Homeಮುಖಪುಟಇಸ್ರೇಲ್‌ನಿಂದ ಪ್ಯಾಲೆಸ್ತೀನ್ ನಾಗರಿಕರ ಅಂಗಾಂಗ ಕಳವು: ಗಾಝಾ ಅಧಿಕಾರಿಗಳಿಂದ ಆರೋಪ

ಇಸ್ರೇಲ್‌ನಿಂದ ಪ್ಯಾಲೆಸ್ತೀನ್ ನಾಗರಿಕರ ಅಂಗಾಂಗ ಕಳವು: ಗಾಝಾ ಅಧಿಕಾರಿಗಳಿಂದ ಆರೋಪ

- Advertisement -
- Advertisement -

ಯುದ್ಧಕ್ಕೆ ಬಲಿಯಾದ ಪ್ಯಾಲೆಸ್ತೀನ್ ನಾಗರಿಕರ ಮೃತದೇಹಗಳಿಂದ ಇಸ್ರೇಲ್ ಸೇನೆ ಅಂಗಾಂಗಳನ್ನು ಕದಿಯುತ್ತಿದೆ ಎಂದು ಗಾಝಾದ ಸ್ಥಳೀಯ ಅಧಿಕಾರಿಗಳು ಆರೋಪಿಸಿದ್ದು, ಅಂತಾರಾಷ್ಟ್ರೀಯ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಅನೇಕ ಮಂದಿ ಪ್ಯಾಲೆಸ್ತೀನ್ ನಾಗರಿಕರ ಮೃತದೇಹಗಳ ಆಕಾರ ಬದಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಅಂಗಾಂಗ ಕಳವು ಮಾಡಿರುವುದು ಬಯಲಾಗಿದೆ ಎಂದು ಗಾಝಾ ಮೂಲದ ಸರ್ಕಾರಿ ಮಾಧ್ಯಮ ಕಚೇರಿಯೊಂದು ಹೇಳಿರುವುದಾಗಿ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇಸ್ರೇಲ್‌ ಸೇನೆಯು ಮೃತರ ಹೆಸರನ್ನು ಮತ್ತು ಎಲ್ಲಿ ಮೃತದೇಹಗಳು ದೊರೆತಿದೆ ಎಂಬುವುದರ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಹೂತಿಟ್ಟ ಮೃತದೇಹಗಳನ್ನೂ ಅವರು ಹೊರ ತೆಗೆದಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಆರೋಪಿಸಿದೆ.

ಇಸ್ರೇಲ್ ಇಂತಹ ಭಯಾನಕ ಅಪರಾಧ ನಡೆಸುತ್ತಿದ್ದರೂ ಗಾಝಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೆಡ್ ಕ್ರಾಸ್‌ನ ಅಂತಾರಾಷ್ಟ್ರೀಯ ಸಮಿತಿ ಮೌನ ತಾಳಿದೆ ಎಂದು ಕಿಡಿಕಾರಿದೆ. ಈ ಆರೋಪಗಳ ಬಗ್ಗೆ ಇಸ್ರೇಲ್ ಸೇನೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಾಝಾದಲ್ಲಿ ವೈಮಾನಿಕ ದಾಳಿ ಮಾತ್ರವಲ್ಲದೆ, ನಗರದ ಮನೆ ಮನೆಗೆ ನುಗ್ಗಿ ಇಸ್ರೇಲ್‌ ಸೇನೆ ಆಕ್ರಮಣ ನಡೆಸುತ್ತಿದೆ. ಕಳೆದ ಮಂಗಳವಾರ ಈ ರೀತಿಯ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಹಲವು ಮಂದಿಯ ಮೃತದೇಹಗಳನ್ನು ಹಸ್ತಾಂತರಿಸಿದೆ.

ಗಾಝಾದ ಆರೋಗ್ಯ ಸಚಿವಾಲಯ ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಕೆರೆಮ್ ಶಾಲೋಮ್ ಗಡಿಯಲ್ಲಿ ಮೃತದೇಹಗಳನ್ನು ಸ್ವೀಕರಿಸಿದೆ. ಗಾಝಾದ ಧಾರ್ಮಿಕ ವ್ಯವಹಾರಗಳ ಸಚಿವಾಲಯ ಎಲ್ಲಾ ಮೃತದೇಹಗಳನ್ನು ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಿದೆ.

ಗಾಝಾ ಪಟ್ಟಿಗೆ ಹಲವು ಮೃತದೇಹಗಳನ್ನು ಇಸ್ರೇಲ್ ಹಸ್ತಾಂತರಿಸಲಿದೆ ಎಂದು ನಮಗೆ ವಿಶ್ವಸಂಸ್ಥೆಯ ಪ್ರತಿ ನಿಧಿಗಳು ಮಾಹಿತಿ ನೀಡಿದ್ದರು. ಸುಮಾರು 80 ಮಂದಿಯ ಮೃತದೇಹಗಳನ್ನು ಸ್ವೀಕರಿಸಲಾಗಿದೆ ಎಂದು ರಾಫಾ ನಗರದ ಮೊಹಮ್ಮದ್ ಯೂಸುಫ್ ಅಲ್-ನಝರ್ ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಅಲ್-ಹಮ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಂಟೇನರ್‌ನಲ್ಲಿ ಮೃತದೇಹಗಳನ್ನು ನಮಗೆ ಹಸ್ತಾಂತರಿಸಲಾಗಿದೆ. ಅವುಗಳಲ್ಲಿ ಹಲವು ಮೃತದೇಹಗಳು ತುಂಡು ತುಂಡಾಗಿದ್ದವು, ಇನ್ನೂ ಹಲವು ಕೊಳೆತಿದ್ದವು. ಪ್ಯಾಲೆಸ್ತೀನ್ ಆರೋಗ್ಯ ಮತ್ತು ನ್ಯಾಯ ಇಲಾಖೆ ಇದನ್ನು ಇಸ್ರೇಲಿ ಯುದ್ಧಪರಾಧ ಎಂದು ಪರಿಗಣಿಸುವುದಾಗಿ ಯುದ್ಧದ ಭೀಕರತೆಯನ್ನು ಮರ್ವಾನ್ ಅಲ್-ಹಮ್ಸ್ ವಿವರಿಸಿದ್ದಾರೆ.

ಇದನ್ನೂ ಓದಿ : ಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...