Homeಅಂತರಾಷ್ಟ್ರೀಯಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

ಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಗಾಝಾದಲ್ಲಿ ಕನಿಷ್ಠ ಎಂಟು ಜನರನ್ನು ಹತ್ಯೆಗೈದಿದೆ. ಹಸಿವು, ಅಪೌಷ್ಠಿಕತೆಯಿಂದ ಸಾವೀಗೀಡಾದವರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಪೈಕಿ 100 ಮಂದಿ ಮಕ್ಕಳು ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾ ನಗರವನ್ನು ವಶಪಡಿಸಿಕೊಳ್ಳುವ ಮತ್ತು ಸುಮಾರು ಒಂದು ಮಿಲಿಯನ್ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವ ಇಸ್ರೇಲ್‌ನ ಯೋಜನೆಯ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಪರೂಪದ ವಾರಾಂತ್ಯದ ಅಧಿವೇಶನವನ್ನು ನಡೆಸಲಿದೆ.

ಈ ನಡುವೆ ಬ್ಯೂನಸ್ ಐರಿಸ್‌ನಿಂದ ಲಂಡನ್ ಮತ್ತು ಇಸ್ತಾನ್‌ಬುಲ್‌ವರೆಗೆ ಪ್ರಪಂಚದಾದ್ಯಂತದ ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಶ್ವ ನಾಯಕರು ಕ್ರಮ ಕೈಗೊಳ್ಳುವಂತೆ ಮತ್ತು ಗಾಝಾ ಮೇಲಿನ ಇಸ್ರೇಲ್‌ನ ಆಕ್ರಮಣವನ್ನು ಕೊನೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮತ್ತೊಂದೆಡೆ, ಇಸ್ರೇಲ್ ಸೇನೆಯು ಈ ವರ್ಷದ ಆರಂಭದಿಂದ ಆಕ್ರಮಿತ ಪಶ್ಚಿಮ ದಂಡೆಯ ಉತ್ತರ ಭಾಗಗಳಲ್ಲಿನ ಹಲವಾರು ನಿರಾಶ್ರಿತರ ಶಿಬಿರಗಳ ಮೇಲೆ ತೀವ್ರವಾದ ದಾಳಿ ನಡೆಸುತ್ತಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಹತ್ತಾರು ಸಾವಿರ ಜನರು ಸ್ಥಳಾಂತರಗೊಂಡಿದ್ದಾರೆ. ದಾಳಿ ಇನ್ನೂ ಮುಂದುವರಿಯುತ್ತಿದೆ.

ಈ ಅಮಾನವೀಯ ಕೃತ್ಯವನ್ನು ಭದ್ರತಾ ಯಶಸ್ಸು ಎಂದು ಹೇಳಿಕೊಂಡಿರುವ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, “ಜೆನಿನ್, ತುಲ್ಕರೆಮ್ ಮತ್ತು ನೂರ್ ಶಮ್ಸ್ ಸೇರಿದಂತೆ ಪಶ್ಚಿಮ ದಂಡೆಯ ನಿರಾಶ್ರಿತರ ಶಿಬಿರಗಳಲ್ಲಿ ನಮ್ಮ ಮಿಲಿಟರಿ ಕಾರ್ಯಾಚರಣೆಯು ಸಕ್ರಿಯವಾಗಿರಲಿದೆ ಎಂದಿದ್ದಾರೆ.

ಇನ್ನೊಂದೆಡೆ ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ರದ್ದುಗೊಳಿಸುವಂತೆ ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ತೆಗೆದು ಹಾಕಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುವಂತೆ ನಾನು ಪ್ರಧಾನಿ ನೆತನ್ಯಾಹು ಅವರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಇದು ಭಯೋತ್ಪಾದಕ ಅಬು ಮಜೆನ್‌ನ ‘ಪ್ಯಾಲೆಸ್ತೀನ್ ರಾಷ್ಟ್ರದ ಕಲ್ಪನೆಗಳಿಗೆ ನಮ್ಮ ಪ್ರತಿಕ್ರಿಯೆಯಾಗಿರಬೇಕು” ಎಂದು ಹೇಳಿದ್ದಾರೆ.

ಅಲ್ಟ್ರಾನ್ಯಾಷನಲಿಸ್ಟ್ ಯಹೂದಿ ಪವರ್ ಪಾರ್ಟಿಯ ಮುಖ್ಯಸ್ಥರಾಗಿರುವ ಬೆನ್-ಗ್ವಿರ್, ಈ ಹಿಂದೆ ಗಾಝಾದ ಜನಸಂಖ್ಯೆರ ‘ಸ್ವಯಂಪ್ರೇರಿತ ವಲಸೆಗೆ ಕರೆ ನೀಡಿದ್ದರು.

ಅಕ್ಟೋಬರ್ 7, 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಕನಿಷ್ಠ 61,369 ಜನರು ಸಾವನ್ನಪ್ಪಿದ್ದಾರೆ ಮತ್ತು 152,850 ಜನರು ಗಾಯಗೊಂಡಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಲಂಡನ್‌ನಲ್ಲಿ ನಿಷೇಧಿಸಲ್ಪಟ್ಟ  ‘ಪ್ಯಾಲೆಸ್ಟೀನ್ ಆಕ್ಷನ್’ ಗುಂಪಿಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ: 466 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...