Homeಮುಖಪುಟಇಸ್ರೇಲ್‌ ಜೊತೆ ಯುದ್ಧ ಒಪ್ಪಂದಕ್ಕೆ ಮುಂದಾದ ಹಮಾಸ್‌

ಇಸ್ರೇಲ್‌ ಜೊತೆ ಯುದ್ಧ ಒಪ್ಪಂದಕ್ಕೆ ಮುಂದಾದ ಹಮಾಸ್‌

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವೆ 45 ದಿನಗಳಿಂದ ಯುದ್ಧ ನಡೆಯುತ್ತಿದ್ದು, ಹಮಾಸ್ ಅಧಿಕಾರಿಗಳು ಇಸ್ರೇಲ್‌ನೊಂದಿಗೆ ಯುದ್ಧ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹಮಾಸ್‌ ನಾಯಕ ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ.

ಯುದ್ಧದ ಬಗ್ಗೆ ಕತಾರ್‌ನ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಯುತ್ತಿದೆ. ಅವರಿಗೆ ನಮ್ಮ ಪ್ರತಿಕ್ರಿಯೆಯನ್ನು ನೀಡಿರುವುದಾಗಿ ಹನಿಯೆಹ್ ಮಂಗಳವಾರ ಬೆಳಿಗ್ಗೆ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹನಿಯೆಹ್ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. ಆದರೆ ಕದನ ವಿರಾಮ ಎಷ್ಟು ಕಾಲ ಇರಲಿದೆ. ಗಾಝಾಕ್ಕೆ ಪರಿಹಾರ ರವಾನೆ ಬಗ್ಗೆ ಸಿದ್ದತೆ ಮತ್ತು ಒತ್ತೆಯಾಳುಗಳ ವಿನಿಮಯ ಮಾಡಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆಯುತ್ತಿದೆ. ಎರಡೂ ಕಡೆಯವರು ಮಹಿಳೆಯರು ಮತ್ತು ಮಕ್ಕಳನ್ನು ಮುಕ್ತಗೊಳಿಸಿದ್ದಾರೆ. ಈ ಕುರಿತು ಮಾತುಕತೆಗಳಿಗೆ ಮಧ್ಯಸ್ಥಿಕೆ ವಹಿಸುವ ಕತಾರ್ ವಿವರಗಳನ್ನು ಘೋಷಿಸುತ್ತದೆ ಎಂದು ಎಝಾತ್ ಎಲ್-ರೇಶಿಕ್ ಹೇಳಿದ್ದಾರೆ.

ಒಪ್ಪಂದವು ಕದನ ವಿರಾಮ, ಗಾಝಾದ ಎಲ್ಲಾ ಪ್ರದೇಶಗಳಿಗೆ ಪರಿಹಾರ ಸಾಮಾಗ್ರಿಗಳ ಪೂರೈಸಲು ಟ್ರಕ್‌ಗಳ ವ್ಯವಸ್ಥೆ ಮತ್ತು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೇರೆ ದೇಶಗಳಿಗೆ ಕಳುಹಿಸುವ ಒಪ್ಪಂದವನ್ನು ಒಳಗೊಂಡಿರುತ್ತದೆ. ಎರಡೂ ದೇಶಗಳ ನಡುವೆ ವಾರಗಳಿಂದ ಮಾತುಕತೆ ನಡೆಯುತ್ತಿದೆ, ಇಸ್ರೇಲ್‌ ಕಡೆಯವರು ಒಪ್ಪಂದದ ಒಮ್ಮತಕ್ಕೆ ಬರುತ್ತಿಲ್ಲ ಎಂದು ಎಲ್-ರೆಶಿಕ್ ಹೇಳಿದ್ದಾರೆ.

ಇಸ್ರೇಲ್‌ನ ಸುದ್ದಿ ವೆಬ್‌ಸೈಟ್‌ವೊಂದು ವರದಿಯನ್ನು ಮಾಡಿದ್ದು, ಹಮಾಸ್‌ನ ಹಿರಿಯ ಅಧಿಕಾರಿ ಯಾಹ್ಯಾ ಸಿನ್ವಾರ್ ಒಪ್ಪಂದದ ಸಮಯದಲ್ಲಿ ಗಾಝಾದಲ್ಲಿ ಇಸ್ರೇಲ್‌ ವಿಮಾನಗಳ ಚಟುವಟಿಕೆಯನ್ನು ನಿಷೇಧಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಈವರೆಗೆ ಪ್ಯಾಲೆಸ್ತೀನ್‌ನಲ್ಲಿ ಮೃತರ ಸಂಖ್ಯೆ 15,000ಕ್ಕೂ ಅಧಿಕ ಇದೆ ಎಂದು ಯುರೋ-ಮೆಡ್ ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ. ಮೃತರಲ್ಲಿ 6,403 ಮಕ್ಕಳು ಮೃತಪಟ್ಟಿದ್ದಾರೆ. ಮೃತರಲ್ಲಿ 3,561 ಮಂದಿ ಮಹಿಳೆಯರು ಸೇರಿದ್ದಾರೆ. ಯುದ್ಧದಲ್ಲಿ 30,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಹಮಾಸ್‌ನೊಂದಿಗಿನ ಒತ್ತೆಯಾಳುಗಳ ಒಪ್ಪಂದದ ಕುರಿತು ಕತಾರ್ ಇಸ್ರೇಲ್‌ಗೆ ಎರಡು ಸಲಹೆಗಳನ್ನು ಕೂಡ ನಿನ್ನೆ ನೀಡಿತ್ತು. ಮೊದಲನೆಯದಾಗಿ 3 ದಿನಗಳ ಕದನ ವಿರಾಮ ಮತ್ತು ಗಾಝಾ ಪಟ್ಟಿಗೆ ನಿರ್ದಿಷ್ಟ ಪ್ರಮಾಣದ ಇಂಧನದ ಪೂರೈಕೆಗೆ ಬದಲಾಗಿ 53 ಮಕ್ಕಳು ಮತ್ತು ಮಹಿಳೆಯರನ್ನು ಹಮಾಸ್‌ನಿಂದ ಬಿಡುಗಡೆ ಮಾಡುವುದಾಗಿದೆ.

ಪ್ಯಾಲೆಸ್ತೀನ್ ಮಹಿಳೆಯರು ಮತ್ತು ಮಕ್ಕಳು ಮತ್ತು ಕೆಲವು ಭದ್ರತಾ ಖೈದಿಗಳ ಬಿಡುಗಡೆ, 5 ದಿನಗಳ ಕದನ ವಿರಾಮ ಮತ್ತು ಹೆಚ್ಚಿನ ಪ್ರಮಾಣದ ಇಂಧನದ ಪೂರೈಕೆಗೆ ಬದಲಾಗಿ ಹಮಾಸ್ 87 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಬಗ್ಗೆ ಎರಡನೆಯ ಸಲಹೆಯನ್ನು ನೀಡಲಾಗಿದೆ ಎಂದು ಪ್ಯಾಲೆಸ್ತೀನ್‌ ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಾಝಾ ಪಟ್ಟಿಯಲ್ಲಿ ಇಟ್ಟುಕೊಂಡಿರುವ ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಬಗ್ಗೆ ಇನ್ನೂ ಯಾವುದೇ ಒಪ್ಪಂದಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...