ಅದೇ ರೀತಿ ಪರಿಗಣಿಸಿದ್ದೇನೆ. ನನ್ನ ಭಿನ್ನಭಿಪ್ರಾಯವನ್ನು ದಾಖಲೆಗೆ ಸೇರಿಸುವಂತೆ ಕೇಳಿಕೊಂಡಿದ್ದೇನೆ. ಇಲ್ಲದಿದ್ದರೆ, ಅವರು ಕೊಟ್ಟ 212 ಅಧಿಕಾರಿಗಳ ಹೆಸರುಗಳನ್ನು ಕಡಿಮೆ ಅವಧಿಯಲ್ಲಿ ಪರಿಶೀಲಿಸಿದ ಅಭಿಪ್ರಾಯ ಹೇಳಲು ನಾನು ಜಾದುಗಾರನಲ್ಲ” ಎಂದು ಚೌಧರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...