Homeಅಂತರಾಷ್ಟ್ರೀಯಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

ಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಗಾಝಾದಲ್ಲಿ ಕನಿಷ್ಠ ಎಂಟು ಜನರನ್ನು ಹತ್ಯೆಗೈದಿದೆ. ಹಸಿವು, ಅಪೌಷ್ಠಿಕತೆಯಿಂದ ಸಾವೀಗೀಡಾದವರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಪೈಕಿ 100 ಮಂದಿ ಮಕ್ಕಳು ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾ ನಗರವನ್ನು ವಶಪಡಿಸಿಕೊಳ್ಳುವ ಮತ್ತು ಸುಮಾರು ಒಂದು ಮಿಲಿಯನ್ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವ ಇಸ್ರೇಲ್‌ನ ಯೋಜನೆಯ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಪರೂಪದ ವಾರಾಂತ್ಯದ ಅಧಿವೇಶನವನ್ನು ನಡೆಸಲಿದೆ.

ಈ ನಡುವೆ ಬ್ಯೂನಸ್ ಐರಿಸ್‌ನಿಂದ ಲಂಡನ್ ಮತ್ತು ಇಸ್ತಾನ್‌ಬುಲ್‌ವರೆಗೆ ಪ್ರಪಂಚದಾದ್ಯಂತದ ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಶ್ವ ನಾಯಕರು ಕ್ರಮ ಕೈಗೊಳ್ಳುವಂತೆ ಮತ್ತು ಗಾಝಾ ಮೇಲಿನ ಇಸ್ರೇಲ್‌ನ ಆಕ್ರಮಣವನ್ನು ಕೊನೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮತ್ತೊಂದೆಡೆ, ಇಸ್ರೇಲ್ ಸೇನೆಯು ಈ ವರ್ಷದ ಆರಂಭದಿಂದ ಆಕ್ರಮಿತ ಪಶ್ಚಿಮ ದಂಡೆಯ ಉತ್ತರ ಭಾಗಗಳಲ್ಲಿನ ಹಲವಾರು ನಿರಾಶ್ರಿತರ ಶಿಬಿರಗಳ ಮೇಲೆ ತೀವ್ರವಾದ ದಾಳಿ ನಡೆಸುತ್ತಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಹತ್ತಾರು ಸಾವಿರ ಜನರು ಸ್ಥಳಾಂತರಗೊಂಡಿದ್ದಾರೆ. ದಾಳಿ ಇನ್ನೂ ಮುಂದುವರಿಯುತ್ತಿದೆ.

ಈ ಅಮಾನವೀಯ ಕೃತ್ಯವನ್ನು ಭದ್ರತಾ ಯಶಸ್ಸು ಎಂದು ಹೇಳಿಕೊಂಡಿರುವ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, “ಜೆನಿನ್, ತುಲ್ಕರೆಮ್ ಮತ್ತು ನೂರ್ ಶಮ್ಸ್ ಸೇರಿದಂತೆ ಪಶ್ಚಿಮ ದಂಡೆಯ ನಿರಾಶ್ರಿತರ ಶಿಬಿರಗಳಲ್ಲಿ ನಮ್ಮ ಮಿಲಿಟರಿ ಕಾರ್ಯಾಚರಣೆಯು ಸಕ್ರಿಯವಾಗಿರಲಿದೆ ಎಂದಿದ್ದಾರೆ.

ಇನ್ನೊಂದೆಡೆ ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ರದ್ದುಗೊಳಿಸುವಂತೆ ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ತೆಗೆದು ಹಾಕಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುವಂತೆ ನಾನು ಪ್ರಧಾನಿ ನೆತನ್ಯಾಹು ಅವರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಇದು ಭಯೋತ್ಪಾದಕ ಅಬು ಮಜೆನ್‌ನ ‘ಪ್ಯಾಲೆಸ್ತೀನ್ ರಾಷ್ಟ್ರದ ಕಲ್ಪನೆಗಳಿಗೆ ನಮ್ಮ ಪ್ರತಿಕ್ರಿಯೆಯಾಗಿರಬೇಕು” ಎಂದು ಹೇಳಿದ್ದಾರೆ.

ಅಲ್ಟ್ರಾನ್ಯಾಷನಲಿಸ್ಟ್ ಯಹೂದಿ ಪವರ್ ಪಾರ್ಟಿಯ ಮುಖ್ಯಸ್ಥರಾಗಿರುವ ಬೆನ್-ಗ್ವಿರ್, ಈ ಹಿಂದೆ ಗಾಝಾದ ಜನಸಂಖ್ಯೆರ ‘ಸ್ವಯಂಪ್ರೇರಿತ ವಲಸೆಗೆ ಕರೆ ನೀಡಿದ್ದರು.

ಅಕ್ಟೋಬರ್ 7, 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಕನಿಷ್ಠ 61,369 ಜನರು ಸಾವನ್ನಪ್ಪಿದ್ದಾರೆ ಮತ್ತು 152,850 ಜನರು ಗಾಯಗೊಂಡಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಲಂಡನ್‌ನಲ್ಲಿ ನಿಷೇಧಿಸಲ್ಪಟ್ಟ  ‘ಪ್ಯಾಲೆಸ್ಟೀನ್ ಆಕ್ಷನ್’ ಗುಂಪಿಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ: 466 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...