Homeಅಂತರಾಷ್ಟ್ರೀಯಗಾಜಾದಲ್ಲಿ ಇಸ್ರೇಲ್ ಸೇನೆಯಿಂದ ಯುದ್ಧಾಪರಾಧ - ಹ್ಯೂಮನ್ ರೈಟ್ಸ್ ವಾಚ್ ಆರೋಪ

ಗಾಜಾದಲ್ಲಿ ಇಸ್ರೇಲ್ ಸೇನೆಯಿಂದ ಯುದ್ಧಾಪರಾಧ – ಹ್ಯೂಮನ್ ರೈಟ್ಸ್ ವಾಚ್ ಆರೋಪ

- Advertisement -
- Advertisement -

ಇಸ್ರೇಲಿ ಅಧಿಕಾರಿಗಳು ಗಾಜಾದಲ್ಲಿ ಪ್ಯಾಲೇಸ್ತೀನಿ ಜನರನ್ನು ಬಲವಂತದ ಸ್ಥಳಾಂತರ ಮಾಡಿದ್ದು, ಅದು ಯುದ್ಧಾಪರಾಧ ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಾಗಿವೆ ಎಂದು ಹ್ಯೂಮನ್ ರೈಟ್ಸ್ ವಾಚ್ ಗುರುವಾರ ವರದಿಯಲ್ಲಿ ತಿಳಿಸಿದೆ. ಇಸ್ರೇಲ್ ಮುತ್ತಿಗೆ ಹಾಕಿರುವ ಗಾಝಾ ಪ್ರದೇಶದಲ್ಲಿ ಭೀಕರ ಮಾನವೀಯ ಪರಿಸ್ಥಿತಿಯ ಬಗ್ಗೆ ಹಲವಾರು ಅಂತರಾಷ್ಟ್ರೀಯ ಮಾನವ ಹಕ್ಕು ಸಂಸ್ಥೆಗಳ ಎಚ್ಚರಿಕೆ ನೀಡುತ್ತಲೆ ಇವೆ.

“ಗಾಜಾದಲ್ಲಿ ಬಲವಂತದ ಸ್ಥಳಾಂತರವು ವ್ಯಾಪಕವಾಗಿದೆ ಎಂದು ಹ್ಯೂಮನ್‌ ರೈಟ್ಸ್ ವಾಚ್ ಕಂಡುಕೊಂಡಿದೆ. ಇದು ಇಸ್ರೇಲ್‌ನ ವ್ಯವಸ್ಥಿತ ಮತ್ತು ಸರ್ಕಾರಿ ನೀತಿಯ ಭಾಗವಾಗಿದೆ ಎಂಬುವುದಕ್ಕೆ ಪುರಾವೆಗಳು ಇವೆ. ಅಂತಹ ಕೃತ್ಯಗಳು ಮಾನವೀಯತೆಯ ವಿರುದ್ಧದ ಅಪರಾಧಗಳಾಗಿವೆ” ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹ್ಯೂಮನ್ ರೈಟ್ಸ್‌ನ ಈ ವರದಿಯ ಬಗ್ಗೆ ಇಸ್ರೇಲಿ ಸೇನೆಯಾಗಲಿ ಅಥವಾ ವಿದೇಶಾಂಗ ಸಚಿವಾಲಯವಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ಇಸ್ರೇಲಿ ಅಧಿಕಾರಿಗಳು ಈ ಹಿಂದಿನಿಂದಲೂ ಇಂತಹ ಆರೋಪಗಳನ್ನು ತಿರಸ್ಕರಿಸುತ್ತಲೆ ಬಂದಿದ್ದು, ತಮ್ಮ ಪಡೆಗಳು ಅಂತರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಪ್ರತಿಪಾದಿಸಿದ್ದಾರೆ.

ನಾಗರಿಕರ ಭದ್ರತೆಯ ವಿಚಾರ ಅಥವಾ ಕಡ್ಡಾಯ ಮಿಲಿಟರಿ ಕಾರಣಗಳು ಇಲ್ಲದಿದ್ದರೆ ಆಕ್ರಮಿತ ಪ್ರದೇಶದಿಂದ ನಾಗರಿಕರನ್ನು ಬಲವಂತವಾಗಿ ಸ್ಥಳಾಂತರಿಸುವುದನ್ನು ಸಶಸ್ತ್ರ ಸಂಘರ್ಷದ ಕಾನೂನಿನ ನಿಯಮ ನಿಷೇಧಿಸುತ್ತದೆ.

ಕಳೆದ ವರ್ಷ ದಕ್ಷಿಣ ಇಸ್ರೇಲ್‌ ಮೇಲೆ ಹಮಾಸ್ ದಾಳಿ ಮಾಡಿ ಸುಮಾರು 1,200 ಜನರನ್ನು ಕೊಂದ ನಂತರ, ಇಸ್ರೇಲ್ ಗಾಜಾ ಪಟ್ಟಿಯನ್ನು ಆಕ್ರಮಿಸಿದೆ ಎಂದು ಇಸ್ರೇಲಿ ಅಧಿಕಾರಿಗಳು ಹೇಳಿದ್ದಾರೆ. ಹಮಾಸ್ ನೇತೃತ್ವದ ಈ ದಾಳಿಯಲ್ಲಿ 250 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಅಪಹರಿಸಲಾಗಿದೆ ಎಂದು ಇಸ್ರೇಲ್ ಹೇಳಿದೆ.

ಅಂದಿನಿಂದ, ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಾಜಾದ ಸುಮಾರು 43,500 ಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದಾರೆ. ಜೊತೆಗೆ ಪ್ರದೇಶದ ಹೆಚ್ಚಿನ ಮೂಲಸೌಕರ್ಯವನ್ನು ನಾಶವಾಗಿದ್ದು, 23 ಲಕ್ಷ ಜನರು ಹಲವಾರು ಬಾರಿ ಸ್ಥಳಾಂತರ ಆಗುವಂತೆ ಮಾಡಲಾಗಿದೆ. ಕಳೆದ ಒಂದು ತಿಂಗಳಿನಿಂದ, ಇಸ್ರೇಲಿ ಪಡೆಗಳು ಹಮಾಸ್ ಪಡೆಗಳ ನಾಶಕ್ಕೆ ಪ್ರಯತ್ನಿಸುತ್ತಿದ್ದು, ಉತ್ತರ ಗಾಜಾದಿಂದ ಹತ್ತಾರು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸೇನೆ ಹೇಳಿದೆ.

ಇದನ್ನೂ ಓದಿ: COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...