Homeಅಂತರಾಷ್ಟ್ರೀಯಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

- Advertisement -
- Advertisement -

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ.

ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ ಮೇಲೆ ನಡೆದ ದಾಳಿಯಲ್ಲಿ ಅಲ್ ಜಝೀರಾ ಮುಬಾಶರ್‌ನ ಗಾಝಾ ವರದಿಗಾರ ವಿಶಾಹ್‌ ಹತರಾಗಿದ್ದಾರೆ ಎಂದು aljazeera.com ವರದಿ ಮಾಡಿದೆ.

ಇಸ್ರೇಲ್ ವೈಮಾನಿಕ ದಾಳಿಯಿಂದಾಗಿ ವಿಶಾಹ್ ಪ್ರಯಾಣಿಸುತ್ತಿದ್ದ ಕಾರು ಬೆಂಕಿಗೆ ಆಹುತಿಯಾಯಿಗಿದೆ ಎಂದು ವರದಿ ಉಲ್ಲೇಖಿಸಿದೆ.

2023ರ ಅಕ್ಟೋಬರ್‌ನಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಪ್ಯಾಲೆಸ್ತೀನಿಯರ ಜನಾಂಗೀಯ ಹತ್ಯೆಯ ವರದಿ ಮಾಡುತ್ತಿರುವ ಪತ್ರಕರ್ತರನ್ನು ಇಸ್ರೇಲ್ ನಿರಂತರವಾಗಿ ಗುರಿಯಾಗಿಸುತ್ತಿದೆ. ಗಾಝಾ ಸರ್ಕಾರಿ ಮಾಧ್ಯಮ ಕಚೇರಿಯ ಪ್ರಕಾರ, 2023ರ ಅಕ್ಟೋಬರ್‌ನಿಂದ ಈವರೆಗೆ ಕನಿಷ್ಠ 262 ಪತ್ರಕರ್ತರು ಇಸ್ರೇಲಿ ದಾಳಿಗೆ ಬಲಿಯಾಗಿದ್ದಾರೆ.

“ಅಲ್ ಜಝೀರಾ ಮುಬಾಶರ್ ವರದಿಗಾರ ಮೊಹಮ್ಮದ್ ವಿಶಾಹ್ ಅವರನ್ನು ಹತ್ಯೆ ಮಾಡಿದ ಇಸ್ರೇಲ್‌ನ ಘೋರ ಅಪರಾಧವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಅಲ್ ಜಝೀರಾ ಮೀಡಿಯಾ ನೆಟ್‌ವರ್ಕ್ ಹೇಳಿಕೆಯಲ್ಲಿ ತಿಳಿಸಿದೆ.

“ಇದು ಎಲ್ಲಾ ಅಂತಾರಾಷ್ಟ್ರೀಯ ಕಾನೂನುಗಳು ಮತ್ತು ಮಾನದಂಡಗಳ ಹೊಸ ಮತ್ತು ಸ್ಪಷ್ಟ ಉಲ್ಲಂಘನೆಯಾಗಿದೆ. ಪತ್ರಕರ್ತರನ್ನು ಗುರಿಯಾಗಿಸುವ ಮತ್ತು ಸತ್ಯದ ಧ್ವನಿಯನ್ನು ಅಡಗಿಸುವ ನಿರಂತರ ವ್ಯವಸ್ಥಿತ ನೀತಿಯನ್ನು ಇದು ಪ್ರತಿಬಿಂಬಿಸುತ್ತದೆ” ಎಂದಿದೆ.

“2018ರಲ್ಲಿ ನೆಟ್‌ವರ್ಕ್‌ಗೆ ಸೇರಿದ ತನ್ನ ವರದಿಗಾರ ಮೊಹಮ್ಮದ್ ವಿಶಾಹ್ ಅವರ ಹತ್ಯೆಯು ಆಕಸ್ಮಿಕ ಕೃತ್ಯವಲ್ಲ, ಬದಲಾಗಿ ಪತ್ರಕರ್ತರನ್ನು ಬೆದರಿಸುವ ಮತ್ತು ಅವರ ವೃತ್ತಿಪರ ಕರ್ತವ್ಯಗಳನ್ನು ನಿರ್ವಹಿಸುವುದನ್ನು ತಡೆಯುವ ಉದ್ದೇಶದಿಂದ ನಡೆಸಿದ ಉದ್ದೇಶಪೂರ್ವಕ ಅಪರಾಧವಾಗಿದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...