Homeಅಂತರಾಷ್ಟ್ರೀಯಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

ಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಗಾಝಾದಲ್ಲಿ ಕನಿಷ್ಠ ಎಂಟು ಜನರನ್ನು ಹತ್ಯೆಗೈದಿದೆ. ಹಸಿವು, ಅಪೌಷ್ಠಿಕತೆಯಿಂದ ಸಾವೀಗೀಡಾದವರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಪೈಕಿ 100 ಮಂದಿ ಮಕ್ಕಳು ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾ ನಗರವನ್ನು ವಶಪಡಿಸಿಕೊಳ್ಳುವ ಮತ್ತು ಸುಮಾರು ಒಂದು ಮಿಲಿಯನ್ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವ ಇಸ್ರೇಲ್‌ನ ಯೋಜನೆಯ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಪರೂಪದ ವಾರಾಂತ್ಯದ ಅಧಿವೇಶನವನ್ನು ನಡೆಸಲಿದೆ.

ಈ ನಡುವೆ ಬ್ಯೂನಸ್ ಐರಿಸ್‌ನಿಂದ ಲಂಡನ್ ಮತ್ತು ಇಸ್ತಾನ್‌ಬುಲ್‌ವರೆಗೆ ಪ್ರಪಂಚದಾದ್ಯಂತದ ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಶ್ವ ನಾಯಕರು ಕ್ರಮ ಕೈಗೊಳ್ಳುವಂತೆ ಮತ್ತು ಗಾಝಾ ಮೇಲಿನ ಇಸ್ರೇಲ್‌ನ ಆಕ್ರಮಣವನ್ನು ಕೊನೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮತ್ತೊಂದೆಡೆ, ಇಸ್ರೇಲ್ ಸೇನೆಯು ಈ ವರ್ಷದ ಆರಂಭದಿಂದ ಆಕ್ರಮಿತ ಪಶ್ಚಿಮ ದಂಡೆಯ ಉತ್ತರ ಭಾಗಗಳಲ್ಲಿನ ಹಲವಾರು ನಿರಾಶ್ರಿತರ ಶಿಬಿರಗಳ ಮೇಲೆ ತೀವ್ರವಾದ ದಾಳಿ ನಡೆಸುತ್ತಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಹತ್ತಾರು ಸಾವಿರ ಜನರು ಸ್ಥಳಾಂತರಗೊಂಡಿದ್ದಾರೆ. ದಾಳಿ ಇನ್ನೂ ಮುಂದುವರಿಯುತ್ತಿದೆ.

ಈ ಅಮಾನವೀಯ ಕೃತ್ಯವನ್ನು ಭದ್ರತಾ ಯಶಸ್ಸು ಎಂದು ಹೇಳಿಕೊಂಡಿರುವ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, “ಜೆನಿನ್, ತುಲ್ಕರೆಮ್ ಮತ್ತು ನೂರ್ ಶಮ್ಸ್ ಸೇರಿದಂತೆ ಪಶ್ಚಿಮ ದಂಡೆಯ ನಿರಾಶ್ರಿತರ ಶಿಬಿರಗಳಲ್ಲಿ ನಮ್ಮ ಮಿಲಿಟರಿ ಕಾರ್ಯಾಚರಣೆಯು ಸಕ್ರಿಯವಾಗಿರಲಿದೆ ಎಂದಿದ್ದಾರೆ.

ಇನ್ನೊಂದೆಡೆ ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ರದ್ದುಗೊಳಿಸುವಂತೆ ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ತೆಗೆದು ಹಾಕಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುವಂತೆ ನಾನು ಪ್ರಧಾನಿ ನೆತನ್ಯಾಹು ಅವರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಇದು ಭಯೋತ್ಪಾದಕ ಅಬು ಮಜೆನ್‌ನ ‘ಪ್ಯಾಲೆಸ್ತೀನ್ ರಾಷ್ಟ್ರದ ಕಲ್ಪನೆಗಳಿಗೆ ನಮ್ಮ ಪ್ರತಿಕ್ರಿಯೆಯಾಗಿರಬೇಕು” ಎಂದು ಹೇಳಿದ್ದಾರೆ.

ಅಲ್ಟ್ರಾನ್ಯಾಷನಲಿಸ್ಟ್ ಯಹೂದಿ ಪವರ್ ಪಾರ್ಟಿಯ ಮುಖ್ಯಸ್ಥರಾಗಿರುವ ಬೆನ್-ಗ್ವಿರ್, ಈ ಹಿಂದೆ ಗಾಝಾದ ಜನಸಂಖ್ಯೆರ ‘ಸ್ವಯಂಪ್ರೇರಿತ ವಲಸೆಗೆ ಕರೆ ನೀಡಿದ್ದರು.

ಅಕ್ಟೋಬರ್ 7, 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಕನಿಷ್ಠ 61,369 ಜನರು ಸಾವನ್ನಪ್ಪಿದ್ದಾರೆ ಮತ್ತು 152,850 ಜನರು ಗಾಯಗೊಂಡಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಲಂಡನ್‌ನಲ್ಲಿ ನಿಷೇಧಿಸಲ್ಪಟ್ಟ  ‘ಪ್ಯಾಲೆಸ್ಟೀನ್ ಆಕ್ಷನ್’ ಗುಂಪಿಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ: 466 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...