Homeಮುಖಪುಟಗಾಜಾ: 24 ಗಂಟೆಯಲ್ಲಿ ಇಸ್ರೇಲ್ ದಾಳಿಗೆ 97 ಮಂದಿ ಪ್ಯಾಲೆಸ್ತೀನಿಯನ್ನರ ಸಾವು: 2,80,000 ಜನ ಹೊಸದಾಗಿ...

ಗಾಜಾ: 24 ಗಂಟೆಯಲ್ಲಿ ಇಸ್ರೇಲ್ ದಾಳಿಗೆ 97 ಮಂದಿ ಪ್ಯಾಲೆಸ್ತೀನಿಯನ್ನರ ಸಾವು: 2,80,000 ಜನ ಹೊಸದಾಗಿ ಸ್ಥಳಾಂತರ

- Advertisement -
- Advertisement -

ಗಾಜಾ: ಕಳೆದ 24 ಗಂಟೆಗಳಲ್ಲಿ ಗಾಜಾ ಪಟ್ಟಿಯಾದ್ಯಂತ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 97 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 138 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾ ಮೂಲದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಆಂಬುಲೆನ್ಸ್‌ಗಳು ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿಗೆ ತಲುಪಲು ಸಾಧ್ಯವಾಗದೆ ಇರುವ ಸ್ಥಳಗಳಲ್ಲಿ ಹಲವಾರು ಬಲಿಪಶುಗಳು ಅವಶೇಷಗಳ ಅಡಿಯಲ್ಲಿ ಮತ್ತು ರಸ್ತೆಗಳಲ್ಲಿ ಸಿಲುಕಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 18ರಂದು ಗಾಜಾಪಟ್ಟಿಯಾದ್ಯಂತ ಇಸ್ರೇಲ್ ತನ್ನ ತೀವ್ರ ದಾಳಿಯನ್ನು ಪ್ರಾರಂಭಿಸಿದಾಗಿನಿಂದ ಕನಿಷ್ಠ 1,163 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಮತ್ತು 2,735 ಮಂದಿ ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ.

ಇನ್ನೊಂದು ಹೇಳಿಕೆಯಲ್ಲಿ ಇಸ್ರೇಲ್‌ನ “ಆಕ್ರಮಣಶೀಲತೆ” ಮತ್ತು ಬಿಗಿಗೊಳಿಸಿದ ದಿಗ್ಬಂಧನದಿಂದಾಗಿ ಗಾಜಾದಲ್ಲಿ ಆರೋಗ್ಯ ಕ್ಷೇತ್ರದ ತೀವ್ರ ಕ್ಷೀಣತೆಯ ಬಗ್ಗೆ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದು ವೈದ್ಯಕೀಯ ಮತ್ತು ಮಾನವೀಯ ಅಗತ್ಯಗಳು ಹೆಚ್ಚುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯ ಸಂಪೂರ್ಣ ಕುಸಿತಕ್ಕೆ ಕಾರಣವಾಗಿದೆ ಎಂದಿದ್ದಾರೆ.

ಗಾಜಾದಲ್ಲಿ ಆಸ್ಪತ್ರೆಗಳು ಮತ್ತು ಆರೋಗ್ಯ ಸೌಲಭ್ಯಗಳು ತಮ್ಮ ಸಾಮರ್ಥ್ಯ ಮೀರಿ ಕಾರ್ಯನಿರ್ವಹಿಸುತ್ತಿದ್ದು, ಔಷಧಿಗಳು ಮತ್ತು ವೈದ್ಯಕೀಯ ಸರಬರಾಜುಗಳ ತೀವ್ರ ಕೊರತೆ ಮತ್ತು ಇಂಧನದ ಕೊರತೆಯಿಂದಾಗಿ ಸಾವಿರಾರು ರೋಗಿಗಳು ಮತ್ತು ಗಾಯಾಳುಗಳು, ವಿಶೇಷವಾಗಿ ಮಕ್ಕಳು, ಗರ್ಭಿಣಿಯರು ಮತ್ತು ವೃದ್ಧರ ಜೀವಕ್ಕೆ ಅಪಾಯ ಎದುರಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ವೈದ್ಯಕೀಯ ತಂಡಗಳಿಂದ ಬೆಂಬಲವನ್ನು ಕೋರಲಾಗಿದೆ ಮತ್ತು ಪಶ್ಚಿಮ ದಂಡೆ ಅಥವಾ ವಿದೇಶಗಳಲ್ಲಿರುವ ಪ್ಯಾಲೇಸ್ತೀನಿಯನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಗಾಯಾಳುಗಳು ಮತ್ತು ರೋಗಿಗಳನ್ನು ಸಾಗಿಸಲು ಮಾನವೀಯ ಕಾರಿಡಾರ್‌ಗಳನ್ನು ತೆರೆಯಬೇಕು ಎಂದು ಹೇಳಿಕೆಯಲ್ಲಿ ಕರೆ ನೀಡಲಾಗಿದೆ.

