Homeಮುಖಪುಟಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಮನೆಗಳತ್ತ ಮರಳುತ್ತಿರುವ ಪ್ಯಾಲೆಸ್ತೀನಿಯರು

- Advertisement -
- Advertisement -

ಸುಮಾರು ಒಂದೂವರೆ ವರ್ಷಗಳ ಭೀಕರ ಯುದ್ದದ ಬಳಿಕ ಗಾಝಾದಲ್ಲಿ ಕದನ ವಿರಾಮ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಒಪ್ಪಂದಂತೆ ಒತ್ತೆಯಾಳುಗಳು ಮತ್ತು ಬಂಧಿತರ ಬಿಡುಗಡೆಯಾಗಿದೆ.

ಕದನ ವಿರಾಮದ ಮೊದಲ ಹಂತವಾಗಿ ಭಾನುವಾರ (ಜ.19) ಹಮಾಸ್ ಗುಂಪು 3 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಸೋಮವಾರ (ಜ.20) ಇಸ್ರೇಲ್ 90 ಮಂದಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

PC : ndtv.com

ಈ ಮೂಲಕ 46ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರನ್ನು ಬಲಿ ತೆಗೆದುಕೊಂಡ ಇಸ್ರೇಲ್‌ನ ನಿರಂತರ ಆಕ್ರಮಣ ಶಾಶ್ವತವಾಗಿ ಕೊನೆಗೊಳ್ಳುವ ಆಶಾ ಭಾವನೆ ಮೂಡಿದೆ.

ಹಮಾಸ್ ಭಾನುವಾರ ಬಿಡುಗಡೆ ಮಾಡಿರುವ ಒತ್ತೆಯಾಳುಗಳಲ್ಲಿ ಮೂವರೂ ಮಹಿಳೆಯರು. ಕದನ ವಿರಾಮದ ಮೊದಲ ಹಂತವಾಗಿ ಮುಂದಿನ 6 ವಾರಗಳಲ್ಲಿ ಹಮಾಸ್ ಒಟ್ಟು 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಬಂಧಿತರನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7,2023ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಟೆಲ್‌ ಅವೀವ್‌ನ ನೋವಾ ಸಂಗೀತ ಉತ್ಸವದಿಂದ ಅಪಹರಿಸಲ್ಪಟ್ಟ 24 ವರ್ಷದ ರೋಮಿ ಗೊನೆನ್, ಕಿಬ್ಬುಟ್ಜ್ ಕ್ಫರ್ ಆಝಾದಿಂದ ಅಪಹರಿಸಲ್ಪಟ್ಟ 28 ವರ್ಷದ ಎಮಿಲಿ ಡಮರಿ ಮತ್ತು 31 ವರ್ಷದ ಡೊರೊನ್ ಸ್ಟೈನ್ಬ್ರೆಚರ್ ಎಂಬ ಮೂವರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇವರನ್ನು ಕುಟುಂಬಸ್ಥರು ಮತ್ತು ಇತರರು ಸೇರಿ ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದ್ದಾರೆ.

ಇದೇ ರೀತಿ ಇಸ್ರೇಲ್ ಬಂಧಿಸಿ ಜೈಲಿನಲ್ಲಿಟ್ಟಿದ 90 ಪ್ಯಾಲೆಸ್ತೀನಿಯರು ಕೂಡ ಬಿಡುಗಡೆಯಾಗಿದ್ದಾರೆ. ಅವರನ್ನೂ ಕುಟುಂಬಸ್ಥರು ಮತ್ತು ಇತರರು ಕಣ್ಣೀರು ಹಾಕುತ್ತಾ ಬರಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮನೆಗಳಿಗೆ ಮರಳುತ್ತಿರುವ ಗಾಝಾ ಜನತೆ

ಕದನ ವಿರಾಮದ ಮೊದಲ ಹಂತ ಜಾರಿಯಾಗುತ್ತಿದ್ದಂತೆ ಗಾಝಾ ಜನತೆ ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ಮರಳುತ್ತಿದ್ದಾರೆ. ಭಾನುವಾರ ಸಾವಿರಾರು ಜನರು ಉತ್ತರ ಗಾಝಾದ ಜಬಲಿಯಾ ಪ್ರದೇಶಕ್ಕೆ ಮರಳುತ್ತಿದ್ದ ದೃಶ್ಯಗಳು ಅಂತಾರಾಷ್ಟ್ರೀಯ ಮಾಧ್ಯಗಳಲ್ಲಿ ಕಂಡು ಬಂದಿವೆ.

