Homeಮುಖಪುಟ29ನೇ ದಿನಕ್ಕೆ ಕಾಲಿಟ್ಟ ಯುದ್ಧ; ಇಸ್ರೇಲ್‌ನಿಂದ ಗಾಝಾದಲ್ಲಿ 9,770 ನಾಗರಿಕರ ಹತ್ಯೆ; ಮೃತರಲ್ಲಿ ಹೆಚ್ಚಿನವರು ಮಕ್ಕಳು

29ನೇ ದಿನಕ್ಕೆ ಕಾಲಿಟ್ಟ ಯುದ್ಧ; ಇಸ್ರೇಲ್‌ನಿಂದ ಗಾಝಾದಲ್ಲಿ 9,770 ನಾಗರಿಕರ ಹತ್ಯೆ; ಮೃತರಲ್ಲಿ ಹೆಚ್ಚಿನವರು ಮಕ್ಕಳು

- Advertisement -
- Advertisement -

ಇಸ್ರೇಲ್-ಹಮಾಸ್ ಯುದ್ಧವು  29ನೇ ದಿನಕ್ಕೆ ಕಾಲಿಟ್ಟಿದೆ. ಗಾಝಾ ಪಟ್ಟಿಯಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 9,770 ಕ್ಕೆ ಏರಿಕೆಯಾಗಿದೆ. ಬಲಿಯಾದವರಲ್ಲಿ 4,008 ಮಕ್ಕಳು ಮತ್ತು 2,550 ಮಹಿಳೆಯರು ಸೇರಿದ್ದಾರೆ ಎಂದು  ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ಇತ್ತೀಚಿನ ಅಂಕಿ ಅಂಶಗಳನ್ನು ಬಿಡುಗಡೆಗೊಳಿಸಿ ತಿಳಿಸಿದೆ.

ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಕನಿಷ್ಠ 243 ಪ್ಯಾಲೆಸ್ತೀನಿಯನ್ನರು ಕೊಲ್ಲಲ್ಪಟ್ಟರು. 243 ಜನರಲ್ಲಿ 65 ಜನರು ಅಲ್ ಬುರೇಜ್ ಮತ್ತು ಅಲ್ ಮಘಾಝಿಯ ಸೇರಿ ಮೂರು ನಿರಾಶ್ರಿತರ ಶಿಬಿರಗಳಲ್ಲಿನ ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಅ.7 ರಂದು ಯುದ್ಧವು ಆರಂಭಗೊಂಡ ಬಳಿಕ ಹಮಾಸ್ ನಿಯಂತ್ರಿತ ಗಾಝಾಪಟ್ಟಿಯಲ್ಲಿ ಒಟ್ಟು 24,173 ಜನರು ಗಾಯಗೊಂಡಿದ್ದಾರೆ. ಅಚ್ಚರಿ ಎಂದರೆ 1,270 ಮಕ್ಕಳು ಸೇರಿ 2,260 ಮಂದಿ ಕಾಣೆಯಾಗಿದ್ದಾರೆ. ಇವರ ಸುಳಿವು ಈವರೆಗೆ ಲಭ್ಯವಾಗಿಲ್ಲ.

ಯುಎನ್ ಆಫೀಸ್ ಫಾರ್ ಕೋಆರ್ಡಿನೇಟೆಡ್ ಹ್ಯುಮಾನಿಟೇರಿಯನ್ ಅಫೇರ್ಸ್ (OCHA) ತನ್ನ ವರದಿಯಲ್ಲಿ ಗಾಝಾದಲ್ಲಿ ಸುಮಾರು 1.5 ಮಿಲಿಯನ್ ಜನರು ಸ್ಥಳಾಂತರಗೊಂಡಿದ್ದಾರೆ ಎಂದು ತಿಳಿಸಿದೆ. ಸುಮಾರು 7,17,000 ಜನರು 149 UN ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ. 1,22,000 ಮಂದಿ ಆಸ್ಪತ್ರೆಗಳಲ್ಲಿ, ಚರ್ಚ್‌ಗಳು ಮತ್ತು ಸಾರ್ವಜನಿಕ ಕಟ್ಟಡಗಳಲ್ಲಿದ್ದಾರೆ. 1,10,000 ಜನರು  89 ಶಾಲೆಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಇದಲ್ಲದೆ ದಕ್ಷಿಣ ಗಾಝಾದಲ್ಲಿನ 92 UNRWA ಶಿಬಿರಗಳಲ್ಲಿ 5,30,000ಕ್ಕಿಂತ ಹೆಚ್ಚು ಜನರು ಆಶ್ರಯ ಪಡೆದಿದ್ದಾರೆ. ಇಸ್ರೇಲ್ ವಿದ್ಯುತ್ ಮತ್ತು ಇಂಧನ ಪೂರೈಕೆಯನ್ನು ನಿಲ್ಲಿಸಿದ ನಂತರ ಅ. 11 ರಿಂದ ಗಾಝಾ ಸಂಪೂರ್ಣ ವಿದ್ಯುತ್ ಇಲ್ಲದೆ ಕತ್ತಲಿನಲ್ಲಿದೆ ಎಂದು ಯುಎನ್ ಕಚೇರಿ ಹೇಳಿದೆ.