ಪ್ಯಾಲೇಸ್ತೀನಿಯನ್ ಕೇಂದ್ರೀಯ ಅಂಕಿಅಂಶಗಳ ಬ್ಯೂರೋ ಪ್ರಕಾರ, ಗಾಜಾ ಪಟ್ಟಿಯಲ್ಲಿ 39,384 ಮಕ್ಕಳಿದ್ದಾರೆ, ಅವರು ಇಸ್ರೇಲ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಈ ಬಹಳಷ್ಟು ಮಕ್ಕಳು ತಮ್ಮ ಒಬ್ಬ ಪೋಷಕರಲ್ಲಿ ಒಬ್ಬರನ್ನು ಕಳೆದುಕೊಂಡಿದ್ದಾರೆ. ಮತ್ತೊಂದೆಡೆ ಪೋಷಕರಲ್ಲಿ ಇಬ್ಬರನ್ನು ಈ ಮಕ್ಕಳು ಕಳೆದುಕೊಂಡಿದ್ದಾರೆ  ಎಂದು ಹೇಳಿದೆ. ಈ ಮಕ್ಕಳು ದುರಂತ ಪರಿಸ್ಥಿತಿಗಳಲ್ಲಿ ವಾಸಿಸುತ್ತಿದ್ದಾರೆ, ಅವರಲ್ಲಿ ಹಲವರು ಸಾಮಾಜಿಕ ಆರೈಕೆ ಮತ್ತು ಮಾನಸಿಕ ಬೆಂಬಲದ ಸಂಪೂರ್ಣ ಅನುಪಸ್ಥಿತಿಯಲ್ಲಿ ಹರಿದ ಶಿಬಿರಗಳು ಅಥವಾ ನಾಶವಾದ ಮನೆಗಳಲ್ಲಿ ಆಶ್ರಯ ಪಡೆಯುವಂತೆ ಒತ್ತಾಯಿಸಲಾಗಿದೆ ಎಂದು ಅದು ತಿಳಿಸಿದೆ.

ಪ್ಯಾಲೇಸ್ತೀನಿಯನ್ ಜನಸಂಖ್ಯೆಯ ಶೇಕಡಾ 43ರಷ್ಟು ಮಕ್ಕಳಿದ್ದಾರೆ ಮತ್ತು ಗಾಜಾ ಪಟ್ಟಿಯಲ್ಲಿರುವ ಹೆಚ್ಚಿನ  ಅನಾಥರ ಸಂಖ್ಯೆಯಿಂದಾಗಿ “ಆಧುನಿಕ ಇತಿಹಾಸದಲ್ಲಿ ಅತಿದೊಡ್ಡ ಅನಾಥ ಬಿಕ್ಕಟ್ಟು” ಎಂದು ಅದು ಹೇಳಿದೆ.

ಏತನ್ಮಧ್ಯೆ ಇಸ್ರೇಲಿ ಸೈನ್ಯವು ಗಾಜಾ ನಗರದ ಪೂರ್ವದಲ್ಲಿರುವ ಕೆಲವು ಪ್ರದೇಶಗಳ ನಿವಾಸಿಗಳನ್ನು ಸ್ಥಳಾಂತರಿಸಲು ಮತ್ತು ನಗರದ ಪಶ್ಚಿಮಕ್ಕೆ ಆಶ್ರಯ ತಾಣಗಳಿಗೆ ಹೋಗುವಂತೆ ಕರೆ ನೀಡಿದೆ.

ಇಸ್ರೇಲಿ ಮಿಲಿಟರಿ ವಕ್ತಾರ ಅವಿಚೇ ಅಡ್ರೇ ಒಂದು ಹೇಳಿಕೆಯಲ್ಲಿ, ಶುಜೈಯಾ ಪ್ರದೇಶ ಮತ್ತು ಇತರ ಕೆಲವು ನೆರೆಹೊರೆಗಳ ನಿವಾಸಿಗಳಿಗೆ “ಗಂಭೀರ ಮತ್ತು ತುರ್ತು ಎಚ್ಚರಿಕೆ” ನೀಡಿದ್ದಾರೆ.

