Homeಮುಖಪುಟಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಮನೆಗಳತ್ತ ಮರಳುತ್ತಿರುವ ಪ್ಯಾಲೆಸ್ತೀನಿಯರು

- Advertisement -
- Advertisement -

ಸುಮಾರು ಒಂದೂವರೆ ವರ್ಷಗಳ ಭೀಕರ ಯುದ್ದದ ಬಳಿಕ ಗಾಝಾದಲ್ಲಿ ಕದನ ವಿರಾಮ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಒಪ್ಪಂದಂತೆ ಒತ್ತೆಯಾಳುಗಳು ಮತ್ತು ಬಂಧಿತರ ಬಿಡುಗಡೆಯಾಗಿದೆ.

ಕದನ ವಿರಾಮದ ಮೊದಲ ಹಂತವಾಗಿ ಭಾನುವಾರ (ಜ.19) ಹಮಾಸ್ ಗುಂಪು 3 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಸೋಮವಾರ (ಜ.20) ಇಸ್ರೇಲ್ 90 ಮಂದಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

PC : ndtv.com

ಈ ಮೂಲಕ 46ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರನ್ನು ಬಲಿ ತೆಗೆದುಕೊಂಡ ಇಸ್ರೇಲ್‌ನ ನಿರಂತರ ಆಕ್ರಮಣ ಶಾಶ್ವತವಾಗಿ ಕೊನೆಗೊಳ್ಳುವ ಆಶಾ ಭಾವನೆ ಮೂಡಿದೆ.

ಹಮಾಸ್ ಭಾನುವಾರ ಬಿಡುಗಡೆ ಮಾಡಿರುವ ಒತ್ತೆಯಾಳುಗಳಲ್ಲಿ ಮೂವರೂ ಮಹಿಳೆಯರು. ಕದನ ವಿರಾಮದ ಮೊದಲ ಹಂತವಾಗಿ ಮುಂದಿನ 6 ವಾರಗಳಲ್ಲಿ ಹಮಾಸ್ ಒಟ್ಟು 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಬಂಧಿತರನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7,2023ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಟೆಲ್‌ ಅವೀವ್‌ನ ನೋವಾ ಸಂಗೀತ ಉತ್ಸವದಿಂದ ಅಪಹರಿಸಲ್ಪಟ್ಟ 24 ವರ್ಷದ ರೋಮಿ ಗೊನೆನ್, ಕಿಬ್ಬುಟ್ಜ್ ಕ್ಫರ್ ಆಝಾದಿಂದ ಅಪಹರಿಸಲ್ಪಟ್ಟ 28 ವರ್ಷದ ಎಮಿಲಿ ಡಮರಿ ಮತ್ತು 31 ವರ್ಷದ ಡೊರೊನ್ ಸ್ಟೈನ್ಬ್ರೆಚರ್ ಎಂಬ ಮೂವರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇವರನ್ನು ಕುಟುಂಬಸ್ಥರು ಮತ್ತು ಇತರರು ಸೇರಿ ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದ್ದಾರೆ.

ಇದೇ ರೀತಿ ಇಸ್ರೇಲ್ ಬಂಧಿಸಿ ಜೈಲಿನಲ್ಲಿಟ್ಟಿದ 90 ಪ್ಯಾಲೆಸ್ತೀನಿಯರು ಕೂಡ ಬಿಡುಗಡೆಯಾಗಿದ್ದಾರೆ. ಅವರನ್ನೂ ಕುಟುಂಬಸ್ಥರು ಮತ್ತು ಇತರರು ಕಣ್ಣೀರು ಹಾಕುತ್ತಾ ಬರಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮನೆಗಳಿಗೆ ಮರಳುತ್ತಿರುವ ಗಾಝಾ ಜನತೆ

ಕದನ ವಿರಾಮದ ಮೊದಲ ಹಂತ ಜಾರಿಯಾಗುತ್ತಿದ್ದಂತೆ ಗಾಝಾ ಜನತೆ ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ಮರಳುತ್ತಿದ್ದಾರೆ. ಭಾನುವಾರ ಸಾವಿರಾರು ಜನರು ಉತ್ತರ ಗಾಝಾದ ಜಬಲಿಯಾ ಪ್ರದೇಶಕ್ಕೆ ಮರಳುತ್ತಿದ್ದ ದೃಶ್ಯಗಳು ಅಂತಾರಾಷ್ಟ್ರೀಯ ಮಾಧ್ಯಗಳಲ್ಲಿ ಕಂಡು ಬಂದಿವೆ.

