Homeಮುಖಪುಟಇಸ್ರೇಲ್‌ ಜೊತೆ ಯುದ್ಧ ಒಪ್ಪಂದಕ್ಕೆ ಮುಂದಾದ ಹಮಾಸ್‌

ಇಸ್ರೇಲ್‌ ಜೊತೆ ಯುದ್ಧ ಒಪ್ಪಂದಕ್ಕೆ ಮುಂದಾದ ಹಮಾಸ್‌

- Advertisement -
- Advertisement -

ಇಸ್ರೇಲ್‌ ಮತ್ತು ಪ್ಯಾಲೆಸ್ತೀನ್‌ ನಡುವೆ 45 ದಿನಗಳಿಂದ ಯುದ್ಧ ನಡೆಯುತ್ತಿದ್ದು, ಹಮಾಸ್ ಅಧಿಕಾರಿಗಳು ಇಸ್ರೇಲ್‌ನೊಂದಿಗೆ ಯುದ್ಧ ಒಪ್ಪಂದಕ್ಕೆ ಸಮೀಪಿಸುತ್ತಿರುವುದಾಗಿ ಹಮಾಸ್‌ ನಾಯಕ ಇಸ್ಮಾಯಿಲ್ ಹನಿಯೆಹ್ ಹೇಳಿದ್ದಾರೆ.

ಯುದ್ಧದ ಬಗ್ಗೆ ಕತಾರ್‌ನ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಯುತ್ತಿದೆ. ಅವರಿಗೆ ನಮ್ಮ ಪ್ರತಿಕ್ರಿಯೆಯನ್ನು ನೀಡಿರುವುದಾಗಿ ಹನಿಯೆಹ್ ಮಂಗಳವಾರ ಬೆಳಿಗ್ಗೆ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹನಿಯೆಹ್ ಹೆಚ್ಚಿನ ವಿವರಗಳನ್ನು ನೀಡಲಿಲ್ಲ. ಆದರೆ ಕದನ ವಿರಾಮ ಎಷ್ಟು ಕಾಲ ಇರಲಿದೆ. ಗಾಝಾಕ್ಕೆ ಪರಿಹಾರ ರವಾನೆ ಬಗ್ಗೆ ಸಿದ್ದತೆ ಮತ್ತು ಒತ್ತೆಯಾಳುಗಳ ವಿನಿಮಯ ಮಾಡಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆಯುತ್ತಿದೆ. ಎರಡೂ ಕಡೆಯವರು ಮಹಿಳೆಯರು ಮತ್ತು ಮಕ್ಕಳನ್ನು ಮುಕ್ತಗೊಳಿಸಿದ್ದಾರೆ. ಈ ಕುರಿತು ಮಾತುಕತೆಗಳಿಗೆ ಮಧ್ಯಸ್ಥಿಕೆ ವಹಿಸುವ ಕತಾರ್ ವಿವರಗಳನ್ನು ಘೋಷಿಸುತ್ತದೆ ಎಂದು ಎಝಾತ್ ಎಲ್-ರೇಶಿಕ್ ಹೇಳಿದ್ದಾರೆ.

ಒಪ್ಪಂದವು ಕದನ ವಿರಾಮ, ಗಾಝಾದ ಎಲ್ಲಾ ಪ್ರದೇಶಗಳಿಗೆ ಪರಿಹಾರ ಸಾಮಾಗ್ರಿಗಳ ಪೂರೈಸಲು ಟ್ರಕ್‌ಗಳ ವ್ಯವಸ್ಥೆ ಮತ್ತು ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೇರೆ ದೇಶಗಳಿಗೆ ಕಳುಹಿಸುವ ಒಪ್ಪಂದವನ್ನು ಒಳಗೊಂಡಿರುತ್ತದೆ. ಎರಡೂ ದೇಶಗಳ ನಡುವೆ ವಾರಗಳಿಂದ ಮಾತುಕತೆ ನಡೆಯುತ್ತಿದೆ, ಇಸ್ರೇಲ್‌ ಕಡೆಯವರು ಒಪ್ಪಂದದ ಒಮ್ಮತಕ್ಕೆ ಬರುತ್ತಿಲ್ಲ ಎಂದು ಎಲ್-ರೆಶಿಕ್ ಹೇಳಿದ್ದಾರೆ.

