Homeಮುಖಪುಟಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು- ಶರತ್ ಪೊನ್ನಪ್ಪ

- Advertisement -
- Advertisement -

ಕರ್ನಾಟಕದ ಕೊಡವ ಜನಾಂಗದ ಯುವಕ ಮತ್ತು ಉತ್ತರ ಭಾರತ ಮೂಲದ ಮತ್ತೊಬ್ಬ ಯುವಕ ಸೇರಿ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸಲಿಂಗ ವಿವಾಹ ಮಾಡಿಕೊಂಡಿದ್ದು, ವಿವಾಹಿತನನ್ನು ತಮ್ಮ ಸಮಾಜದಿಂದ ಹೊರಗಿಡಲು ಕೊಡವ ಸಮಾಜ ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ಸಲಿಂಗ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಸಾಲಿಗೆ ಈಗ ಈ ಘಟನೆಯೂ ಕೂಡ ಸೇರ್ಪಡೆಯಾಗಿದ್ದು, ಭಾರತೀಯ ಶೈಲಿಯಲ್ಲೇ ವಿವಾಹವಾಗಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನು ವಿರೋಧಿಸಿ ಕೊಡವ ಸಮಾಜವು, ಶರತ್ ಪೊನ್ನಪ್ಪ ಎಂಬ ಕನ್ನಡಿಗನಿಗೆ ಬಹಿಷ್ಕಾರ ಹಾಕಲು ಮುಂದಾಗಿದೆ. ಶರತ್ ಪೊನ್ನಪ್ಪ ಮೂಲತಃ ಕೊಡಗಿನ ಸಮುದಾಯಕ್ಕೆ ಸೇರಿದ್ದು, ಈತ ಮನೆಯನ್ನು ಬಿಟ್ಟು ವಿದೇಶದಲ್ಲಿ ನೆಲೆಸಿ ಹಲವು ವರ್ಷಗಳಾಗಿವೆ. ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಯುವಕನೊಟ್ಟಿಗೆ ಪರಿಚಯವಾಗಿ, ಪ್ರೀತಿ ಬೆಳೆದು, ಇದೇ ಸೆ.26ರಂದು ಕೊಡಗಿನ ಸಂಪ್ರದಾಯದ ಶೈಲಿಯಲ್ಲಿಯೇ ವಿವಾಹ ಮಾಡಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಲಿಂಗ ಮದುವೆ ಸಮಾರಂಭದಲ್ಲಿ ಮದುಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರುತ್ತಿರುವ ಮದುವೆ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದು ಕೊಡವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದ್ದು, ಇದರಿಂದ ನಮ್ಮ ಜನಾಂಗಕ್ಕೆ ಅವಮಾನವಾಗಿದೆ ಮತ್ತು ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ ಎಂದು ಇದನ್ನು ಖಂಡಿಸಿದೆ. ಈ ಬಗ್ಗೆ ಅಮೆರಿಕಾ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಕಂಡಕಂಡಲ್ಲಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಬಳಕೆ ಮಾಡುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಹೇಳಿದ್ದು, ಈ ಬಗ್ಗೆ ಈಗಾಗಲೇ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.

“ಭಿನ್ನಮತೀಯರು ಇರುತ್ತಾರೆ ಎಂದು ನಮಗೆ ತಿಳಿದಿತ್ತು. ಆದರೆ ನಾವು ಹುಟ್ಟಿದ ದಿನದಿಂದ ನಮ್ಮನ್ನು ಸಮಾಜ ಅಕ್ಷರಶಃ ಸ್ವೀಕರಿಸಲಿ ಎಂದು ಹೋರಾಡುತ್ತಿದ್ದೇವೆ. ಬದುಕಲು ಹೋರಾಡುತ್ತಿದ್ದೇವೆ. ಅದಾಗ್ಯೂ, ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಈ ಸಂಭ್ರಮವನ್ನು ನಾವು ಸಂತೋಷದಿಂದ ಆಚರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು ಎಂಬುದನ್ನು ಅರ್ಥಮಾಡಿಕೊಳ್ಳಲು ಸಕಾರಾತ್ಮಕ ಸಂವಾದದಲ್ಲಿ ತೊಡಗುತ್ತೇವೆ” ಶರತ್ ಪೊನ್ನಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ಶರತ್​ ಪೊನ್ನಪ್ಪ ಮೈಸೂರಿನ ರಾಮಕೃಷ್ಣಾಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 13 ವರ್ಷಗಳ ಹಿಂದೆ ಅಮೇರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್​ ಇಂಜಿನಿಯರ್​ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.

2018 ರಲ್ಲಿ ಭಾರತ ದಂಡ ಸಂಹಿತೆಯ ಸಕ್ಷನ್ 377 ನ್ನು ಭಾರತದ ನ್ಯಾಯಾಲಯವು ರದ್ದುಗೊಳಿಸಿತ್ತು. ಈ ಸೆಕ್ಷನ್ ಅಸಹಜ ಲೈಂಗಿಕ ಕ್ರಿಯೆಯನ್ನು ನಿಷೇದಿಸಿತ್ತು. ಹಾಗಾಗಿ ಸಲಿಂಗ ವಿವಾಹಗಳಿಗೆ ಭಾರತದಲ್ಲಿ ಅನುಮತಿಯಿರಲಿಲ್ಲ. ಆದರೆ ಈಗ ಈ ಸೆಕ್ಷನ್‌ ಅನ್ನು ತೆಗೆದುಹಾಕಿದ್ದರೂ, ಭಾರತದಲ್ಲಿ ಸಲಿಂಗ ವಿವಾಹಗಳನ್ನು ಇನ್ನೂ ಕಾನೂನುಬದ್ದವಾಗಿ ಗುರುತಿಸಲಾಗಿಲ್ಲ.


ಇದನ್ನೂ ಓದಿ: ಭಾರತೀಯ ಗಣತಂತ್ರದ ಬಹುದೊಡ್ಡ ಹಬ್ಬಕ್ಕೆ ಸ್ತ್ರೀ ದ್ವೇಷಿ, ಮತಾಂಧ, ಸರ್ವಾಧಿಕಾರಿ ಪ್ರವೃತ್ತಿಯ ಮುಖ್ಯ ಅತಿಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...