Homeಮುಖಪುಟಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಗಾಝಾ ಕದನ ವಿರಾಮ | ಮೊದಲ ಹಂತದಲ್ಲಿ ಬಂಧಿತರು, ಒತ್ತೆಯಾಳುಗಳ ಬಿಡುಗಡೆ

ಮನೆಗಳತ್ತ ಮರಳುತ್ತಿರುವ ಪ್ಯಾಲೆಸ್ತೀನಿಯರು

- Advertisement -
- Advertisement -

ಸುಮಾರು ಒಂದೂವರೆ ವರ್ಷಗಳ ಭೀಕರ ಯುದ್ದದ ಬಳಿಕ ಗಾಝಾದಲ್ಲಿ ಕದನ ವಿರಾಮ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಒಪ್ಪಂದಂತೆ ಒತ್ತೆಯಾಳುಗಳು ಮತ್ತು ಬಂಧಿತರ ಬಿಡುಗಡೆಯಾಗಿದೆ.

ಕದನ ವಿರಾಮದ ಮೊದಲ ಹಂತವಾಗಿ ಭಾನುವಾರ (ಜ.19) ಹಮಾಸ್ ಗುಂಪು 3 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಸೋಮವಾರ (ಜ.20) ಇಸ್ರೇಲ್ 90 ಮಂದಿ ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

PC : ndtv.com

ಈ ಮೂಲಕ 46ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರನ್ನು ಬಲಿ ತೆಗೆದುಕೊಂಡ ಇಸ್ರೇಲ್‌ನ ನಿರಂತರ ಆಕ್ರಮಣ ಶಾಶ್ವತವಾಗಿ ಕೊನೆಗೊಳ್ಳುವ ಆಶಾ ಭಾವನೆ ಮೂಡಿದೆ.

ಹಮಾಸ್ ಭಾನುವಾರ ಬಿಡುಗಡೆ ಮಾಡಿರುವ ಒತ್ತೆಯಾಳುಗಳಲ್ಲಿ ಮೂವರೂ ಮಹಿಳೆಯರು. ಕದನ ವಿರಾಮದ ಮೊದಲ ಹಂತವಾಗಿ ಮುಂದಿನ 6 ವಾರಗಳಲ್ಲಿ ಹಮಾಸ್ ಒಟ್ಟು 33 ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಬಂಧಿತರನ್ನು ಬಿಡುಗಡೆ ಮಾಡಬೇಕಿದೆ.

ಅಕ್ಟೋಬರ್ 7,2023ರಂದು ಇಸ್ರೇಲ್ ಮೇಲೆ ದಾಳಿ ಮಾಡಿದಾಗ ಟೆಲ್‌ ಅವೀವ್‌ನ ನೋವಾ ಸಂಗೀತ ಉತ್ಸವದಿಂದ ಅಪಹರಿಸಲ್ಪಟ್ಟ 24 ವರ್ಷದ ರೋಮಿ ಗೊನೆನ್, ಕಿಬ್ಬುಟ್ಜ್ ಕ್ಫರ್ ಆಝಾದಿಂದ ಅಪಹರಿಸಲ್ಪಟ್ಟ 28 ವರ್ಷದ ಎಮಿಲಿ ಡಮರಿ ಮತ್ತು 31 ವರ್ಷದ ಡೊರೊನ್ ಸ್ಟೈನ್ಬ್ರೆಚರ್ ಎಂಬ ಮೂವರು ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇವರನ್ನು ಕುಟುಂಬಸ್ಥರು ಮತ್ತು ಇತರರು ಸೇರಿ ಅಪಾರ ಸಂಖ್ಯೆಯಲ್ಲಿ ಜನರು ಸ್ವಾಗತಿಸಿದ್ದಾರೆ.

ಇದೇ ರೀತಿ ಇಸ್ರೇಲ್ ಬಂಧಿಸಿ ಜೈಲಿನಲ್ಲಿಟ್ಟಿದ 90 ಪ್ಯಾಲೆಸ್ತೀನಿಯರು ಕೂಡ ಬಿಡುಗಡೆಯಾಗಿದ್ದಾರೆ. ಅವರನ್ನೂ ಕುಟುಂಬಸ್ಥರು ಮತ್ತು ಇತರರು ಕಣ್ಣೀರು ಹಾಕುತ್ತಾ ಬರಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ಮನೆಗಳಿಗೆ ಮರಳುತ್ತಿರುವ ಗಾಝಾ ಜನತೆ

ಕದನ ವಿರಾಮದ ಮೊದಲ ಹಂತ ಜಾರಿಯಾಗುತ್ತಿದ್ದಂತೆ ಗಾಝಾ ಜನತೆ ನಿರಾಶ್ರಿತರ ಶಿಬಿರಗಳಿಂದ ತಮ್ಮ ಮೂಲ ಸ್ಥಳಗಳಿಗೆ ಮರಳುತ್ತಿದ್ದಾರೆ. ಭಾನುವಾರ ಸಾವಿರಾರು ಜನರು ಉತ್ತರ ಗಾಝಾದ ಜಬಲಿಯಾ ಪ್ರದೇಶಕ್ಕೆ ಮರಳುತ್ತಿದ್ದ ದೃಶ್ಯಗಳು ಅಂತಾರಾಷ್ಟ್ರೀಯ ಮಾಧ್ಯಗಳಲ್ಲಿ ಕಂಡು ಬಂದಿವೆ.