ಗಾಝಾ ನಗರದ ಅಲ್-ಶಿಫಾ ಆಸ್ಪತ್ರೆ ಮತ್ತು ಉತ್ತರ ಗಾಝಾದ ಇಂಡೋನೇಷಿಯನ್ ಆಸ್ಪತ್ರೆಗಳಲ್ಲಿನ ಮುಖ್ಯ ವಿದ್ಯುತ್ ಜನರೇಟರ್‌ಗಳು ಇಂಧನ ಕೊರತೆಯಿಂದಾಗಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ ಎಂದು ವರದಿಯಾಗಿದೆ. ಈ ಎರಡೂ ಆಸ್ಪತ್ರೆಗಳು ಸಣ್ಣ ಜನರೇಟರ್‌ಗಳ ಬಳಕೆ ಮಾಡುತ್ತಿದೆ. ಇದು ಅತ್ಯಗತ್ಯ ಕೆಲಸಕ್ಕೆ  ದಿನಕ್ಕೆ ಕೆಲವೇ ಗಂಟೆಗಳ ವಿದ್ಯುತ್‌ನ್ನು ಒದಗಿಸುತ್ತದೆ.

ಯುದ್ಧ ಪ್ರಾರಂಭವಾದಾಗಿನಿಂದ ಗಾಝಾದ 35 ಆಸ್ಪತ್ರೆಗಳಲ್ಲಿ 14 ಆಸ್ಪತ್ರೆಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ ಮತ್ತು ಗಾಜಾದಾದ್ಯಂತ 51  ಪ್ರಾಥಮಿಕ ಆರೈಕೆ ಕೇಂದ್ರಗಳು ಇಂಧನದ ಕೊರತೆಯಿಂದಾಗಿ ಮುಚ್ಚಲ್ಪಟ್ಟಿವೆ.

ಇಸ್ರೇಲ್‌ ಅಧಿಕಾರಿಗಳ ಪ್ರಕಾರ, ಇಸ್ರೇಲ್‌ನಲ್ಲಿ ಈವರೆಗೆ 1400ಜನರು ಮೃತಪಟ್ಟಿದ್ದಾರೆ. ಮತ್ತು ವಿದೇಶಿ ಪ್ರಜೆಗಳು ಸೇರಿದಂತೆ 242 ಜನರು ಗಾಝಾದಲ್ಲಿ ಬಂಧಿತರಾಗಿದ್ದಾರೆ. ಇಲ್ಲಿಯವರೆಗೆ ನಾಲ್ಕು ನಾಗರಿಕ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ ಮತ್ತು ಒಬ್ಬ ಮಹಿಳಾ ಸೈನಿಕರನ್ನು ಇಸ್ರೇಲ್‌ ಪಡೆಗಳು ರಕ್ಷಿಸಿವೆ. ಒತ್ತೆಯಾಳುಗಳಲ್ಲಿ 57 ಮಂದಿ ಇಸ್ರೇಲ್‌ ವೈಮಾನಿಕ ದಾಳಿಯಿಂದ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ. ಭಾನುವಾರ ಗಾಝಾದಲ್ಲಿ ಒಬ್ಬ ಇಸ್ರೇಲ್‌ ಸೈನಿಕನನ್ನು ಕೊಲ್ಲಲಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಕೊಲ್ಲಲ್ಪಟ್ಟ ಒಟ್ಟು ಸೈನಿಕರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...