Homeಮುಖಪುಟಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಮನೆಗಳತ್ತ ಮರಳುತ್ತಿರುವ ಪ್ಯಾಲೆಸ್ತೀನಿಯರು

- Advertisement -
- Advertisement -

ಸುಮಾರು ಒಂದೂವರೆ ವರ್ಷಗಳ ಭೀಕರ ಯುದ್ದದ ಬಳಿಕ ಗಾಝಾದಲ್ಲಿ ಕದನ ವಿರಾಮ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಒಪ್ಪಂದಂತೆ ಒತ್ತೆಯಾಳುಗಳು ಮತ್ತು ಬಂಧಿತರ ಬಿಡುಗಡೆಯಾಗಿದೆ.

ಕದನ ವಿರಾಮದ ಮೊದಲ ಹಂತವಾಗಿ ಭಾನುವಾರ (ಜ.19) ಹಮಾಸ್ ಗುಂಪು 3 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಸೋಮವಾರ (ಜ.20) ಇಸ್ರೇಲ್ 90 ಮಂದಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

PC : ndtv.com

ಈ ಮೂಲಕ 46ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರನ್ನು ಬಲಿ ತೆಗೆದುಕೊಂಡ ಇಸ್ರೇಲ್‌ನ ನಿರಂತರ ಆಕ್ರಮಣ ಶಾಶ್ವತವಾಗಿ ಕೊನೆಗೊಳ್ಳುವ ಆಶಾ ಭಾವನೆ ಮೂಡಿದೆ.

ಹಮಾಸ್ ಭಾನುವಾರ ಬಿಡುಗಡೆ ಮಾಡಿರುವ ಒತ್ತೆಯಾಳುಗಳಲ್ಲಿ ಮೂವರೂ ಮಹಿಳೆಯರು. ಕದನ ವಿರಾಮದ ಮೊದಲ ಹಂತವಾಗಿ ಮುಂದಿನ 6 ವಾರಗಳಲ್ಲಿ ಹಮಾಸ್ ಒಟ್ಟು 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಬಂಧಿತರನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7,2023ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಟೆಲ್‌ ಅವೀವ್‌ನ ನೋವಾ ಸಂಗೀತ ಉತ್ಸವದಿಂದ ಅಪಹರಿಸಲ್ಪಟ್ಟ 24 ವರ್ಷದ ರೋಮಿ ಗೊನೆನ್, ಕಿಬ್ಬುಟ್ಜ್ ಕ್ಫರ್ ಆಝಾದಿಂದ ಅಪಹರಿಸಲ್ಪಟ್ಟ 28 ವರ್ಷದ ಎಮಿಲಿ ಡಮರಿ ಮತ್ತು 31 ವರ್ಷದ ಡೊರೊನ್ ಸ್ಟೈನ್ಬ್ರೆಚರ್ ಎಂಬ ಮೂವರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇವರನ್ನು ಕುಟುಂಬಸ್ಥರು ಮತ್ತು ಇತರರು ಸೇರಿ ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದ್ದಾರೆ.

ಇದೇ ರೀತಿ ಇಸ್ರೇಲ್ ಬಂಧಿಸಿ ಜೈಲಿನಲ್ಲಿಟ್ಟಿದ 90 ಪ್ಯಾಲೆಸ್ತೀನಿಯರು ಕೂಡ ಬಿಡುಗಡೆಯಾಗಿದ್ದಾರೆ. ಅವರನ್ನೂ ಕುಟುಂಬಸ್ಥರು ಮತ್ತು ಇತರರು ಕಣ್ಣೀರು ಹಾಕುತ್ತಾ ಬರಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮನೆಗಳಿಗೆ ಮರಳುತ್ತಿರುವ ಗಾಝಾ ಜನತೆ

ಕದನ ವಿರಾಮದ ಮೊದಲ ಹಂತ ಜಾರಿಯಾಗುತ್ತಿದ್ದಂತೆ ಗಾಝಾ ಜನತೆ ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ಮರಳುತ್ತಿದ್ದಾರೆ. ಭಾನುವಾರ ಸಾವಿರಾರು ಜನರು ಉತ್ತರ ಗಾಝಾದ ಜಬಲಿಯಾ ಪ್ರದೇಶಕ್ಕೆ ಮರಳುತ್ತಿದ್ದ ದೃಶ್ಯಗಳು ಅಂತಾರಾಷ್ಟ್ರೀಯ ಮಾಧ್ಯಗಳಲ್ಲಿ ಕಂಡು ಬಂದಿವೆ.

