Homeಮುಖಪುಟಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು- ಶರತ್ ಪೊನ್ನಪ್ಪ

- Advertisement -
- Advertisement -

ಕರ್ನಾಟಕದ ಕೊಡವ ಜನಾಂಗದ ಯುವಕ ಮತ್ತು ಉತ್ತರ ಭಾರತ ಮೂಲದ ಮತ್ತೊಬ್ಬ ಯುವಕ ಸೇರಿ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸಲಿಂಗ ವಿವಾಹ ಮಾಡಿಕೊಂಡಿದ್ದು, ವಿವಾಹಿತನನ್ನು ತಮ್ಮ ಸಮಾಜದಿಂದ ಹೊರಗಿಡಲು ಕೊಡವ ಸಮಾಜ ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ಸಲಿಂಗ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಸಾಲಿಗೆ ಈಗ ಈ ಘಟನೆಯೂ ಕೂಡ ಸೇರ್ಪಡೆಯಾಗಿದ್ದು, ಭಾರತೀಯ ಶೈಲಿಯಲ್ಲೇ ವಿವಾಹವಾಗಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನು ವಿರೋಧಿಸಿ ಕೊಡವ ಸಮಾಜವು, ಶರತ್ ಪೊನ್ನಪ್ಪ ಎಂಬ ಕನ್ನಡಿಗನಿಗೆ ಬಹಿಷ್ಕಾರ ಹಾಕಲು ಮುಂದಾಗಿದೆ. ಶರತ್ ಪೊನ್ನಪ್ಪ ಮೂಲತಃ ಕೊಡಗಿನ ಸಮುದಾಯಕ್ಕೆ ಸೇರಿದ್ದು, ಈತ ಮನೆಯನ್ನು ಬಿಟ್ಟು ವಿದೇಶದಲ್ಲಿ ನೆಲೆಸಿ ಹಲವು ವರ್ಷಗಳಾಗಿವೆ. ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಯುವಕನೊಟ್ಟಿಗೆ ಪರಿಚಯವಾಗಿ, ಪ್ರೀತಿ ಬೆಳೆದು, ಇದೇ ಸೆ.26ರಂದು ಕೊಡಗಿನ ಸಂಪ್ರದಾಯದ ಶೈಲಿಯಲ್ಲಿಯೇ ವಿವಾಹ ಮಾಡಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಲಿಂಗ ಮದುವೆ ಸಮಾರಂಭದಲ್ಲಿ ಮದುಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರುತ್ತಿರುವ ಮದುವೆ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದು ಕೊಡವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದ್ದು, ಇದರಿಂದ ನಮ್ಮ ಜನಾಂಗಕ್ಕೆ ಅವಮಾನವಾಗಿದೆ ಮತ್ತು ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ ಎಂದು ಇದನ್ನು ಖಂಡಿಸಿದೆ. ಈ ಬಗ್ಗೆ ಅಮೆರಿಕಾ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಕಂಡಕಂಡಲ್ಲಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಬಳಕೆ ಮಾಡುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಹೇಳಿದ್ದು, ಈ ಬಗ್ಗೆ ಈಗಾಗಲೇ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.

“ಭಿನ್ನಮತೀಯರು ಇರುತ್ತಾರೆ ಎಂದು ನಮಗೆ ತಿಳಿದಿತ್ತು. ಆದರೆ ನಾವು ಹುಟ್ಟಿದ ದಿನದಿಂದ ನಮ್ಮನ್ನು ಸಮಾಜ ಅಕ್ಷರಶಃ ಸ್ವೀಕರಿಸಲಿ ಎಂದು ಹೋರಾಡುತ್ತಿದ್ದೇವೆ. ಬದುಕಲು ಹೋರಾಡುತ್ತಿದ್ದೇವೆ. ಅದಾಗ್ಯೂ, ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಈ ಸಂಭ್ರಮವನ್ನು ನಾವು ಸಂತೋಷದಿಂದ ಆಚರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು ಎಂಬುದನ್ನು ಅರ್ಥಮಾಡಿಕೊಳ್ಳಲು ಸಕಾರಾತ್ಮಕ ಸಂವಾದದಲ್ಲಿ ತೊಡಗುತ್ತೇವೆ” ಶರತ್ ಪೊನ್ನಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ಶರತ್​ ಪೊನ್ನಪ್ಪ ಮೈಸೂರಿನ ರಾಮಕೃಷ್ಣಾಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 13 ವರ್ಷಗಳ ಹಿಂದೆ ಅಮೇರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್​ ಇಂಜಿನಿಯರ್​ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.

2018 ರಲ್ಲಿ ಭಾರತ ದಂಡ ಸಂಹಿತೆಯ ಸಕ್ಷನ್ 377 ನ್ನು ಭಾರತದ ನ್ಯಾಯಾಲಯವು ರದ್ದುಗೊಳಿಸಿತ್ತು. ಈ ಸೆಕ್ಷನ್ ಅಸಹಜ ಲೈಂಗಿಕ ಕ್ರಿಯೆಯನ್ನು ನಿಷೇದಿಸಿತ್ತು. ಹಾಗಾಗಿ ಸಲಿಂಗ ವಿವಾಹಗಳಿಗೆ ಭಾರತದಲ್ಲಿ ಅನುಮತಿಯಿರಲಿಲ್ಲ. ಆದರೆ ಈಗ ಈ ಸೆಕ್ಷನ್‌ ಅನ್ನು ತೆಗೆದುಹಾಕಿದ್ದರೂ, ಭಾರತದಲ್ಲಿ ಸಲಿಂಗ ವಿವಾಹಗಳನ್ನು ಇನ್ನೂ ಕಾನೂನುಬದ್ದವಾಗಿ ಗುರುತಿಸಲಾಗಿಲ್ಲ.


ಇದನ್ನೂ ಓದಿ: ಭಾರತೀಯ ಗಣತಂತ್ರದ ಬಹುದೊಡ್ಡ ಹಬ್ಬಕ್ಕೆ ಸ್ತ್ರೀ ದ್ವೇಷಿ, ಮತಾಂಧ, ಸರ್ವಾಧಿಕಾರಿ ಪ್ರವೃತ್ತಿಯ ಮುಖ್ಯ ಅತಿಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...