Homeಮುಖಪುಟಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ಸಲಿಂಗ ವಿವಾಹ: ಕೊಡಗು ಮೂಲದ ಯುವಕನನ್ನು ಬಹಿಷ್ಕರಿಸಿದ ಕೊಡವ ಸಮಾಜ!

ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು- ಶರತ್ ಪೊನ್ನಪ್ಪ

- Advertisement -
- Advertisement -

ಕರ್ನಾಟಕದ ಕೊಡವ ಜನಾಂಗದ ಯುವಕ ಮತ್ತು ಉತ್ತರ ಭಾರತ ಮೂಲದ ಮತ್ತೊಬ್ಬ ಯುವಕ ಸೇರಿ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಸಲಿಂಗ ವಿವಾಹ ಮಾಡಿಕೊಂಡಿದ್ದು, ವಿವಾಹಿತನನ್ನು ತಮ್ಮ ಸಮಾಜದಿಂದ ಹೊರಗಿಡಲು ಕೊಡವ ಸಮಾಜ ಮುಂದಾಗಿದೆ.

ಇತ್ತೀಚಿನ ದಿನಗಳಲ್ಲಿ ಸಲಿಂಗ ವಿವಾಹಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಈ ಸಾಲಿಗೆ ಈಗ ಈ ಘಟನೆಯೂ ಕೂಡ ಸೇರ್ಪಡೆಯಾಗಿದ್ದು, ಭಾರತೀಯ ಶೈಲಿಯಲ್ಲೇ ವಿವಾಹವಾಗಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಸಲಿಂಗ ವಿವಾಹವನ್ನು ನಮ್ಮ ಕಾನೂನು ಮತ್ತು ಸಮಾಜ ಒಪ್ಪುವುದಿಲ್ಲ: ಕೇಂದ್ರ ಸರ್ಕಾರ

ಇದನ್ನು ವಿರೋಧಿಸಿ ಕೊಡವ ಸಮಾಜವು, ಶರತ್ ಪೊನ್ನಪ್ಪ ಎಂಬ ಕನ್ನಡಿಗನಿಗೆ ಬಹಿಷ್ಕಾರ ಹಾಕಲು ಮುಂದಾಗಿದೆ. ಶರತ್ ಪೊನ್ನಪ್ಪ ಮೂಲತಃ ಕೊಡಗಿನ ಸಮುದಾಯಕ್ಕೆ ಸೇರಿದ್ದು, ಈತ ಮನೆಯನ್ನು ಬಿಟ್ಟು ವಿದೇಶದಲ್ಲಿ ನೆಲೆಸಿ ಹಲವು ವರ್ಷಗಳಾಗಿವೆ. ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬ ಯುವಕನೊಟ್ಟಿಗೆ ಪರಿಚಯವಾಗಿ, ಪ್ರೀತಿ ಬೆಳೆದು, ಇದೇ ಸೆ.26ರಂದು ಕೊಡಗಿನ ಸಂಪ್ರದಾಯದ ಶೈಲಿಯಲ್ಲಿಯೇ ವಿವಾಹ ಮಾಡಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಲಿಂಗ ಮದುವೆ ಸಮಾರಂಭದಲ್ಲಿ ಮದುಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರುತ್ತಿರುವ ಮದುವೆ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದು ಕೊಡವರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದ್ದು, ಇದರಿಂದ ನಮ್ಮ ಜನಾಂಗಕ್ಕೆ ಅವಮಾನವಾಗಿದೆ ಮತ್ತು ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ ಎಂದು ಇದನ್ನು ಖಂಡಿಸಿದೆ. ಈ ಬಗ್ಗೆ ಅಮೆರಿಕಾ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಕಂಡಕಂಡಲ್ಲಿ ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಬಳಕೆ ಮಾಡುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಲ್ಜಿಬಿಟಿಕ್ಯು ಸಮುದಾಯಕ್ಕೆ ವಿಶ್ವದಾದ್ಯಂತ ಬೆಂಬಲ ಹೆಚ್ಚಾಗುತ್ತಿದೆ: ಸಮೀಕ್ಷೆ

ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್. ದೇವಯ್ಯ ಹೇಳಿದ್ದು, ಈ ಬಗ್ಗೆ ಈಗಾಗಲೇ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.