PC : Reuters Via dailysabah.com

15 ತಿಂಗಳ ಇಸ್ರೇಲ್ ಆಕ್ರಮಣದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡರೂ, ಕದನ ವಿರಾಮ ಘೋಷಣೆಯಾಗಿರುವುದಕ್ಕೆ ಗಾಝಾ ಜನತೆ ಸಂಭ್ರಮಾಚರಣೆ ಮಾಡಿದ್ದಾರೆ. ದುಖಃದ ನಡುವೆ ಅವರಲ್ಲಿ ಮಂದಹಾಸ ಕಂಡು ಬಂದಿದೆ. ತಮ್ಮ ಮೂಲ ಸ್ಥಳಗಳಿಗೆ ಮರಳಿದ ಅನೇಕರಿಗೆ ತಮ್ಮ ಮನೆಗಳು ಎಲ್ಲಿತ್ತು ಎಂಬುವುದೇ ಗೊತ್ತಾಗುತ್ತಿಲ್ಲ. ಉತ್ತರ ಗಾಝಾ ಸಂಪೂರ್ಣ ಜನ ವಾಸಿಸಲು ಅಸಾಧ್ಯವಾದ ಸ್ಥಿತಿಗೆ ಬದಲಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

PC : aljazeera.com

ಉತ್ತರ ಗಾಝಾದ ಜಬಲಿಯಾ ನಗರ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಸುಮಾರು 250,000ಕ್ಕೂ ಅಧಿಕ ಜನರ ಅಶ್ರಯ ತಾಣವಾಗಿತ್ತು. ಇಸ್ರೇಲ್ ಈ ನಗರದ ಮೇಲೆ ಹೆಚ್ಚಿನ ದಾಳಿ ನಡೆಸಿದೆ. ಈ ದಾಳಿಗಳಲ್ಲಿ 4,000ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆರೋಗ್ಯ ಸಚಿವಾಲಯ ಹೇಳಿದೆ. ಜಬಲಿಯಾದಲ್ಲಿ ಈಗ ಬರೀ ಕಟ್ಟಡಗಳ ಅವಶೇಷಗಳು ಮಾತ್ರ ಉಳಿದಿವೆ.

ಮಾನವೀಯ ನೆರವು

ಕದನ ವಿರಾಮದ ಒಪ್ಪಂದಂತೆ ಇಸ್ರೇಲ್ ಸೇನೆಯು ಗಾಝಾದ ಬಫರ್ ವಲಯದಿಂದ ಹಂತ ಹಂತವಾಗಿ ಹಿಂದೆ ಸರಿಯಬೇಕು. ಜನರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಸುವ ಮಾನವೀಯ ನೆರವಿಗೆ ಅನುವು ಮಾಡಿಕೊಡಬೇಕು.

ವಿಶ್ವಸಂಸ್ಥೆಯ ವಿವಿಧ ತಂಡಗಳು, ಮಾನವ ಹಕ್ಕು ಸಂಘಟನೆ ರೆಡ್ ಕ್ರೆಸೆಂಟ್ ಸೇರಿದಂತೆ ಹಲವರು ಗಾಝಾದ ಜನತೆಯ ಬದುಕನ್ನು ಮರು ರೂಪಿಸಲು ಸಿದ್ದರಾಗಿ ನಿಂತಿದ್ದಾರೆ. ಅಲ್ -ಜಝೀರಾ ವರದಿಯ ಪ್ರಕಾರ, ಕದನ ವಿರಾಮದ ಮೊದಲ ಹಂತವಾಗಿ ಅಗತ್ಯ ಸಾಮಾಗ್ರಿಗಳನ್ನು ಹೊತ್ತ 600ಕ್ಕೂ ಹೆಚ್ಚು ಟ್ರಕ್‌ಗಳು ಭಾನುವಾರ ಗಾಝಾ ಪ್ರವೇಶಿಸಿವೆ.

PC : Egyptian Government Press Center via timesofisrael.com

ಅಕ್ಟೋಬರ್ 7, 2023ರಿಂದ ಇಸ್ರೇಲ್ ನಡೆಸಿದ ಗಾಝಾ ಮೇಲಿನ ಆಕ್ರಮಣದಲ್ಲಿ ಇದುವರೆಗೆ 46,913 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 110,750 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023ರಂದು ಹಮಾಸ್ ನೇತೃತ್ವದ ಗುಂಪುಗಳು ಇಸ್ರೇಲ್‌ನ ಟೆಲ್ ಅವೀವ್ ನಗರದ ಮೇಲೆ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಸೆರೆ ಹಿಡಿದ ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿತ್ತು.

ಅಕ್ರಮ ವಲಸಿಗರ ತಡೆಗೆ ಮಣಿಪುರದಲ್ಲಿ NRC ಜಾರಿಗೆ ಮೈತೇಯಿ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...