Homeಮುಖಪುಟಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಮನೆಗಳತ್ತ ಮರಳುತ್ತಿರುವ ಪ್ಯಾಲೆಸ್ತೀನಿಯರು

- Advertisement -
- Advertisement -

ಸುಮಾರು ಒಂದೂವರೆ ವರ್ಷಗಳ ಭೀಕರ ಯುದ್ದದ ಬಳಿಕ ಗಾಝಾದಲ್ಲಿ ಕದನ ವಿರಾಮ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಒಪ್ಪಂದಂತೆ ಒತ್ತೆಯಾಳುಗಳು ಮತ್ತು ಬಂಧಿತರ ಬಿಡುಗಡೆಯಾಗಿದೆ.

ಕದನ ವಿರಾಮದ ಮೊದಲ ಹಂತವಾಗಿ ಭಾನುವಾರ (ಜ.19) ಹಮಾಸ್ ಗುಂಪು 3 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಸೋಮವಾರ (ಜ.20) ಇಸ್ರೇಲ್ 90 ಮಂದಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

PC : ndtv.com

ಈ ಮೂಲಕ 46ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರನ್ನು ಬಲಿ ತೆಗೆದುಕೊಂಡ ಇಸ್ರೇಲ್‌ನ ನಿರಂತರ ಆಕ್ರಮಣ ಶಾಶ್ವತವಾಗಿ ಕೊನೆಗೊಳ್ಳುವ ಆಶಾ ಭಾವನೆ ಮೂಡಿದೆ.

ಹಮಾಸ್ ಭಾನುವಾರ ಬಿಡುಗಡೆ ಮಾಡಿರುವ ಒತ್ತೆಯಾಳುಗಳಲ್ಲಿ ಮೂವರೂ ಮಹಿಳೆಯರು. ಕದನ ವಿರಾಮದ ಮೊದಲ ಹಂತವಾಗಿ ಮುಂದಿನ 6 ವಾರಗಳಲ್ಲಿ ಹಮಾಸ್ ಒಟ್ಟು 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಬಂಧಿತರನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7,2023ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಟೆಲ್‌ ಅವೀವ್‌ನ ನೋವಾ ಸಂಗೀತ ಉತ್ಸವದಿಂದ ಅಪಹರಿಸಲ್ಪಟ್ಟ 24 ವರ್ಷದ ರೋಮಿ ಗೊನೆನ್, ಕಿಬ್ಬುಟ್ಜ್ ಕ್ಫರ್ ಆಝಾದಿಂದ ಅಪಹರಿಸಲ್ಪಟ್ಟ 28 ವರ್ಷದ ಎಮಿಲಿ ಡಮರಿ ಮತ್ತು 31 ವರ್ಷದ ಡೊರೊನ್ ಸ್ಟೈನ್ಬ್ರೆಚರ್ ಎಂಬ ಮೂವರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇವರನ್ನು ಕುಟುಂಬಸ್ಥರು ಮತ್ತು ಇತರರು ಸೇರಿ ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದ್ದಾರೆ.

ಇದೇ ರೀತಿ ಇಸ್ರೇಲ್ ಬಂಧಿಸಿ ಜೈಲಿನಲ್ಲಿಟ್ಟಿದ 90 ಪ್ಯಾಲೆಸ್ತೀನಿಯರು ಕೂಡ ಬಿಡುಗಡೆಯಾಗಿದ್ದಾರೆ. ಅವರನ್ನೂ ಕುಟುಂಬಸ್ಥರು ಮತ್ತು ಇತರರು ಕಣ್ಣೀರು ಹಾಕುತ್ತಾ ಬರಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮನೆಗಳಿಗೆ ಮರಳುತ್ತಿರುವ ಗಾಝಾ ಜನತೆ

ಕದನ ವಿರಾಮದ ಮೊದಲ ಹಂತ ಜಾರಿಯಾಗುತ್ತಿದ್ದಂತೆ ಗಾಝಾ ಜನತೆ ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ಮರಳುತ್ತಿದ್ದಾರೆ. ಭಾನುವಾರ ಸಾವಿರಾರು ಜನರು ಉತ್ತರ ಗಾಝಾದ ಜಬಲಿಯಾ ಪ್ರದೇಶಕ್ಕೆ ಮರಳುತ್ತಿದ್ದ ದೃಶ್ಯಗಳು ಅಂತಾರಾಷ್ಟ್ರೀಯ ಮಾಧ್ಯಗಳಲ್ಲಿ ಕಂಡು ಬಂದಿವೆ.

