Homeಮುಖಪುಟಇಸ್ರೇಲ್‌ ಜೊತೆ ಯುದ್ಧ ಒಪ್ಪಂದಕ್ಕೆ ಮುಂದಾದ ಹಮಾಸ್‌

ಇಸ್ರೇಲ್‌ ಜೊತೆ ಯುದ್ಧ ಒಪ್ಪಂದಕ್ಕೆ ಮುಂದಾದ ಹಮಾಸ್‌

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವೆ 45 ದಿನಗಳಿಂದ ಯುದ್ಧ ನಡೆಯುತ್ತಿದ್ದು, ಹಮಾಸ್ ಅಧಿಕಾರಿಗಳು ಇಸ್ರೇಲ್‌ನೊಂದಿಗೆ ಯುದ್ಧ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹಮಾಸ್‌ ನಾಯಕ ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ.

ಯುದ್ಧದ ಬಗ್ಗೆ ಕತಾರ್‌ನ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಯುತ್ತಿದೆ. ಅವರಿಗೆ ನಮ್ಮ ಪ್ರತಿಕ್ರಿಯೆಯನ್ನು ನೀಡಿರುವುದಾಗಿ ಹನಿಯೆಹ್ ಮಂಗಳವಾರ ಬೆಳಿಗ್ಗೆ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹನಿಯೆಹ್ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. ಆದರೆ ಕದನ ವಿರಾಮ ಎಷ್ಟು ಕಾಲ ಇರಲಿದೆ. ಗಾಝಾಕ್ಕೆ ಪರಿಹಾರ ರವಾನೆ ಬಗ್ಗೆ ಸಿದ್ದತೆ ಮತ್ತು ಒತ್ತೆಯಾಳುಗಳ ವಿನಿಮಯ ಮಾಡಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆಯುತ್ತಿದೆ. ಎರಡೂ ಕಡೆಯವರು ಮಹಿಳೆಯರು ಮತ್ತು ಮಕ್ಕಳನ್ನು ಮುಕ್ತಗೊಳಿಸಿದ್ದಾರೆ. ಈ ಕುರಿತು ಮಾತುಕತೆಗಳಿಗೆ ಮಧ್ಯಸ್ಥಿಕೆ ವಹಿಸುವ ಕತಾರ್ ವಿವರಗಳನ್ನು ಘೋಷಿಸುತ್ತದೆ ಎಂದು ಎಝಾತ್ ಎಲ್-ರೇಶಿಕ್ ಹೇಳಿದ್ದಾರೆ.

ಒಪ್ಪಂದವು ಕದನ ವಿರಾಮ, ಗಾಝಾದ ಎಲ್ಲಾ ಪ್ರದೇಶಗಳಿಗೆ ಪರಿಹಾರ ಸಾಮಾಗ್ರಿಗಳ ಪೂರೈಸಲು ಟ್ರಕ್‌ಗಳ ವ್ಯವಸ್ಥೆ ಮತ್ತು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೇರೆ ದೇಶಗಳಿಗೆ ಕಳುಹಿಸುವ ಒಪ್ಪಂದವನ್ನು ಒಳಗೊಂಡಿರುತ್ತದೆ. ಎರಡೂ ದೇಶಗಳ ನಡುವೆ ವಾರಗಳಿಂದ ಮಾತುಕತೆ ನಡೆಯುತ್ತಿದೆ, ಇಸ್ರೇಲ್‌ ಕಡೆಯವರು ಒಪ್ಪಂದದ ಒಮ್ಮತಕ್ಕೆ ಬರುತ್ತಿಲ್ಲ ಎಂದು ಎಲ್-ರೆಶಿಕ್ ಹೇಳಿದ್ದಾರೆ.

ಇಸ್ರೇಲ್‌ನ ಸುದ್ದಿ ವೆಬ್‌ಸೈಟ್‌ವೊಂದು ವರದಿಯನ್ನು ಮಾಡಿದ್ದು, ಹಮಾಸ್‌ನ ಹಿರಿಯ ಅಧಿಕಾರಿ ಯಾಹ್ಯಾ ಸಿನ್ವಾರ್ ಒಪ್ಪಂದದ ಸಮಯದಲ್ಲಿ ಗಾಝಾದಲ್ಲಿ ಇಸ್ರೇಲ್‌ ವಿಮಾನಗಳ ಚಟುವಟಿಕೆಯನ್ನು ನಿಷೇಧಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಈವರೆಗೆ ಪ್ಯಾಲೆಸ್ತೀನ್‌ನಲ್ಲಿ ಮೃತರ ಸಂಖ್ಯೆ 15,000ಕ್ಕೂ ಅಧಿಕ ಇದೆ ಎಂದು ಯುರೋ-ಮೆಡ್ ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ. ಮೃತರಲ್ಲಿ 6,403 ಮಕ್ಕಳು ಮೃತಪಟ್ಟಿದ್ದಾರೆ. ಮೃತರಲ್ಲಿ 3,561 ಮಂದಿ ಮಹಿಳೆಯರು ಸೇರಿದ್ದಾರೆ. ಯುದ್ಧದಲ್ಲಿ 30,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಹಮಾಸ್‌ನೊಂದಿಗಿನ ಒತ್ತೆಯಾಳುಗಳ ಒಪ್ಪಂದದ ಕುರಿತು ಕತಾರ್ ಇಸ್ರೇಲ್‌ಗೆ ಎರಡು ಸಲಹೆಗಳನ್ನು ಕೂಡ ನಿನ್ನೆ ನೀಡಿತ್ತು. ಮೊದಲನೆಯದಾಗಿ 3 ದಿನಗಳ ಕದನ ವಿರಾಮ ಮತ್ತು ಗಾಝಾ ಪಟ್ಟಿಗೆ ನಿರ್ದಿಷ್ಟ ಪ್ರಮಾಣದ ಇಂಧನದ ಪೂರೈಕೆಗೆ ಬದಲಾಗಿ 53 ಮಕ್ಕಳು ಮತ್ತು ಮಹಿಳೆಯರನ್ನು ಹಮಾಸ್‌ನಿಂದ ಬಿಡುಗಡೆ ಮಾಡುವುದಾಗಿದೆ.

ಪ್ಯಾಲೆಸ್ತೀನ್ ಮಹಿಳೆಯರು ಮತ್ತು ಮಕ್ಕಳು ಮತ್ತು ಕೆಲವು ಭದ್ರತಾ ಖೈದಿಗಳ ಬಿಡುಗಡೆ, 5 ದಿನಗಳ ಕದನ ವಿರಾಮ ಮತ್ತು ಹೆಚ್ಚಿನ ಪ್ರಮಾಣದ ಇಂಧನದ ಪೂರೈಕೆಗೆ ಬದಲಾಗಿ ಹಮಾಸ್ 87 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಬಗ್ಗೆ ಎರಡನೆಯ ಸಲಹೆಯನ್ನು ನೀಡಲಾಗಿದೆ ಎಂದು ಪ್ಯಾಲೆಸ್ತೀನ್‌ ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಾಝಾ ಪಟ್ಟಿಯಲ್ಲಿ ಇಟ್ಟುಕೊಂಡಿರುವ ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಬಗ್ಗೆ ಇನ್ನೂ ಯಾವುದೇ ಒಪ್ಪಂದಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...