Homeಅಂತರಾಷ್ಟ್ರೀಯಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

ಗಾಝಾ: 100 ಮಕ್ಕಳು ಸೇರಿದಂತೆ 217 ಜನರು ಹಸಿವು, ಅಪೌಷ್ಠಿಕತೆಗೆ ಬಲಿ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಗಾಝಾದಲ್ಲಿ ಕನಿಷ್ಠ ಎಂಟು ಜನರನ್ನು ಹತ್ಯೆಗೈದಿದೆ. ಹಸಿವು, ಅಪೌಷ್ಠಿಕತೆಯಿಂದ ಸಾವೀಗೀಡಾದವರ ಸಂಖ್ಯೆ 217ಕ್ಕೆ ಏರಿಕೆಯಾಗಿದೆ. ಈ ಪೈಕಿ 100 ಮಂದಿ ಮಕ್ಕಳು ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾ ನಗರವನ್ನು ವಶಪಡಿಸಿಕೊಳ್ಳುವ ಮತ್ತು ಸುಮಾರು ಒಂದು ಮಿಲಿಯನ್ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವ ಇಸ್ರೇಲ್‌ನ ಯೋಜನೆಯ ಕುರಿತು ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅಪರೂಪದ ವಾರಾಂತ್ಯದ ಅಧಿವೇಶನವನ್ನು ನಡೆಸಲಿದೆ.

ಈ ನಡುವೆ ಬ್ಯೂನಸ್ ಐರಿಸ್‌ನಿಂದ ಲಂಡನ್ ಮತ್ತು ಇಸ್ತಾನ್‌ಬುಲ್‌ವರೆಗೆ ಪ್ರಪಂಚದಾದ್ಯಂತದ ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದು, ವಿಶ್ವ ನಾಯಕರು ಕ್ರಮ ಕೈಗೊಳ್ಳುವಂತೆ ಮತ್ತು ಗಾಝಾ ಮೇಲಿನ ಇಸ್ರೇಲ್‌ನ ಆಕ್ರಮಣವನ್ನು ಕೊನೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಮತ್ತೊಂದೆಡೆ, ಇಸ್ರೇಲ್ ಸೇನೆಯು ಈ ವರ್ಷದ ಆರಂಭದಿಂದ ಆಕ್ರಮಿತ ಪಶ್ಚಿಮ ದಂಡೆಯ ಉತ್ತರ ಭಾಗಗಳಲ್ಲಿನ ಹಲವಾರು ನಿರಾಶ್ರಿತರ ಶಿಬಿರಗಳ ಮೇಲೆ ತೀವ್ರವಾದ ದಾಳಿ ನಡೆಸುತ್ತಿದೆ. ಇದರಿಂದ ನೂರಾರು ಜನರು ಸಾವಿಗೀಡಾಗಿದ್ದಾರೆ. ಹತ್ತಾರು ಸಾವಿರ ಜನರು ಸ್ಥಳಾಂತರಗೊಂಡಿದ್ದಾರೆ. ದಾಳಿ ಇನ್ನೂ ಮುಂದುವರಿಯುತ್ತಿದೆ.

ಈ ಅಮಾನವೀಯ ಕೃತ್ಯವನ್ನು ಭದ್ರತಾ ಯಶಸ್ಸು ಎಂದು ಹೇಳಿಕೊಂಡಿರುವ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, “ಜೆನಿನ್, ತುಲ್ಕರೆಮ್ ಮತ್ತು ನೂರ್ ಶಮ್ಸ್ ಸೇರಿದಂತೆ ಪಶ್ಚಿಮ ದಂಡೆಯ ನಿರಾಶ್ರಿತರ ಶಿಬಿರಗಳಲ್ಲಿ ನಮ್ಮ ಮಿಲಿಟರಿ ಕಾರ್ಯಾಚರಣೆಯು ಸಕ್ರಿಯವಾಗಿರಲಿದೆ ಎಂದಿದ್ದಾರೆ.

ಇನ್ನೊಂದೆಡೆ ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ರದ್ದುಗೊಳಿಸುವಂತೆ ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇಟಮರ್ ಬೆನ್-ಗ್ವಿರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, “ಪ್ಯಾಲೆಸ್ತೀನ್ ಪ್ರಾಧಿಕಾರವನ್ನು ತೆಗೆದು ಹಾಕಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುವಂತೆ ನಾನು ಪ್ರಧಾನಿ ನೆತನ್ಯಾಹು ಅವರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಇದು ಭಯೋತ್ಪಾದಕ ಅಬು ಮಜೆನ್‌ನ ‘ಪ್ಯಾಲೆಸ್ತೀನ್ ರಾಷ್ಟ್ರದ ಕಲ್ಪನೆಗಳಿಗೆ ನಮ್ಮ ಪ್ರತಿಕ್ರಿಯೆಯಾಗಿರಬೇಕು” ಎಂದು ಹೇಳಿದ್ದಾರೆ.

ಅಲ್ಟ್ರಾನ್ಯಾಷನಲಿಸ್ಟ್ ಯಹೂದಿ ಪವರ್ ಪಾರ್ಟಿಯ ಮುಖ್ಯಸ್ಥರಾಗಿರುವ ಬೆನ್-ಗ್ವಿರ್, ಈ ಹಿಂದೆ ಗಾಝಾದ ಜನಸಂಖ್ಯೆರ ‘ಸ್ವಯಂಪ್ರೇರಿತ ವಲಸೆಗೆ ಕರೆ ನೀಡಿದ್ದರು.

ಅಕ್ಟೋಬರ್ 7, 2023ರಿಂದ ಗಾಝಾ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಕನಿಷ್ಠ 61,369 ಜನರು ಸಾವನ್ನಪ್ಪಿದ್ದಾರೆ ಮತ್ತು 152,850 ಜನರು ಗಾಯಗೊಂಡಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಲಂಡನ್‌ನಲ್ಲಿ ನಿಷೇಧಿಸಲ್ಪಟ್ಟ  ‘ಪ್ಯಾಲೆಸ್ಟೀನ್ ಆಕ್ಷನ್’ ಗುಂಪಿಗೆ ಬೆಂಬಲ ಸೂಚಿಸಿ ಬೃಹತ್ ಪ್ರತಿಭಟನೆ: 466 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...