Homeಅಂತರಾಷ್ಟ್ರೀಯಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

ಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಗಾಝಾದಲ್ಲಿ ಕನಿಷ್ಠ ಎಂಟು ಜನರನ್ನು ಹತ್ಯೆಗೈದಿದೆ. ಹಸಿವು, ಅಪೌಷ್ಠಿಕತೆಯಿಂದ ಸಾವೀಗೀಡಾದವರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಪೈಕಿ 100 ಮಂದಿ ಮಕ್ಕಳು ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾ ನಗರವನ್ನು ವಶಪಡಿಸಿಕೊಳ್ಳುವ ಮತ್ತು ಸುಮಾರು ಒಂದು ಮಿಲಿಯನ್ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವ ಇಸ್ರೇಲ್‌ನ ಯೋಜನೆಯ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಪರೂಪದ ವಾರಾಂತ್ಯದ ಅಧಿವೇಶನವನ್ನು ನಡೆಸಲಿದೆ.

ಈ ನಡುವೆ ಬ್ಯೂನಸ್ ಐರಿಸ್‌ನಿಂದ ಲಂಡನ್ ಮತ್ತು ಇಸ್ತಾನ್‌ಬುಲ್‌ವರೆಗೆ ಪ್ರಪಂಚದಾದ್ಯಂತದ ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಶ್ವ ನಾಯಕರು ಕ್ರಮ ಕೈಗೊಳ್ಳುವಂತೆ ಮತ್ತು ಗಾಝಾ ಮೇಲಿನ ಇಸ್ರೇಲ್‌ನ ಆಕ್ರಮಣವನ್ನು ಕೊನೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮತ್ತೊಂದೆಡೆ, ಇಸ್ರೇಲ್ ಸೇನೆಯು ಈ ವರ್ಷದ ಆರಂಭದಿಂದ ಆಕ್ರಮಿತ ಪಶ್ಚಿಮ ದಂಡೆಯ ಉತ್ತರ ಭಾಗಗಳಲ್ಲಿನ ಹಲವಾರು ನಿರಾಶ್ರಿತರ ಶಿಬಿರಗಳ ಮೇಲೆ ತೀವ್ರವಾದ ದಾಳಿ ನಡೆಸುತ್ತಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಹತ್ತಾರು ಸಾವಿರ ಜನರು ಸ್ಥಳಾಂತರಗೊಂಡಿದ್ದಾರೆ. ದಾಳಿ ಇನ್ನೂ ಮುಂದುವರಿಯುತ್ತಿದೆ.

ಈ ಅಮಾನವೀಯ ಕೃತ್ಯವನ್ನು ಭದ್ರತಾ ಯಶಸ್ಸು ಎಂದು ಹೇಳಿಕೊಂಡಿರುವ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, “ಜೆನಿನ್, ತುಲ್ಕರೆಮ್ ಮತ್ತು ನೂರ್ ಶಮ್ಸ್ ಸೇರಿದಂತೆ ಪಶ್ಚಿಮ ದಂಡೆಯ ನಿರಾಶ್ರಿತರ ಶಿಬಿರಗಳಲ್ಲಿ ನಮ್ಮ ಮಿಲಿಟರಿ ಕಾರ್ಯಾಚರಣೆಯು ಸಕ್ರಿಯವಾಗಿರಲಿದೆ ಎಂದಿದ್ದಾರೆ.

ಇನ್ನೊಂದೆಡೆ ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ರದ್ದುಗೊಳಿಸುವಂತೆ ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ತೆಗೆದು ಹಾಕಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುವಂತೆ ನಾನು ಪ್ರಧಾನಿ ನೆತನ್ಯಾಹು ಅವರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಇದು ಭಯೋತ್ಪಾದಕ ಅಬು ಮಜೆನ್‌ನ ‘ಪ್ಯಾಲೆಸ್ತೀನ್ ರಾಷ್ಟ್ರದ ಕಲ್ಪನೆಗಳಿಗೆ ನಮ್ಮ ಪ್ರತಿಕ್ರಿಯೆಯಾಗಿರಬೇಕು” ಎಂದು ಹೇಳಿದ್ದಾರೆ.

ಅಲ್ಟ್ರಾನ್ಯಾಷನಲಿಸ್ಟ್ ಯಹೂದಿ ಪವರ್ ಪಾರ್ಟಿಯ ಮುಖ್ಯಸ್ಥರಾಗಿರುವ ಬೆನ್-ಗ್ವಿರ್, ಈ ಹಿಂದೆ ಗಾಝಾದ ಜನಸಂಖ್ಯೆರ ‘ಸ್ವಯಂಪ್ರೇರಿತ ವಲಸೆಗೆ ಕರೆ ನೀಡಿದ್ದರು.

ಅಕ್ಟೋಬರ್ 7, 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಕನಿಷ್ಠ 61,369 ಜನರು ಸಾವನ್ನಪ್ಪಿದ್ದಾರೆ ಮತ್ತು 152,850 ಜನರು ಗಾಯಗೊಂಡಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಲಂಡನ್‌ನಲ್ಲಿ ನಿಷೇಧಿಸಲ್ಪಟ್ಟ  ‘ಪ್ಯಾಲೆಸ್ಟೀನ್ ಆಕ್ಷನ್’ ಗುಂಪಿಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ: 466 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...