“ಭಿನ್ನಮತೀಯರು ಇರುತ್ತಾರೆ ಎಂದು ನಮಗೆ ತಿಳಿದಿತ್ತು. ಆದರೆ ನಾವು ಹುಟ್ಟಿದ ದಿನದಿಂದ ನಮ್ಮನ್ನು ಸಮಾಜ ಅಕ್ಷರಶಃ ಸ್ವೀಕರಿಸಲಿ ಎಂದು ಹೋರಾಡುತ್ತಿದ್ದೇವೆ. ಬದುಕಲು ಹೋರಾಡುತ್ತಿದ್ದೇವೆ. ಅದಾಗ್ಯೂ, ನಾವು ಹೆಮ್ಮೆಯಿಂದ ನಮ್ಮ ವಾಸ್ತವದಲ್ಲಿ ಜೀವಿಸಲು ನಿರ್ಧರಿಸಿದ್ದೇವೆ. ಈ ಸಂಭ್ರಮವನ್ನು ನಾವು ಸಂತೋಷದಿಂದ ಆಚರಿಸಿದ್ದೇವೆ. ಭಿನ್ನಮತೀಯರು ಇದನ್ನು ಅರ್ಥಮಾಡಿಕೊಳ್ಳಲು ಪ್ರೋತ್ಸಾಹಿಸುತ್ತೇವೆ. ಎಲ್ಲಾ ಮಾನವರು ಸಮಾನವಾಗಿ ಸೃಷ್ಟಿಯಾಗಿದ್ದೇವೆ. ಜೊತೆಗೆ ಎಲ್ಲರೂ ಗೌರವ ಮತ್ತು ಪ್ರೀತಿಗೆ ಅರ್ಹರು ಎಂಬುದನ್ನು ಅರ್ಥಮಾಡಿಕೊಳ್ಳಲು ಸಕಾರಾತ್ಮಕ ಸಂವಾದದಲ್ಲಿ ತೊಡಗುತ್ತೇವೆ” ಶರತ್ ಪೊನ್ನಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ಶರತ್​ ಪೊನ್ನಪ್ಪ ಮೈಸೂರಿನ ರಾಮಕೃಷ್ಣಾಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 13 ವರ್ಷಗಳ ಹಿಂದೆ ಅಮೇರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್​ ಇಂಜಿನಿಯರ್​ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರು. ಪ್ರಸ್ತುತ ಮೈಸೂರಿನಲ್ಲಿ ನೆಲೆಸಿದ್ದಾರೆ.

2018 ರಲ್ಲಿ ಭಾರತ ದಂಡ ಸಂಹಿತೆಯ ಸಕ್ಷನ್ 377 ನ್ನು ಭಾರತದ ನ್ಯಾಯಾಲಯವು ರದ್ದುಗೊಳಿಸಿತ್ತು. ಈ ಸೆಕ್ಷನ್ ಅಸಹಜ ಲೈಂಗಿಕ ಕ್ರಿಯೆಯನ್ನು ನಿಷೇದಿಸಿತ್ತು. ಹಾಗಾಗಿ ಸಲಿಂಗ ವಿವಾಹಗಳಿಗೆ ಭಾರತದಲ್ಲಿ ಅನುಮತಿಯಿರಲಿಲ್ಲ. ಆದರೆ ಈಗ ಈ ಸೆಕ್ಷನ್‌ ಅನ್ನು ತೆಗೆದುಹಾಕಿದ್ದರೂ, ಭಾರತದಲ್ಲಿ ಸಲಿಂಗ ವಿವಾಹಗಳನ್ನು ಇನ್ನೂ ಕಾನೂನುಬದ್ದವಾಗಿ ಗುರುತಿಸಲಾಗಿಲ್ಲ.


ಇದನ್ನೂ ಓದಿ: ಭಾರತೀಯ ಗಣತಂತ್ರದ ಬಹುದೊಡ್ಡ ಹಬ್ಬಕ್ಕೆ ಸ್ತ್ರೀ ದ್ವೇಷಿ, ಮತಾಂಧ, ಸರ್ವಾಧಿಕಾರಿ ಪ್ರವೃತ್ತಿಯ ಮುಖ್ಯ ಅತಿಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...