Homeಅಂತರಾಷ್ಟ್ರೀಯಗಾಝಾ | ಈದ್‌ ದಿನ ಇಸ್ರೇಲ್ ದಾಳಿ: ಮಕ್ಕಳು ಸೇರಿ 8 ಮಂದಿ ಸಾವು

ಗಾಝಾ | ಈದ್‌ ದಿನ ಇಸ್ರೇಲ್ ದಾಳಿ: ಮಕ್ಕಳು ಸೇರಿ 8 ಮಂದಿ ಸಾವು

- Advertisement -
- Advertisement -

ಈದುಲ್ ಫಿತರ್ (ರಂಝಾನ್ ಹಬ್ಬ) ದಿನವಾದ ಭಾನುವಾರ (ಮಾ.30) ಸ್ಥಳಾಂತರಗೊಂಡ ಜನರಿಗೆ ಆಶ್ರಯ ನೀಡಿದ್ದ ಮನೆ ಮತ್ತು ಟೆಂಟ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಐವರು ಮಕ್ಕಳು ಸೇರಿದಂತೆ ಕನಿಷ್ಠ ಎಂಟು ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ವರದಿ ಮಾಡಿದೆ.

“ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಜನರು ಆಶ್ರಯ ಪಡೆದಿದ್ದ ಮನೆ ಮತ್ತು ಟೆಂಟ್ ಮೇಲೆ ಬೆಳಗಿನ ಜಾವ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಐವರು ಮಕ್ಕಳು ಸೇರಿದಂತೆ ಎಂಟು ಮಂದಿ ಹುತಾತ್ಮರಾಗಿದ್ದಾರೆ” ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮೂದ್ ಬಸ್ಸಲ್ ಎಎಫ್‌ಪಿಗೆ ತಿಳಿಸಿದ್ದಾರೆ.

ಗಾಝಾದಲ್ಲಿ ಯುದ್ಧ ನಿಲ್ಲಿಸುವ ಕದನ ವಿರಾಮ ