Homeಮುಖಪುಟಇಸ್ರೇಲ್‌ನಿಂದ ಪ್ಯಾಲೆಸ್ತೀನ್ ನಾಗರಿಕರ ಅಂಗಾಂಗ ಕಳವು: ಗಾಝಾ ಅಧಿಕಾರಿಗಳಿಂದ ಆರೋಪ

ಇಸ್ರೇಲ್‌ನಿಂದ ಪ್ಯಾಲೆಸ್ತೀನ್ ನಾಗರಿಕರ ಅಂಗಾಂಗ ಕಳವು: ಗಾಝಾ ಅಧಿಕಾರಿಗಳಿಂದ ಆರೋಪ

- Advertisement -
- Advertisement -

ಯುದ್ಧಕ್ಕೆ ಬಲಿಯಾದ ಪ್ಯಾಲೆಸ್ತೀನ್ ನಾಗರಿಕರ ಮೃತದೇಹಗಳಿಂದ ಇಸ್ರೇಲ್ ಸೇನೆ ಅಂಗಾಂಗಳನ್ನು ಕದಿಯುತ್ತಿದೆ ಎಂದು ಗಾಝಾದ ಸ್ಥಳೀಯ ಅಧಿಕಾರಿಗಳು ಆರೋಪಿಸಿದ್ದು, ಅಂತಾರಾಷ್ಟ್ರೀಯ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ಅನೇಕ ಮಂದಿ ಪ್ಯಾಲೆಸ್ತೀನ್ ನಾಗರಿಕರ ಮೃತದೇಹಗಳ ಆಕಾರ ಬದಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ಅಂಗಾಂಗ ಕಳವು ಮಾಡಿರುವುದು ಬಯಲಾಗಿದೆ ಎಂದು ಗಾಝಾ ಮೂಲದ ಸರ್ಕಾರಿ ಮಾಧ್ಯಮ ಕಚೇರಿಯೊಂದು ಹೇಳಿರುವುದಾಗಿ ಅಂತರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇಸ್ರೇಲ್‌ ಸೇನೆಯು ಮೃತರ ಹೆಸರನ್ನು ಮತ್ತು ಎಲ್ಲಿ ಮೃತದೇಹಗಳು ದೊರೆತಿದೆ ಎಂಬುವುದರ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಹೂತಿಟ್ಟ ಮೃತದೇಹಗಳನ್ನೂ ಅವರು ಹೊರ ತೆಗೆದಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಆರೋಪಿಸಿದೆ.

ಇಸ್ರೇಲ್ ಇಂತಹ ಭಯಾನಕ ಅಪರಾಧ ನಡೆಸುತ್ತಿದ್ದರೂ ಗಾಝಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೆಡ್ ಕ್ರಾಸ್‌ನ ಅಂತಾರಾಷ್ಟ್ರೀಯ ಸಮಿತಿ ಮೌನ ತಾಳಿದೆ ಎಂದು ಕಿಡಿಕಾರಿದೆ. ಈ ಆರೋಪಗಳ ಬಗ್ಗೆ ಇಸ್ರೇಲ್ ಸೇನೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗಾಝಾದಲ್ಲಿ ವೈಮಾನಿಕ ದಾಳಿ ಮಾತ್ರವಲ್ಲದೆ, ನಗರದ ಮನೆ ಮನೆಗೆ ನುಗ್ಗಿ ಇಸ್ರೇಲ್‌ ಸೇನೆ ಆಕ್ರಮಣ ನಡೆಸುತ್ತಿದೆ. ಕಳೆದ ಮಂಗಳವಾರ ಈ ರೀತಿಯ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಹಲವು ಮಂದಿಯ ಮೃತದೇಹಗಳನ್ನು ಹಸ್ತಾಂತರಿಸಿದೆ.

ಗಾಝಾದ ಆರೋಗ್ಯ ಸಚಿವಾಲಯ ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಕೆರೆಮ್ ಶಾಲೋಮ್ ಗಡಿಯಲ್ಲಿ ಮೃತದೇಹಗಳನ್ನು ಸ್ವೀಕರಿಸಿದೆ. ಗಾಝಾದ ಧಾರ್ಮಿಕ ವ್ಯವಹಾರಗಳ ಸಚಿವಾಲಯ ಎಲ್ಲಾ ಮೃತದೇಹಗಳನ್ನು ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಿದೆ.

ಗಾಝಾ ಪಟ್ಟಿಗೆ ಹಲವು ಮೃತದೇಹಗಳನ್ನು ಇಸ್ರೇಲ್ ಹಸ್ತಾಂತರಿಸಲಿದೆ ಎಂದು ನಮಗೆ ವಿಶ್ವಸಂಸ್ಥೆಯ ಪ್ರತಿ ನಿಧಿಗಳು ಮಾಹಿತಿ ನೀಡಿದ್ದರು. ಸುಮಾರು 80 ಮಂದಿಯ ಮೃತದೇಹಗಳನ್ನು ಸ್ವೀಕರಿಸಲಾಗಿದೆ ಎಂದು ರಾಫಾ ನಗರದ ಮೊಹಮ್ಮದ್ ಯೂಸುಫ್ ಅಲ್-ನಝರ್ ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಅಲ್-ಹಮ್ಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಂಟೇನರ್‌ನಲ್ಲಿ ಮೃತದೇಹಗಳನ್ನು ನಮಗೆ ಹಸ್ತಾಂತರಿಸಲಾಗಿದೆ. ಅವುಗಳಲ್ಲಿ ಹಲವು ಮೃತದೇಹಗಳು ತುಂಡು ತುಂಡಾಗಿದ್ದವು, ಇನ್ನೂ ಹಲವು ಕೊಳೆತಿದ್ದವು. ಪ್ಯಾಲೆಸ್ತೀನ್ ಆರೋಗ್ಯ ಮತ್ತು ನ್ಯಾಯ ಇಲಾಖೆ ಇದನ್ನು ಇಸ್ರೇಲಿ ಯುದ್ಧಪರಾಧ ಎಂದು ಪರಿಗಣಿಸುವುದಾಗಿ ಯುದ್ಧದ ಭೀಕರತೆಯನ್ನು ಮರ್ವಾನ್ ಅಲ್-ಹಮ್ಸ್ ವಿವರಿಸಿದ್ದಾರೆ.

ಇದನ್ನೂ ಓದಿ : ಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...