PC : Reuters Via dailysabah.com

15 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡರೂ, ಕದನ ವಿರಾಮ ಘೋಷಣೆಯಾಗಿರುವುದಕ್ಕೆ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ದುಖಃದ ನಡುವೆ ಅವರಲ್ಲಿ ಮಂದಹಾಸ ಕಂಡು ಬಂದಿದೆ. ತಮ್ಮ ಮೂಲ ಸ್ಥಳಗಳಿಗೆ ಮರಳಿದ ಅನೇಕರಿಗೆ ತಮ್ಮ ಮನೆಗಳು ಎಲ್ಲಿತ್ತು ಎಂಬುವುದೇ ಗೊತ್ತಾಗುತ್ತಿಲ್ಲ. ಉತ್ತರ ಗಾಝಾ ಸಂಪೂರ್ಣ ಜನ ವಾಸಿಸಲು ಅಸಾಧ್ಯವಾದ ಸ್ಥಿತಿಗೆ ಬದಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

PC : aljazeera.com

ಉತ್ತರ ಗಾಝಾದ ಜಬಲಿಯಾ ನಗರ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಸುಮಾರು 250,000ಕ್ಕೂ ಅಧಿಕ ಜನರ ಅಶ್ರಯ ತಾಣವಾಗಿತ್ತು. ಇಸ್ರೇಲ್ ಈ ನಗರದ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಈ ದಾಳಿಗಳಲ್ಲಿ 4,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಜಬಲಿಯಾದಲ್ಲಿ ಈಗ ಬರೀ ಕಟ್ಟಡಗಳ ಅವಶೇಷಗಳು ಮಾತ್ರ ಉಳಿದಿವೆ.

ಮಾನವೀಯ ನೆರವು

ಕದನ ವಿರಾಮದ ಒಪ್ಪಂದಂತೆ ಇಸ್ರೇಲ್ ಸೇನೆಯು ಗಾಝಾದ ಬಫರ್ ವಲಯದಿಂದ ಹಂತ ಹಂತವಾಗಿ ಹಿಂದೆ ಸರಿಯಬೇಕು. ಜನರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಸುವ ಮಾನವೀಯ ನೆರವಿಗೆ ಅನುವು ಮಾಡಿಕೊಡಬೇಕು.

ವಿಶ್ವಸಂಸ್ಥೆಯ ವಿವಿಧ ತಂಡಗಳು, ಮಾನವ ಹಕ್ಕು ಸಂಘಟನೆ ರೆಡ್ ಕ್ರೆಸೆಂಟ್ ಸೇರಿದಂತೆ ಹಲವರು ಗಾಝಾದ ಜನತೆಯ ಬದುಕನ್ನು ಮರು ರೂಪಿಸಲು ಸಿದ್ದರಾಗಿ ನಿಂತಿದ್ದಾರೆ. ಅಲ್ -ಜಝೀರಾ ವರದಿಯ ಪ್ರಕಾರ, ಕದನ ವಿರಾಮದ ಮೊದಲ ಹಂತವಾಗಿ ಅಗತ್ಯ ಸಾಮಾಗ್ರಿಗಳನ್ನು ಹೊತ್ತ 600ಕ್ಕೂ ಹೆಚ್ಚು ಟ್ರಕ್‌ಗಳು ಭಾನುವಾರ ಗಾಝಾ ಪ್ರವೇಶಿಸಿವೆ.

PC : Egyptian Government Press Center via timesofisrael.com

ಅಕ್ಟೋಬರ್ 7, 2023ರಿಂದ ಇಸ್ರೇಲ್ ನಡೆಸಿದ ಗಾಝಾ ಮೇಲಿನ ಆಕ್ರಮಣದಲ್ಲಿ ಇದುವರೆಗೆ 46,913 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,750 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ನೇತೃತ್ವದ ಗುಂಪುಗಳು ಇಸ್ರೇಲ್‌ನ ಟೆಲ್ ಅವೀವ್ ನಗರದ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಸೆರೆ ಹಿಡಿದ ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...