Homeಮುಖಪುಟಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು- ಶರತ್ ಪೊನ್ನಪ್ಪ

- Advertisement -
- Advertisement -

ಕರ್ನಾಟಕದ ಕೊಡವ ಜನಾಂಗದ ಯುವಕ ಮತ್ತು ಉತ್ತರ ಭಾರತ ಮೂಲದ ಮತ್ತೊಬ್ಬ ಯುವಕ ಸೇರಿ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸಲಿಂಗ ವಿವಾಹ ಮಾಡಿಕೊಂಡಿದ್ದು, ವಿವಾಹಿತನನ್ನು ತಮ್ಮ ಸಮಾಜದಿಂದ ಹೊರಗಿಡಲು ಕೊಡವ ಸಮಾಜ ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ಸಲಿಂಗ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಸಾಲಿಗೆ ಈಗ ಈ ಘಟನೆಯೂ ಕೂಡ ಸೇರ್ಪಡೆಯಾಗಿದ್ದು, ಭಾರತೀಯ ಶೈಲಿಯಲ್ಲೇ ವಿವಾಹವಾಗಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನು ವಿರೋಧಿಸಿ ಕೊಡವ ಸಮಾಜವು, ಶರತ್ ಪೊನ್ನಪ್ಪ ಎಂಬ ಕನ್ನಡಿಗನಿಗೆ ಬಹಿಷ್ಕಾರ ಹಾಕಲು ಮುಂದಾಗಿದೆ. ಶರತ್ ಪೊನ್ನಪ್ಪ ಮೂಲತಃ ಕೊಡಗಿನ ಸಮುದಾಯಕ್ಕೆ ಸೇರಿದ್ದು, ಈತ ಮನೆಯನ್ನು ಬಿಟ್ಟು ವಿದೇಶದಲ್ಲಿ ನೆಲೆಸಿ ಹಲವು ವರ್ಷಗಳಾಗಿವೆ. ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಯುವಕನೊಟ್ಟಿಗೆ ಪರಿಚಯವಾಗಿ, ಪ್ರೀತಿ ಬೆಳೆದು, ಇದೇ ಸೆ.26ರಂದು ಕೊಡಗಿನ ಸಂಪ್ರದಾಯದ ಶೈಲಿಯಲ್ಲಿಯೇ ವಿವಾಹ ಮಾಡಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಲಿಂಗ ಮದುವೆ ಸಮಾರಂಭದಲ್ಲಿ ಮದುಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರುತ್ತಿರುವ ಮದುವೆ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದು ಕೊಡವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದ್ದು, ಇದರಿಂದ ನಮ್ಮ ಜನಾಂಗಕ್ಕೆ ಅವಮಾನವಾಗಿದೆ ಮತ್ತು ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ ಎಂದು ಇದನ್ನು ಖಂಡಿಸಿದೆ. ಈ ಬಗ್ಗೆ ಅಮೆರಿಕಾ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಕಂಡಕಂಡಲ್ಲಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಬಳಕೆ ಮಾಡುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಹೇಳಿದ್ದು, ಈ ಬಗ್ಗೆ ಈಗಾಗಲೇ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.

“ಭಿನ್ನಮತೀಯರು ಇರುತ್ತಾರೆ ಎಂದು ನಮಗೆ ತಿಳಿದಿತ್ತು. ಆದರೆ ನಾವು ಹುಟ್ಟಿದ ದಿನದಿಂದ ನಮ್ಮನ್ನು ಸಮಾಜ ಅಕ್ಷರಶಃ ಸ್ವೀಕರಿಸಲಿ ಎಂದು ಹೋರಾಡುತ್ತಿದ್ದೇವೆ. ಬದುಕಲು ಹೋರಾಡುತ್ತಿದ್ದೇವೆ. ಅದಾಗ್ಯೂ, ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಈ ಸಂಭ್ರಮವನ್ನು ನಾವು ಸಂತೋಷದಿಂದ ಆಚರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು ಎಂಬುದನ್ನು ಅರ್ಥಮಾಡಿಕೊಳ್ಳಲು ಸಕಾರಾತ್ಮಕ ಸಂವಾದದಲ್ಲಿ ತೊಡಗುತ್ತೇವೆ” ಶರತ್ ಪೊನ್ನಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ಶರತ್​ ಪೊನ್ನಪ್ಪ ಮೈಸೂರಿನ ರಾಮಕೃಷ್ಣಾಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 13 ವರ್ಷಗಳ ಹಿಂದೆ ಅಮೇರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್​ ಇಂಜಿನಿಯರ್​ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.

2018 ರಲ್ಲಿ ಭಾರತ ದಂಡ ಸಂಹಿತೆಯ ಸಕ್ಷನ್ 377 ನ್ನು ಭಾರತದ ನ್ಯಾಯಾಲಯವು ರದ್ದುಗೊಳಿಸಿತ್ತು. ಈ ಸೆಕ್ಷನ್ ಅಸಹಜ ಲೈಂಗಿಕ ಕ್ರಿಯೆಯನ್ನು ನಿಷೇದಿಸಿತ್ತು. ಹಾಗಾಗಿ ಸಲಿಂಗ ವಿವಾಹಗಳಿಗೆ ಭಾರತದಲ್ಲಿ ಅನುಮತಿಯಿರಲಿಲ್ಲ. ಆದರೆ ಈಗ ಈ ಸೆಕ್ಷನ್‌ ಅನ್ನು ತೆಗೆದುಹಾಕಿದ್ದರೂ, ಭಾರತದಲ್ಲಿ ಸಲಿಂಗ ವಿವಾಹಗಳನ್ನು ಇನ್ನೂ ಕಾನೂನುಬದ್ದವಾಗಿ ಗುರುತಿಸಲಾಗಿಲ್ಲ.


ಇದನ್ನೂ ಓದಿ: ಭಾರತೀಯ ಗಣತಂತ್ರದ ಬಹುದೊಡ್ಡ ಹಬ್ಬಕ್ಕೆ ಸ್ತ್ರೀ ದ್ವೇಷಿ, ಮತಾಂಧ, ಸರ್ವಾಧಿಕಾರಿ ಪ್ರವೃತ್ತಿಯ ಮುಖ್ಯ ಅತಿಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...