PC : Reuters Via dailysabah.com

15 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡರೂ, ಕದನ ವಿರಾಮ ಘೋಷಣೆಯಾಗಿರುವುದಕ್ಕೆ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ದುಖಃದ ನಡುವೆ ಅವರಲ್ಲಿ ಮಂದಹಾಸ ಕಂಡು ಬಂದಿದೆ. ತಮ್ಮ ಮೂಲ ಸ್ಥಳಗಳಿಗೆ ಮರಳಿದ ಅನೇಕರಿಗೆ ತಮ್ಮ ಮನೆಗಳು ಎಲ್ಲಿತ್ತು ಎಂಬುವುದೇ ಗೊತ್ತಾಗುತ್ತಿಲ್ಲ. ಉತ್ತರ ಗಾಝಾ ಸಂಪೂರ್ಣ ಜನ ವಾಸಿಸಲು ಅಸಾಧ್ಯವಾದ ಸ್ಥಿತಿಗೆ ಬದಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

PC : aljazeera.com

ಉತ್ತರ ಗಾಝಾದ ಜಬಲಿಯಾ ನಗರ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಸುಮಾರು 250,000ಕ್ಕೂ ಅಧಿಕ ಜನರ ಅಶ್ರಯ ತಾಣವಾಗಿತ್ತು. ಇಸ್ರೇಲ್ ಈ ನಗರದ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಈ ದಾಳಿಗಳಲ್ಲಿ 4,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಜಬಲಿಯಾದಲ್ಲಿ ಈಗ ಬರೀ ಕಟ್ಟಡಗಳ ಅವಶೇಷಗಳು ಮಾತ್ರ ಉಳಿದಿವೆ.

ಮಾನವೀಯ ನೆರವು

ಕದನ ವಿರಾಮದ ಒಪ್ಪಂದಂತೆ ಇಸ್ರೇಲ್ ಸೇನೆಯು ಗಾಝಾದ ಬಫರ್ ವಲಯದಿಂದ ಹಂತ ಹಂತವಾಗಿ ಹಿಂದೆ ಸರಿಯಬೇಕು. ಜನರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಸುವ ಮಾನವೀಯ ನೆರವಿಗೆ ಅನುವು ಮಾಡಿಕೊಡಬೇಕು.

ವಿಶ್ವಸಂಸ್ಥೆಯ ವಿವಿಧ ತಂಡಗಳು, ಮಾನವ ಹಕ್ಕು ಸಂಘಟನೆ ರೆಡ್ ಕ್ರೆಸೆಂಟ್ ಸೇರಿದಂತೆ ಹಲವರು ಗಾಝಾದ ಜನತೆಯ ಬದುಕನ್ನು ಮರು ರೂಪಿಸಲು ಸಿದ್ದರಾಗಿ ನಿಂತಿದ್ದಾರೆ. ಅಲ್ -ಜಝೀರಾ ವರದಿಯ ಪ್ರಕಾರ, ಕದನ ವಿರಾಮದ ಮೊದಲ ಹಂತವಾಗಿ ಅಗತ್ಯ ಸಾಮಾಗ್ರಿಗಳನ್ನು ಹೊತ್ತ 600ಕ್ಕೂ ಹೆಚ್ಚು ಟ್ರಕ್‌ಗಳು ಭಾನುವಾರ ಗಾಝಾ ಪ್ರವೇಶಿಸಿವೆ.

PC : Egyptian Government Press Center via timesofisrael.com

ಅಕ್ಟೋಬರ್ 7, 2023ರಿಂದ ಇಸ್ರೇಲ್ ನಡೆಸಿದ ಗಾಝಾ ಮೇಲಿನ ಆಕ್ರಮಣದಲ್ಲಿ ಇದುವರೆಗೆ 46,913 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,750 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ನೇತೃತ್ವದ ಗುಂಪುಗಳು ಇಸ್ರೇಲ್‌ನ ಟೆಲ್ ಅವೀವ್ ನಗರದ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಸೆರೆ ಹಿಡಿದ ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...