PC : Reuters Via dailysabah.com

15 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡರೂ, ಕದನ ವಿರಾಮ ಘೋಷಣೆಯಾಗಿರುವುದಕ್ಕೆ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ದುಖಃದ ನಡುವೆ ಅವರಲ್ಲಿ ಮಂದಹಾಸ ಕಂಡು ಬಂದಿದೆ. ತಮ್ಮ ಮೂಲ ಸ್ಥಳಗಳಿಗೆ ಮರಳಿದ ಅನೇಕರಿಗೆ ತಮ್ಮ ಮನೆಗಳು ಎಲ್ಲಿತ್ತು ಎಂಬುವುದೇ ಗೊತ್ತಾಗುತ್ತಿಲ್ಲ. ಉತ್ತರ ಗಾಝಾ ಸಂಪೂರ್ಣ ಜನ ವಾಸಿಸಲು ಅಸಾಧ್ಯವಾದ ಸ್ಥಿತಿಗೆ ಬದಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

PC : aljazeera.com

ಉತ್ತರ ಗಾಝಾದ ಜಬಲಿಯಾ ನಗರ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಸುಮಾರು 250,000ಕ್ಕೂ ಅಧಿಕ ಜನರ ಅಶ್ರಯ ತಾಣವಾಗಿತ್ತು. ಇಸ್ರೇಲ್ ಈ ನಗರದ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಈ ದಾಳಿಗಳಲ್ಲಿ 4,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಜಬಲಿಯಾದಲ್ಲಿ ಈಗ ಬರೀ ಕಟ್ಟಡಗಳ ಅವಶೇಷಗಳು ಮಾತ್ರ ಉಳಿದಿವೆ.

ಮಾನವೀಯ ನೆರವು

ಕದನ ವಿರಾಮದ ಒಪ್ಪಂದಂತೆ ಇಸ್ರೇಲ್ ಸೇನೆಯು ಗಾಝಾದ ಬಫರ್ ವಲಯದಿಂದ ಹಂತ ಹಂತವಾಗಿ ಹಿಂದೆ ಸರಿಯಬೇಕು. ಜನರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಸುವ ಮಾನವೀಯ ನೆರವಿಗೆ ಅನುವು ಮಾಡಿಕೊಡಬೇಕು.

ವಿಶ್ವಸಂಸ್ಥೆಯ ವಿವಿಧ ತಂಡಗಳು, ಮಾನವ ಹಕ್ಕು ಸಂಘಟನೆ ರೆಡ್ ಕ್ರೆಸೆಂಟ್ ಸೇರಿದಂತೆ ಹಲವರು ಗಾಝಾದ ಜನತೆಯ ಬದುಕನ್ನು ಮರು ರೂಪಿಸಲು ಸಿದ್ದರಾಗಿ ನಿಂತಿದ್ದಾರೆ. ಅಲ್ -ಜಝೀರಾ ವರದಿಯ ಪ್ರಕಾರ, ಕದನ ವಿರಾಮದ ಮೊದಲ ಹಂತವಾಗಿ ಅಗತ್ಯ ಸಾಮಾಗ್ರಿಗಳನ್ನು ಹೊತ್ತ 600ಕ್ಕೂ ಹೆಚ್ಚು ಟ್ರಕ್‌ಗಳು ಭಾನುವಾರ ಗಾಝಾ ಪ್ರವೇಶಿಸಿವೆ.

PC : Egyptian Government Press Center via timesofisrael.com

ಅಕ್ಟೋಬರ್ 7, 2023ರಿಂದ ಇಸ್ರೇಲ್ ನಡೆಸಿದ ಗಾಝಾ ಮೇಲಿನ ಆಕ್ರಮಣದಲ್ಲಿ ಇದುವರೆಗೆ 46,913 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,750 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ನೇತೃತ್ವದ ಗುಂಪುಗಳು ಇಸ್ರೇಲ್‌ನ ಟೆಲ್ ಅವೀವ್ ನಗರದ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಸೆರೆ ಹಿಡಿದ ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...