Homeಮುಖಪುಟಇಸ್ರೇಲ್‌ನಿಂದ ಪ್ಯಾಲೆಸ್ತೀನ್ ನಾಗರಿಕರ ಅಂಗಾಂಗ ಕಳವು: ಗಾಝಾ ಅಧಿಕಾರಿಗಳಿಂದ ಆರೋಪ

ಇಸ್ರೇಲ್‌ನಿಂದ ಪ್ಯಾಲೆಸ್ತೀನ್ ನಾಗರಿಕರ ಅಂಗಾಂಗ ಕಳವು: ಗಾಝಾ ಅಧಿಕಾರಿಗಳಿಂದ ಆರೋಪ

- Advertisement -
- Advertisement -

ಯುದ್ಧಕ್ಕೆ ಬಲಿಯಾದ ಪ್ಯಾಲೆಸ್ತೀನ್ ನಾಗರಿಕರ ಮೃತದೇಹಗಳಿಂದ ಇಸ್ರೇಲ್ ಸೇನೆ ಅಂಗಾಂಗಳನ್ನು ಕದಿಯುತ್ತಿದೆ ಎಂದು ಗಾಝಾದ ಸ್ಥಳೀಯ ಅಧಿಕಾರಿಗಳು ಆರೋಪಿಸಿದ್ದು, ಅಂತಾರಾಷ್ಟ್ರೀಯ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಅನೇಕ ಮಂದಿ ಪ್ಯಾಲೆಸ್ತೀನ್ ನಾಗರಿಕರ ಮೃತದೇಹಗಳ ಆಕಾರ ಬದಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಅಂಗಾಂಗ ಕಳವು ಮಾಡಿರುವುದು ಬಯಲಾಗಿದೆ ಎಂದು ಗಾಝಾ ಮೂಲದ ಸರ್ಕಾರಿ ಮಾಧ್ಯಮ ಕಚೇರಿಯೊಂದು ಹೇಳಿರುವುದಾಗಿ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇಸ್ರೇಲ್‌ ಸೇನೆಯು ಮೃತರ ಹೆಸರನ್ನು ಮತ್ತು ಎಲ್ಲಿ ಮೃತದೇಹಗಳು ದೊರೆತಿದೆ ಎಂಬುವುದರ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಹೂತಿಟ್ಟ ಮೃತದೇಹಗಳನ್ನೂ ಅವರು ಹೊರ ತೆಗೆದಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಆರೋಪಿಸಿದೆ.

ಇಸ್ರೇಲ್ ಇಂತಹ ಭಯಾನಕ ಅಪರಾಧ ನಡೆಸುತ್ತಿದ್ದರೂ ಗಾಝಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೆಡ್ ಕ್ರಾಸ್‌ನ ಅಂತಾರಾಷ್ಟ್ರೀಯ ಸಮಿತಿ ಮೌನ ತಾಳಿದೆ ಎಂದು ಕಿಡಿಕಾರಿದೆ. ಈ ಆರೋಪಗಳ ಬಗ್ಗೆ ಇಸ್ರೇಲ್ ಸೇನೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಾಝಾದಲ್ಲಿ ವೈಮಾನಿಕ ದಾಳಿ ಮಾತ್ರವಲ್ಲದೆ, ನಗರದ ಮನೆ ಮನೆಗೆ ನುಗ್ಗಿ ಇಸ್ರೇಲ್‌ ಸೇನೆ ಆಕ್ರಮಣ ನಡೆಸುತ್ತಿದೆ. ಕಳೆದ ಮಂಗಳವಾರ ಈ ರೀತಿಯ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಹಲವು ಮಂದಿಯ ಮೃತದೇಹಗಳನ್ನು ಹಸ್ತಾಂತರಿಸಿದೆ.

ಗಾಝಾದ ಆರೋಗ್ಯ ಸಚಿವಾಲಯ ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಕೆರೆಮ್ ಶಾಲೋಮ್ ಗಡಿಯಲ್ಲಿ ಮೃತದೇಹಗಳನ್ನು ಸ್ವೀಕರಿಸಿದೆ. ಗಾಝಾದ ಧಾರ್ಮಿಕ ವ್ಯವಹಾರಗಳ ಸಚಿವಾಲಯ ಎಲ್ಲಾ ಮೃತದೇಹಗಳನ್ನು ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಿದೆ.

ಗಾಝಾ ಪಟ್ಟಿಗೆ ಹಲವು ಮೃತದೇಹಗಳನ್ನು ಇಸ್ರೇಲ್ ಹಸ್ತಾಂತರಿಸಲಿದೆ ಎಂದು ನಮಗೆ ವಿಶ್ವಸಂಸ್ಥೆಯ ಪ್ರತಿ ನಿಧಿಗಳು ಮಾಹಿತಿ ನೀಡಿದ್ದರು. ಸುಮಾರು 80 ಮಂದಿಯ ಮೃತದೇಹಗಳನ್ನು ಸ್ವೀಕರಿಸಲಾಗಿದೆ ಎಂದು ರಾಫಾ ನಗರದ ಮೊಹಮ್ಮದ್ ಯೂಸುಫ್ ಅಲ್-ನಝರ್ ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಅಲ್-ಹಮ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಂಟೇನರ್‌ನಲ್ಲಿ ಮೃತದೇಹಗಳನ್ನು ನಮಗೆ ಹಸ್ತಾಂತರಿಸಲಾಗಿದೆ. ಅವುಗಳಲ್ಲಿ ಹಲವು ಮೃತದೇಹಗಳು ತುಂಡು ತುಂಡಾಗಿದ್ದವು, ಇನ್ನೂ ಹಲವು ಕೊಳೆತಿದ್ದವು. ಪ್ಯಾಲೆಸ್ತೀನ್ ಆರೋಗ್ಯ ಮತ್ತು ನ್ಯಾಯ ಇಲಾಖೆ ಇದನ್ನು ಇಸ್ರೇಲಿ ಯುದ್ಧಪರಾಧ ಎಂದು ಪರಿಗಣಿಸುವುದಾಗಿ ಯುದ್ಧದ ಭೀಕರತೆಯನ್ನು ಮರ್ವಾನ್ ಅಲ್-ಹಮ್ಸ್ ವಿವರಿಸಿದ್ದಾರೆ.

ಇದನ್ನೂ ಓದಿ : ಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...