Homeಮುಖಪುಟಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು- ಶರತ್ ಪೊನ್ನಪ್ಪ

- Advertisement -
- Advertisement -

ಕರ್ನಾಟಕದ ಕೊಡವ ಜನಾಂಗದ ಯುವಕ ಮತ್ತು ಉತ್ತರ ಭಾರತ ಮೂಲದ ಮತ್ತೊಬ್ಬ ಯುವಕ ಸೇರಿ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸಲಿಂಗ ವಿವಾಹ ಮಾಡಿಕೊಂಡಿದ್ದು, ವಿವಾಹಿತನನ್ನು ತಮ್ಮ ಸಮಾಜದಿಂದ ಹೊರಗಿಡಲು ಕೊಡವ ಸಮಾಜ ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ಸಲಿಂಗ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಸಾಲಿಗೆ ಈಗ ಈ ಘಟನೆಯೂ ಕೂಡ ಸೇರ್ಪಡೆಯಾಗಿದ್ದು, ಭಾರತೀಯ ಶೈಲಿಯಲ್ಲೇ ವಿವಾಹವಾಗಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನು ವಿರೋಧಿಸಿ ಕೊಡವ ಸಮಾಜವು, ಶರತ್ ಪೊನ್ನಪ್ಪ ಎಂಬ ಕನ್ನಡಿಗನಿಗೆ ಬಹಿಷ್ಕಾರ ಹಾಕಲು ಮುಂದಾಗಿದೆ. ಶರತ್ ಪೊನ್ನಪ್ಪ ಮೂಲತಃ ಕೊಡಗಿನ ಸಮುದಾಯಕ್ಕೆ ಸೇರಿದ್ದು, ಈತ ಮನೆಯನ್ನು ಬಿಟ್ಟು ವಿದೇಶದಲ್ಲಿ ನೆಲೆಸಿ ಹಲವು ವರ್ಷಗಳಾಗಿವೆ. ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಯುವಕನೊಟ್ಟಿಗೆ ಪರಿಚಯವಾಗಿ, ಪ್ರೀತಿ ಬೆಳೆದು, ಇದೇ ಸೆ.26ರಂದು ಕೊಡಗಿನ ಸಂಪ್ರದಾಯದ ಶೈಲಿಯಲ್ಲಿಯೇ ವಿವಾಹ ಮಾಡಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಲಿಂಗ ಮದುವೆ ಸಮಾರಂಭದಲ್ಲಿ ಮದುಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರುತ್ತಿರುವ ಮದುವೆ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದು ಕೊಡವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದ್ದು, ಇದರಿಂದ ನಮ್ಮ ಜನಾಂಗಕ್ಕೆ ಅವಮಾನವಾಗಿದೆ ಮತ್ತು ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ ಎಂದು ಇದನ್ನು ಖಂಡಿಸಿದೆ. ಈ ಬಗ್ಗೆ ಅಮೆರಿಕಾ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಕಂಡಕಂಡಲ್ಲಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಬಳಕೆ ಮಾಡುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಹೇಳಿದ್ದು, ಈ ಬಗ್ಗೆ ಈಗಾಗಲೇ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.

“ಭಿನ್ನಮತೀಯರು ಇರುತ್ತಾರೆ ಎಂದು ನಮಗೆ ತಿಳಿದಿತ್ತು. ಆದರೆ ನಾವು ಹುಟ್ಟಿದ ದಿನದಿಂದ ನಮ್ಮನ್ನು ಸಮಾಜ ಅಕ್ಷರಶಃ ಸ್ವೀಕರಿಸಲಿ ಎಂದು ಹೋರಾಡುತ್ತಿದ್ದೇವೆ. ಬದುಕಲು ಹೋರಾಡುತ್ತಿದ್ದೇವೆ. ಅದಾಗ್ಯೂ, ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಈ ಸಂಭ್ರಮವನ್ನು ನಾವು ಸಂತೋಷದಿಂದ ಆಚರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು ಎಂಬುದನ್ನು ಅರ್ಥಮಾಡಿಕೊಳ್ಳಲು ಸಕಾರಾತ್ಮಕ ಸಂವಾದದಲ್ಲಿ ತೊಡಗುತ್ತೇವೆ” ಶರತ್ ಪೊನ್ನಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ಶರತ್​ ಪೊನ್ನಪ್ಪ ಮೈಸೂರಿನ ರಾಮಕೃಷ್ಣಾಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 13 ವರ್ಷಗಳ ಹಿಂದೆ ಅಮೇರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್​ ಇಂಜಿನಿಯರ್​ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.

2018 ರಲ್ಲಿ ಭಾರತ ದಂಡ ಸಂಹಿತೆಯ ಸಕ್ಷನ್ 377 ನ್ನು ಭಾರತದ ನ್ಯಾಯಾಲಯವು ರದ್ದುಗೊಳಿಸಿತ್ತು. ಈ ಸೆಕ್ಷನ್ ಅಸಹಜ ಲೈಂಗಿಕ ಕ್ರಿಯೆಯನ್ನು ನಿಷೇದಿಸಿತ್ತು. ಹಾಗಾಗಿ ಸಲಿಂಗ ವಿವಾಹಗಳಿಗೆ ಭಾರತದಲ್ಲಿ ಅನುಮತಿಯಿರಲಿಲ್ಲ. ಆದರೆ ಈಗ ಈ ಸೆಕ್ಷನ್‌ ಅನ್ನು ತೆಗೆದುಹಾಕಿದ್ದರೂ, ಭಾರತದಲ್ಲಿ ಸಲಿಂಗ ವಿವಾಹಗಳನ್ನು ಇನ್ನೂ ಕಾನೂನುಬದ್ದವಾಗಿ ಗುರುತಿಸಲಾಗಿಲ್ಲ.


ಇದನ್ನೂ ಓದಿ: ಭಾರತೀಯ ಗಣತಂತ್ರದ ಬಹುದೊಡ್ಡ ಹಬ್ಬಕ್ಕೆ ಸ್ತ್ರೀ ದ್ವೇಷಿ, ಮತಾಂಧ, ಸರ್ವಾಧಿಕಾರಿ ಪ್ರವೃತ್ತಿಯ ಮುಖ್ಯ ಅತಿಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...