Homeಅಂತರಾಷ್ಟ್ರೀಯಗಾಝಾ | ಹಸಿವಿನಿಂದ ಮತ್ತೆ ಐವರು ಸಾವು: ಆಹಾರ ಖರೀದಿಸಲು ಕ್ಯಾಮರಾ, ಪ್ರೆಸ್ ಶೀಲ್ಡ್ ಮಾರಾಟಕ್ಕಿಟ್ಟ...

ಗಾಝಾ | ಹಸಿವಿನಿಂದ ಮತ್ತೆ ಐವರು ಸಾವು: ಆಹಾರ ಖರೀದಿಸಲು ಕ್ಯಾಮರಾ, ಪ್ರೆಸ್ ಶೀಲ್ಡ್ ಮಾರಾಟಕ್ಕಿಟ್ಟ ಪತ್ರಕರ್ತ

- Advertisement -
- Advertisement -

ಇಸ್ರೇಲ್ ವಿಧಿಸಿದ ದಿಗ್ಬಂಧನದಿಂದ ಆಹಾರ ಸಿಗದೆ ಗಾಝಾದ ಜನರು ಹಸಿವಿನಿಂದ ಸಾಯುತ್ತಿರುವುದು ಮಾನವ ಜಗತ್ತನ್ನು ತಲ್ಲಣಗೊಳಿಸಿದೆ. ಇಸ್ರೇಲ್‌ನ ಈ ಅಮಾವೀಯ ನಡೆಗೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಗಾಝಾದಲ್ಲಿ ಪುಟ್ಟ ಕಂದಮ್ಮಗಳು ಅನ್ನ, ನೀರು ಸಿಗದೆ ಕೊನೆಯುಸಿರೆಳೆಯುತ್ತಿರುವುದು ಹಸಿವಿನ ಭೀಕರತೆಯನ್ನು ತೆರೆದಿಟ್ಟಿದೆ. ಈ ಭೀಕರತೆ ಗಾಝಾದ ಫೋಟೋ ಜರ್ನಲಿಸ್ಟ್ ಒಬ್ಬರು ತನ್ನ ಕ್ಯಾಮಾರ ಮತ್ತು ಪ್ರೆಸ್ ಶೀಲ್ಡ್ ಅನ್ನು ಮಾರಾಟಕ್ಕಿರುವುದು ಸಾಕ್ಷಿಯಾಗಿದೆ.

ಲಿಂಕ್ಡ್ ಇನ್‌ನಲ್ಲಿ ಪೋಸ್ಟ್ ಹಾಕಿರುವ ಗಾಝಾದ ಪತ್ರಕರ್ತ ಮೊಹಮ್ಮದ್ ಅಬು ಔನ್, “ನಾನು ನನ್ನ ಸಾಧನಗಳು ಮತ್ತು ಪ್ರೆಸ್ ಶೀಲ್ಡ್ ಅನ್ನು ಮಾರಾಟ ಮಾಡಲು ಬಯಸಿದ್ದೇನೆ. ಇದರಿಂದ ನಾನು ಮತ್ತು ನನ್ನ ಕುಟುಂಬ ಆಹಾರ ಖರೀದಿಸಬಹುದು” ಎಂದು ಬರೆದುಕೊಂಡಿದ್ದಾರೆ.

ಅಬು ಔನ್ ಅವರ ಲಿಂಕ್ಡ್‌ಇನ್ ಪ್ರೊಫೈಲ್ ಪ್ರಕಾರ, ಅವರು ನ್ಯೂಯಾರ್ಕ್ ಟೈಮ್ಸ್, ಎಬಿಸಿ ನ್ಯೂಸ್, ಸ್ಕೈ ನ್ಯೂಸ್‌ನಂತಹ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳಿಗೆ ಕೆಲಸ ಮಾಡಿದ್ದಾರೆ.

“ಕಳೆದ ವರ್ಷದ ಇಸ್ರೇಲ್ ಜೊತೆಗಿನ 11 ದಿನಗಳ ಸಂಘರ್ಷ ಸೇರಿದಂತೆ, ಗಾಝಾದ ಬಗ್ಗೆ ಸುದ್ದಿ ಮಾಡಿ ನನಗೆ ತುಂಬಾ ಅನುಭವವಿದೆ. ನನ್ನ ಕೆಲಸವನ್ನು ಸ್ಟೋರಿಫುಲ್ ಹಂಚಿಕೆ ಮಾಡುತ್ತಿತ್ತು. ನಾನು ಆಗಾಗ ನನ್ನ ವಿಡಿಯೋಗಳನ್ನು ಸ್ಟೋರಿಫುಲ್ ಮೂಲಕ ಹಂಚಿಕೊಳ್ಳುತ್ತಿದ್ದೆ” ಎಂದು ಅಬು ಔನ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ನಾವು ಹಸಿವಿನಿಂದ ಸಾಯುತ್ತಿದ್ದೇವೆ” ಎಂಬ ಅಬು ಔನ್ ಅವರ ಪೋಸ್ಟ್ ಗಾಝಾದಲ್ಲಿ ಹಸಿವಿನಿಂದ ಸಾಯುತ್ತಿರುವ ಕಂದಮ್ಮಗಳ ನೋವನ್ನು ಪ್ರತಿಧ್ವನಿಸಿದೆ.

ಶನಿವಾರ ಗಾಝಾದಲ್ಲಿ (ಜು.26) ಇಸ್ರೇಲ್ ನಡೆಸಿದ ದಾಳಿಯಲ್ಲಿ 71 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ 42 ಜನರು ಆಹಾರ ಪಡೆಯಲು ಹೋದಾಗ ಬಲಿಯಾಗಿದ್ದಾರೆ ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇಸ್ರೇಲ್‌ನ ದಿಗ್ಬಂಧನದಿಂದಾಗಿ ಹಸಿವಿನಿಂದ ಶನಿವಾರ ಐವರು ಸಾವನ್ನಪ್ಪಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಯುದ್ಧ ಪ್ರಾರಂಭವಾದಾಗಿನಿಂದ ಅಪೌಷ್ಟಿಕತೆಯಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 127ಕ್ಕೆ ತಲುಪಿದೆ. ಬಲಿಯಾದವರಲ್ಲಿ 85 ಮಕ್ಕಳು ಸೇರಿದ್ದಾರೆ.

2023 ಅಕ್ಟೋಬರ್ 8ರಿಂದ ಇಸ್ರೇಲ್ ನಡೆಸುತ್ತಿರುವ ದಾಳಿಯಿಂದ ಗಾಝಾದಲ್ಲಿ ಸಾವನ್ನಪ್ಪಿದವರ ಸಂಖ್ಯೆ 59,733ಕ್ಕೆ ತಲುಪಿದ್ದು, 1,44,477 ಜನರು ಗಾಯಗೊಂಡಿದ್ದಾರೆ.

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...