Homeಮುಖಪುಟಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಮನೆಗಳತ್ತ ಮರಳುತ್ತಿರುವ ಪ್ಯಾಲೆಸ್ತೀನಿಯರು

- Advertisement -
- Advertisement -

ಸುಮಾರು ಒಂದೂವರೆ ವರ್ಷಗಳ ಭೀಕರ ಯುದ್ದದ ಬಳಿಕ ಗಾಝಾದಲ್ಲಿ ಕದನ ವಿರಾಮ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಒಪ್ಪಂದಂತೆ ಒತ್ತೆಯಾಳುಗಳು ಮತ್ತು ಬಂಧಿತರ ಬಿಡುಗಡೆಯಾಗಿದೆ.

ಕದನ ವಿರಾಮದ ಮೊದಲ ಹಂತವಾಗಿ ಭಾನುವಾರ (ಜ.19) ಹಮಾಸ್ ಗುಂಪು 3 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಸೋಮವಾರ (ಜ.20) ಇಸ್ರೇಲ್ 90 ಮಂದಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

PC : ndtv.com

ಈ ಮೂಲಕ 46ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರನ್ನು ಬಲಿ ತೆಗೆದುಕೊಂಡ ಇಸ್ರೇಲ್‌ನ ನಿರಂತರ ಆಕ್ರಮಣ ಶಾಶ್ವತವಾಗಿ ಕೊನೆಗೊಳ್ಳುವ ಆಶಾ ಭಾವನೆ ಮೂಡಿದೆ.

ಹಮಾಸ್ ಭಾನುವಾರ ಬಿಡುಗಡೆ ಮಾಡಿರುವ ಒತ್ತೆಯಾಳುಗಳಲ್ಲಿ ಮೂವರೂ ಮಹಿಳೆಯರು. ಕದನ ವಿರಾಮದ ಮೊದಲ ಹಂತವಾಗಿ ಮುಂದಿನ 6 ವಾರಗಳಲ್ಲಿ ಹಮಾಸ್ ಒಟ್ಟು 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಬಂಧಿತರನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7,2023ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಟೆಲ್‌ ಅವೀವ್‌ನ ನೋವಾ ಸಂಗೀತ ಉತ್ಸವದಿಂದ ಅಪಹರಿಸಲ್ಪಟ್ಟ 24 ವರ್ಷದ ರೋಮಿ ಗೊನೆನ್, ಕಿಬ್ಬುಟ್ಜ್ ಕ್ಫರ್ ಆಝಾದಿಂದ ಅಪಹರಿಸಲ್ಪಟ್ಟ 28 ವರ್ಷದ ಎಮಿಲಿ ಡಮರಿ ಮತ್ತು 31 ವರ್ಷದ ಡೊರೊನ್ ಸ್ಟೈನ್ಬ್ರೆಚರ್ ಎಂಬ ಮೂವರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇವರನ್ನು ಕುಟುಂಬಸ್ಥರು ಮತ್ತು ಇತರರು ಸೇರಿ ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದ್ದಾರೆ.

ಇದೇ ರೀತಿ ಇಸ್ರೇಲ್ ಬಂಧಿಸಿ ಜೈಲಿನಲ್ಲಿಟ್ಟಿದ 90 ಪ್ಯಾಲೆಸ್ತೀನಿಯರು ಕೂಡ ಬಿಡುಗಡೆಯಾಗಿದ್ದಾರೆ. ಅವರನ್ನೂ ಕುಟುಂಬಸ್ಥರು ಮತ್ತು ಇತರರು ಕಣ್ಣೀರು ಹಾಕುತ್ತಾ ಬರಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮನೆಗಳಿಗೆ ಮರಳುತ್ತಿರುವ ಗಾಝಾ ಜನತೆ

ಕದನ ವಿರಾಮದ ಮೊದಲ ಹಂತ ಜಾರಿಯಾಗುತ್ತಿದ್ದಂತೆ ಗಾಝಾ ಜನತೆ ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ಮರಳುತ್ತಿದ್ದಾರೆ. ಭಾನುವಾರ ಸಾವಿರಾರು ಜನರು ಉತ್ತರ ಗಾಝಾದ ಜಬಲಿಯಾ ಪ್ರದೇಶಕ್ಕೆ ಮರಳುತ್ತಿದ್ದ ದೃಶ್ಯಗಳು ಅಂತಾರಾಷ್ಟ್ರೀಯ ಮಾಧ್ಯಗಳಲ್ಲಿ ಕಂಡು ಬಂದಿವೆ.