“ನಿಮ್ಮ ಸ್ವಂತ ಸುರಕ್ಷತೆಗಾಗಿ, ನೀವು ಈ ಪ್ರದೇಶಗಳನ್ನು ತಕ್ಷಣವೇ ಸ್ಥಳಾಂತರಿಸಬೇಕು ಮತ್ತು ಪಶ್ಚಿಮ ಗಾಜಾ ನಗರದ ತಿಳಿದಿರುವ ಆಶ್ರಯಗಳಿಗೆ ಸ್ಥಳಾಂತರಗೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಹೊಸದಾಗಿ 280,000 ಮಂದಿ ಸ್ಥಳಾಂತರ: ವಿಶ್ವಸಂಸ್ಥೆ
ಎರಡು ವಾರಗಳ ಹಿಂದೆ ಯುದ್ಧ ತೀವ್ರಗೊಂಡ ನಂತರ ಅಂದಾಜು 280,000 ಗಾಜಾ ನಿವಾಸಿಗಳು ಹೊಸದಾಗಿ ಸ್ಥಳಾಂತರಗೊಂಡಿದ್ದಾರೆ, ಅವರಲ್ಲಿ ಕೆಲವರು ಕಿಕ್ಕಿರಿದ, ಚಿಗಟ ಮತ್ತು ಹುಳಗಳಿಂದ ತುಂಬಿರುವ ಆಶ್ರಯಗಳಿಗೆ ಸ್ಥಳಾಂತರಗೊಳ್ಳಲು ಒತ್ತಾಯಿಸಲ್ಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಹೆಚ್ಚುತ್ತಿರುವ ಸಂಖ್ಯೆಯ ಜನರು ಈಗಾಗಲೇ ಕಿಕ್ಕಿರಿದಿರುವ ಉಳಿದ ಆಶ್ರಯಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು OCHA ಹೇಳಿದೆ. “ಚಿಗಟಗಳು ಮತ್ತು ಹುಳಗಳ ಮುತ್ತಿಕೊಳ್ಳುವಿಕೆ ವರದಿಯಾಗಿದೆ, ಇದು ಚರ್ಮದ ದದ್ದುಗಳು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.” ಎಂದು ಅದು ತಿಳಿಸಿದೆ.

ಗಾಜಾದಲ್ಲಿ ನೈರ್ಮಲ್ಯ ಪರಿಸ್ಥಿತಿಗಳನ್ನು ಸುಧಾರಿಸಲು ಸಾಮಗ್ರಿಗಳು ಲಭ್ಯವಿಲ್ಲದ ಕಾರಣ ನೆರವು ನಿರ್ಬಂಧವು ಸಮಸ್ಯೆಯನ್ನು ನಿಭಾಯಿಸಲು ಕಷ್ಟಕರವಾಗಿದೆ ಎಂದು ಕಚೇರಿ ಹೇಳಿದೆ.

ಪರಿಸ್ಥಿತಿಗಳು ಅನುಮತಿಸಿದಂತೆ ವಿಶ್ವಸಂಸ್ಥೆ ಮತ್ತು ಅದರ ಮಾನವೀಯ ಪಾಲುದಾರರು ಜನಸಂಖ್ಯೆಯ ಅಪಾರ ಅಗತ್ಯಗಳಿಗೆ ಸ್ಪಂದಿಸುವುದನ್ನು ಮುಂದುವರಿಸಿದ್ದಾರೆ ಎಂದು OCHA ಹೇಳಿದೆ.

ಎಲ್ಲಾ ಮಾನವೀಯ ನೆರವು ಮತ್ತು ಅಗತ್ಯ ವಸ್ತುಗಳ ಪ್ರವೇಶದ ಮೇಲಿನ ಒಂದು ತಿಂಗಳ ಅವಧಿಯ ದಿಗ್ಬಂಧನವು ಜನಸಂಖ್ಯೆಯ ಮೂಲಭೂತ ಅಗತ್ಯಗಳನ್ನು ಕಸಿದುಕೊಳ್ಳುತ್ತಿದೆ. ಗಾಜಾದೊಳಗಿನ ಆಹಾರ ನೆರವು ವೇಗವಾಗಿ ಖಾಲಿಯಾಗುತ್ತಿದೆ. ಆದಾಗ್ಯೂ, ಆಹಾರ ಭದ್ರತಾ ಪಾಲುದಾರರು ಇಲ್ಲಿಯವರೆಗೆ ಪ್ರತಿದಿನ 9,00,00ಕ್ಕೂ ಹೆಚ್ಚು ಬಿಸಿ ಊಟಗಳನ್ನು ತಲುಪಿಸಲು ಸಮರ್ಥರಾಗಿದ್ದಾರೆ ಎಂದು ಕಚೇರಿ ಹೇಳಿದೆ.

ಗಾಜಾಗೆ ಪ್ರವೇಶಿಸಲು ಸರಕು ಮತ್ತು ಮಾನವೀಯ ನೆರವು ಪಡೆಯಲು ಕ್ರಾಸಿಂಗ್‌ಗಳನ್ನು ತಕ್ಷಣವೇ ಮತ್ತೆ ತೆರೆಯುವಂತೆ OCHA ಒತ್ತಾಯಿಸಿದೆ.

‘ನಿಮ್ಮ ವಿಷವನ್ನು ಕೇರಳ ದೂರವಿಟ್ಟಿದೆ; ಒಬ್ಬ ಗೆದ್ದಿದ್ದಾರೆ, ಆದರೆ ಅದನ್ನು ಮುಚ್ಚುತ್ತೇವೆ’: ಬಿಜೆಪಿಗೆ ಸಿಪಿಐ(ಎಂ) ಸಂಸದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...