ಇಸ್ರೇಲ್‌ನ ಸುದ್ದಿ ವೆಬ್‌ಸೈಟ್‌ವೊಂದು ವರದಿಯನ್ನು ಮಾಡಿದ್ದು, ಹಮಾಸ್‌ನ ಹಿರಿಯ ಅಧಿಕಾರಿ ಯಾಹ್ಯಾ ಸಿನ್ವಾರ್ ಒಪ್ಪಂದದ ಸಮಯದಲ್ಲಿ ಗಾಝಾದಲ್ಲಿ ಇಸ್ರೇಲ್‌ ವಿಮಾನಗಳ ಚಟುವಟಿಕೆಯನ್ನು ನಿಷೇಧಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಈವರೆಗೆ ಪ್ಯಾಲೆಸ್ತೀನ್‌ನಲ್ಲಿ ಮೃತರ ಸಂಖ್ಯೆ 15,000ಕ್ಕೂ ಅಧಿಕ ಇದೆ ಎಂದು ಯುರೋ-ಮೆಡ್ ಮಾನವ ಹಕ್ಕುಗಳ ಸಂಸ್ಥೆ ಹೇಳಿದೆ. ಮೃತರಲ್ಲಿ 6,403 ಮಕ್ಕಳು ಮೃತಪಟ್ಟಿದ್ದಾರೆ. ಮೃತರಲ್ಲಿ 3,561 ಮಂದಿ ಮಹಿಳೆಯರು ಸೇರಿದ್ದಾರೆ. ಯುದ್ಧದಲ್ಲಿ 30,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಹಮಾಸ್‌ನೊಂದಿಗಿನ ಒತ್ತೆಯಾಳುಗಳ ಒಪ್ಪಂದದ ಕುರಿತು ಕತಾರ್ ಇಸ್ರೇಲ್‌ಗೆ ಎರಡು ಸಲಹೆಗಳನ್ನು ಕೂಡ ನಿನ್ನೆ ನೀಡಿತ್ತು. ಮೊದಲನೆಯದಾಗಿ 3 ದಿನಗಳ ಕದನ ವಿರಾಮ ಮತ್ತು ಗಾಝಾ ಪಟ್ಟಿಗೆ ನಿರ್ದಿಷ್ಟ ಪ್ರಮಾಣದ ಇಂಧನದ ಪೂರೈಕೆಗೆ ಬದಲಾಗಿ 53 ಮಕ್ಕಳು ಮತ್ತು ಮಹಿಳೆಯರನ್ನು ಹಮಾಸ್‌ನಿಂದ ಬಿಡುಗಡೆ ಮಾಡುವುದಾಗಿದೆ.

ಪ್ಯಾಲೆಸ್ತೀನ್ ಮಹಿಳೆಯರು ಮತ್ತು ಮಕ್ಕಳು ಮತ್ತು ಕೆಲವು ಭದ್ರತಾ ಖೈದಿಗಳ ಬಿಡುಗಡೆ, 5 ದಿನಗಳ ಕದನ ವಿರಾಮ ಮತ್ತು ಹೆಚ್ಚಿನ ಪ್ರಮಾಣದ ಇಂಧನದ ಪೂರೈಕೆಗೆ ಬದಲಾಗಿ ಹಮಾಸ್ 87 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಬಗ್ಗೆ ಎರಡನೆಯ ಸಲಹೆಯನ್ನು ನೀಡಲಾಗಿದೆ ಎಂದು ಪ್ಯಾಲೆಸ್ತೀನ್‌ ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಶನಿವಾರ ರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗಾಝಾ ಪಟ್ಟಿಯಲ್ಲಿ ಇಟ್ಟುಕೊಂಡಿರುವ ಇಸ್ರೇಲ್‌ನ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ ಬಗ್ಗೆ ಇನ್ನೂ ಯಾವುದೇ ಒಪ್ಪಂದಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ದ್ವೇಷ ಭಾಷಣ ಪ್ರಕರಣಗಳಿಗೆ ಸಂಬಂಧಿಸಿ ಸುಪ್ರೀಂ ನಿರ್ದೇಶನವನ್ನು ಪಾಲಿಸಲಾಗಿದೆ: ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...