PC : Reuters Via dailysabah.com

15 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡರೂ, ಕದನ ವಿರಾಮ ಘೋಷಣೆಯಾಗಿರುವುದಕ್ಕೆ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ದುಖಃದ ನಡುವೆ ಅವರಲ್ಲಿ ಮಂದಹಾಸ ಕಂಡು ಬಂದಿದೆ. ತಮ್ಮ ಮೂಲ ಸ್ಥಳಗಳಿಗೆ ಮರಳಿದ ಅನೇಕರಿಗೆ ತಮ್ಮ ಮನೆಗಳು ಎಲ್ಲಿತ್ತು ಎಂಬುವುದೇ ಗೊತ್ತಾಗುತ್ತಿಲ್ಲ. ಉತ್ತರ ಗಾಝಾ ಸಂಪೂರ್ಣ ಜನ ವಾಸಿಸಲು ಅಸಾಧ್ಯವಾದ ಸ್ಥಿತಿಗೆ ಬದಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

PC : aljazeera.com

ಉತ್ತರ ಗಾಝಾದ ಜಬಲಿಯಾ ನಗರ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಸುಮಾರು 250,000ಕ್ಕೂ ಅಧಿಕ ಜನರ ಅಶ್ರಯ ತಾಣವಾಗಿತ್ತು. ಇಸ್ರೇಲ್ ಈ ನಗರದ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಈ ದಾಳಿಗಳಲ್ಲಿ 4,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಜಬಲಿಯಾದಲ್ಲಿ ಈಗ ಬರೀ ಕಟ್ಟಡಗಳ ಅವಶೇಷಗಳು ಮಾತ್ರ ಉಳಿದಿವೆ.

ಮಾನವೀಯ ನೆರವು

ಕದನ ವಿರಾಮದ ಒಪ್ಪಂದಂತೆ ಇಸ್ರೇಲ್ ಸೇನೆಯು ಗಾಝಾದ ಬಫರ್ ವಲಯದಿಂದ ಹಂತ ಹಂತವಾಗಿ ಹಿಂದೆ ಸರಿಯಬೇಕು. ಜನರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಸುವ ಮಾನವೀಯ ನೆರವಿಗೆ ಅನುವು ಮಾಡಿಕೊಡಬೇಕು.

ವಿಶ್ವಸಂಸ್ಥೆಯ ವಿವಿಧ ತಂಡಗಳು, ಮಾನವ ಹಕ್ಕು ಸಂಘಟನೆ ರೆಡ್ ಕ್ರೆಸೆಂಟ್ ಸೇರಿದಂತೆ ಹಲವರು ಗಾಝಾದ ಜನತೆಯ ಬದುಕನ್ನು ಮರು ರೂಪಿಸಲು ಸಿದ್ದರಾಗಿ ನಿಂತಿದ್ದಾರೆ. ಅಲ್ -ಜಝೀರಾ ವರದಿಯ ಪ್ರಕಾರ, ಕದನ ವಿರಾಮದ ಮೊದಲ ಹಂತವಾಗಿ ಅಗತ್ಯ ಸಾಮಾಗ್ರಿಗಳನ್ನು ಹೊತ್ತ 600ಕ್ಕೂ ಹೆಚ್ಚು ಟ್ರಕ್‌ಗಳು ಭಾನುವಾರ ಗಾಝಾ ಪ್ರವೇಶಿಸಿವೆ.

PC : Egyptian Government Press Center via timesofisrael.com

ಅಕ್ಟೋಬರ್ 7, 2023ರಿಂದ ಇಸ್ರೇಲ್ ನಡೆಸಿದ ಗಾಝಾ ಮೇಲಿನ ಆಕ್ರಮಣದಲ್ಲಿ ಇದುವರೆಗೆ 46,913 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,750 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ನೇತೃತ್ವದ ಗುಂಪುಗಳು ಇಸ್ರೇಲ್‌ನ ಟೆಲ್ ಅವೀವ್ ನಗರದ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಸೆರೆ ಹಿಡಿದ ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...