PC : Reuters Via dailysabah.com

15 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡರೂ, ಕದನ ವಿರಾಮ ಘೋಷಣೆಯಾಗಿರುವುದಕ್ಕೆ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ದುಖಃದ ನಡುವೆ ಅವರಲ್ಲಿ ಮಂದಹಾಸ ಕಂಡು ಬಂದಿದೆ. ತಮ್ಮ ಮೂಲ ಸ್ಥಳಗಳಿಗೆ ಮರಳಿದ ಅನೇಕರಿಗೆ ತಮ್ಮ ಮನೆಗಳು ಎಲ್ಲಿತ್ತು ಎಂಬುವುದೇ ಗೊತ್ತಾಗುತ್ತಿಲ್ಲ. ಉತ್ತರ ಗಾಝಾ ಸಂಪೂರ್ಣ ಜನ ವಾಸಿಸಲು ಅಸಾಧ್ಯವಾದ ಸ್ಥಿತಿಗೆ ಬದಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

PC : aljazeera.com

ಉತ್ತರ ಗಾಝಾದ ಜಬಲಿಯಾ ನಗರ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಸುಮಾರು 250,000ಕ್ಕೂ ಅಧಿಕ ಜನರ ಅಶ್ರಯ ತಾಣವಾಗಿತ್ತು. ಇಸ್ರೇಲ್ ಈ ನಗರದ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಈ ದಾಳಿಗಳಲ್ಲಿ 4,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಜಬಲಿಯಾದಲ್ಲಿ ಈಗ ಬರೀ ಕಟ್ಟಡಗಳ ಅವಶೇಷಗಳು ಮಾತ್ರ ಉಳಿದಿವೆ.

ಮಾನವೀಯ ನೆರವು

ಕದನ ವಿರಾಮದ ಒಪ್ಪಂದಂತೆ ಇಸ್ರೇಲ್ ಸೇನೆಯು ಗಾಝಾದ ಬಫರ್ ವಲಯದಿಂದ ಹಂತ ಹಂತವಾಗಿ ಹಿಂದೆ ಸರಿಯಬೇಕು. ಜನರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಸುವ ಮಾನವೀಯ ನೆರವಿಗೆ ಅನುವು ಮಾಡಿಕೊಡಬೇಕು.

ವಿಶ್ವಸಂಸ್ಥೆಯ ವಿವಿಧ ತಂಡಗಳು, ಮಾನವ ಹಕ್ಕು ಸಂಘಟನೆ ರೆಡ್ ಕ್ರೆಸೆಂಟ್ ಸೇರಿದಂತೆ ಹಲವರು ಗಾಝಾದ ಜನತೆಯ ಬದುಕನ್ನು ಮರು ರೂಪಿಸಲು ಸಿದ್ದರಾಗಿ ನಿಂತಿದ್ದಾರೆ. ಅಲ್ -ಜಝೀರಾ ವರದಿಯ ಪ್ರಕಾರ, ಕದನ ವಿರಾಮದ ಮೊದಲ ಹಂತವಾಗಿ ಅಗತ್ಯ ಸಾಮಾಗ್ರಿಗಳನ್ನು ಹೊತ್ತ 600ಕ್ಕೂ ಹೆಚ್ಚು ಟ್ರಕ್‌ಗಳು ಭಾನುವಾರ ಗಾಝಾ ಪ್ರವೇಶಿಸಿವೆ.

PC : Egyptian Government Press Center via timesofisrael.com

ಅಕ್ಟೋಬರ್ 7, 2023ರಿಂದ ಇಸ್ರೇಲ್ ನಡೆಸಿದ ಗಾಝಾ ಮೇಲಿನ ಆಕ್ರಮಣದಲ್ಲಿ ಇದುವರೆಗೆ 46,913 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,750 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ನೇತೃತ್ವದ ಗುಂಪುಗಳು ಇಸ್ರೇಲ್‌ನ ಟೆಲ್ ಅವೀವ್ ನಗರದ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಸೆರೆ ಹಿಡಿದ ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...