Homeಅಂತರಾಷ್ಟ್ರೀಯಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

ಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಗಾಝಾದಲ್ಲಿ ಕನಿಷ್ಠ ಎಂಟು ಜನರನ್ನು ಹತ್ಯೆಗೈದಿದೆ. ಹಸಿವು, ಅಪೌಷ್ಠಿಕತೆಯಿಂದ ಸಾವೀಗೀಡಾದವರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಪೈಕಿ 100 ಮಂದಿ ಮಕ್ಕಳು ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾ ನಗರವನ್ನು ವಶಪಡಿಸಿಕೊಳ್ಳುವ ಮತ್ತು ಸುಮಾರು ಒಂದು ಮಿಲಿಯನ್ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವ ಇಸ್ರೇಲ್‌ನ ಯೋಜನೆಯ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಪರೂಪದ ವಾರಾಂತ್ಯದ ಅಧಿವೇಶನವನ್ನು ನಡೆಸಲಿದೆ.

ಈ ನಡುವೆ ಬ್ಯೂನಸ್ ಐರಿಸ್‌ನಿಂದ ಲಂಡನ್ ಮತ್ತು ಇಸ್ತಾನ್‌ಬುಲ್‌ವರೆಗೆ ಪ್ರಪಂಚದಾದ್ಯಂತದ ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಶ್ವ ನಾಯಕರು ಕ್ರಮ ಕೈಗೊಳ್ಳುವಂತೆ ಮತ್ತು ಗಾಝಾ ಮೇಲಿನ ಇಸ್ರೇಲ್‌ನ ಆಕ್ರಮಣವನ್ನು ಕೊನೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮತ್ತೊಂದೆಡೆ, ಇಸ್ರೇಲ್ ಸೇನೆಯು ಈ ವರ್ಷದ ಆರಂಭದಿಂದ ಆಕ್ರಮಿತ ಪಶ್ಚಿಮ ದಂಡೆಯ ಉತ್ತರ ಭಾಗಗಳಲ್ಲಿನ ಹಲವಾರು ನಿರಾಶ್ರಿತರ ಶಿಬಿರಗಳ ಮೇಲೆ ತೀವ್ರವಾದ ದಾಳಿ ನಡೆಸುತ್ತಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಹತ್ತಾರು ಸಾವಿರ ಜನರು ಸ್ಥಳಾಂತರಗೊಂಡಿದ್ದಾರೆ. ದಾಳಿ ಇನ್ನೂ ಮುಂದುವರಿಯುತ್ತಿದೆ.

ಈ ಅಮಾನವೀಯ ಕೃತ್ಯವನ್ನು ಭದ್ರತಾ ಯಶಸ್ಸು ಎಂದು ಹೇಳಿಕೊಂಡಿರುವ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, “ಜೆನಿನ್, ತುಲ್ಕರೆಮ್ ಮತ್ತು ನೂರ್ ಶಮ್ಸ್ ಸೇರಿದಂತೆ ಪಶ್ಚಿಮ ದಂಡೆಯ ನಿರಾಶ್ರಿತರ ಶಿಬಿರಗಳಲ್ಲಿ ನಮ್ಮ ಮಿಲಿಟರಿ ಕಾರ್ಯಾಚರಣೆಯು ಸಕ್ರಿಯವಾಗಿರಲಿದೆ ಎಂದಿದ್ದಾರೆ.

ಇನ್ನೊಂದೆಡೆ ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ರದ್ದುಗೊಳಿಸುವಂತೆ ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ತೆಗೆದು ಹಾಕಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುವಂತೆ ನಾನು ಪ್ರಧಾನಿ ನೆತನ್ಯಾಹು ಅವರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಇದು ಭಯೋತ್ಪಾದಕ ಅಬು ಮಜೆನ್‌ನ ‘ಪ್ಯಾಲೆಸ್ತೀನ್ ರಾಷ್ಟ್ರದ ಕಲ್ಪನೆಗಳಿಗೆ ನಮ್ಮ ಪ್ರತಿಕ್ರಿಯೆಯಾಗಿರಬೇಕು” ಎಂದು ಹೇಳಿದ್ದಾರೆ.

ಅಲ್ಟ್ರಾನ್ಯಾಷನಲಿಸ್ಟ್ ಯಹೂದಿ ಪವರ್ ಪಾರ್ಟಿಯ ಮುಖ್ಯಸ್ಥರಾಗಿರುವ ಬೆನ್-ಗ್ವಿರ್, ಈ ಹಿಂದೆ ಗಾಝಾದ ಜನಸಂಖ್ಯೆರ ‘ಸ್ವಯಂಪ್ರೇರಿತ ವಲಸೆಗೆ ಕರೆ ನೀಡಿದ್ದರು.

ಅಕ್ಟೋಬರ್ 7, 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಕನಿಷ್ಠ 61,369 ಜನರು ಸಾವನ್ನಪ್ಪಿದ್ದಾರೆ ಮತ್ತು 152,850 ಜನರು ಗಾಯಗೊಂಡಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಲಂಡನ್‌ನಲ್ಲಿ ನಿಷೇಧಿಸಲ್ಪಟ್ಟ  ‘ಪ್ಯಾಲೆಸ್ಟೀನ್ ಆಕ್ಷನ್’ ಗುಂಪಿಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ: 466 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...