Homeಅಂತರಾಷ್ಟ್ರೀಯಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

ಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಗಾಝಾದಲ್ಲಿ ಕನಿಷ್ಠ ಎಂಟು ಜನರನ್ನು ಹತ್ಯೆಗೈದಿದೆ. ಹಸಿವು, ಅಪೌಷ್ಠಿಕತೆಯಿಂದ ಸಾವೀಗೀಡಾದವರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಪೈಕಿ 100 ಮಂದಿ ಮಕ್ಕಳು ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾ ನಗರವನ್ನು ವಶಪಡಿಸಿಕೊಳ್ಳುವ ಮತ್ತು ಸುಮಾರು ಒಂದು ಮಿಲಿಯನ್ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವ ಇಸ್ರೇಲ್‌ನ ಯೋಜನೆಯ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಪರೂಪದ ವಾರಾಂತ್ಯದ ಅಧಿವೇಶನವನ್ನು ನಡೆಸಲಿದೆ.

ಈ ನಡುವೆ ಬ್ಯೂನಸ್ ಐರಿಸ್‌ನಿಂದ ಲಂಡನ್ ಮತ್ತು ಇಸ್ತಾನ್‌ಬುಲ್‌ವರೆಗೆ ಪ್ರಪಂಚದಾದ್ಯಂತದ ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಶ್ವ ನಾಯಕರು ಕ್ರಮ ಕೈಗೊಳ್ಳುವಂತೆ ಮತ್ತು ಗಾಝಾ ಮೇಲಿನ ಇಸ್ರೇಲ್‌ನ ಆಕ್ರಮಣವನ್ನು ಕೊನೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮತ್ತೊಂದೆಡೆ, ಇಸ್ರೇಲ್ ಸೇನೆಯು ಈ ವರ್ಷದ ಆರಂಭದಿಂದ ಆಕ್ರಮಿತ ಪಶ್ಚಿಮ ದಂಡೆಯ ಉತ್ತರ ಭಾಗಗಳಲ್ಲಿನ ಹಲವಾರು ನಿರಾಶ್ರಿತರ ಶಿಬಿರಗಳ ಮೇಲೆ ತೀವ್ರವಾದ ದಾಳಿ ನಡೆಸುತ್ತಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಹತ್ತಾರು ಸಾವಿರ ಜನರು ಸ್ಥಳಾಂತರಗೊಂಡಿದ್ದಾರೆ. ದಾಳಿ ಇನ್ನೂ ಮುಂದುವರಿಯುತ್ತಿದೆ.

ಈ ಅಮಾನವೀಯ ಕೃತ್ಯವನ್ನು ಭದ್ರತಾ ಯಶಸ್ಸು ಎಂದು ಹೇಳಿಕೊಂಡಿರುವ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, “ಜೆನಿನ್, ತುಲ್ಕರೆಮ್ ಮತ್ತು ನೂರ್ ಶಮ್ಸ್ ಸೇರಿದಂತೆ ಪಶ್ಚಿಮ ದಂಡೆಯ ನಿರಾಶ್ರಿತರ ಶಿಬಿರಗಳಲ್ಲಿ ನಮ್ಮ ಮಿಲಿಟರಿ ಕಾರ್ಯಾಚರಣೆಯು ಸಕ್ರಿಯವಾಗಿರಲಿದೆ ಎಂದಿದ್ದಾರೆ.

ಇನ್ನೊಂದೆಡೆ ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ರದ್ದುಗೊಳಿಸುವಂತೆ ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ತೆಗೆದು ಹಾಕಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುವಂತೆ ನಾನು ಪ್ರಧಾನಿ ನೆತನ್ಯಾಹು ಅವರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಇದು ಭಯೋತ್ಪಾದಕ ಅಬು ಮಜೆನ್‌ನ ‘ಪ್ಯಾಲೆಸ್ತೀನ್ ರಾಷ್ಟ್ರದ ಕಲ್ಪನೆಗಳಿಗೆ ನಮ್ಮ ಪ್ರತಿಕ್ರಿಯೆಯಾಗಿರಬೇಕು” ಎಂದು ಹೇಳಿದ್ದಾರೆ.

ಅಲ್ಟ್ರಾನ್ಯಾಷನಲಿಸ್ಟ್ ಯಹೂದಿ ಪವರ್ ಪಾರ್ಟಿಯ ಮುಖ್ಯಸ್ಥರಾಗಿರುವ ಬೆನ್-ಗ್ವಿರ್, ಈ ಹಿಂದೆ ಗಾಝಾದ ಜನಸಂಖ್ಯೆರ ‘ಸ್ವಯಂಪ್ರೇರಿತ ವಲಸೆಗೆ ಕರೆ ನೀಡಿದ್ದರು.

ಅಕ್ಟೋಬರ್ 7, 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಕನಿಷ್ಠ 61,369 ಜನರು ಸಾವನ್ನಪ್ಪಿದ್ದಾರೆ ಮತ್ತು 152,850 ಜನರು ಗಾಯಗೊಂಡಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಲಂಡನ್‌ನಲ್ಲಿ ನಿಷೇಧಿಸಲ್ಪಟ್ಟ  ‘ಪ್ಯಾಲೆಸ್ಟೀನ್ ಆಕ್ಷನ್’ ಗುಂಪಿಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ: 466 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...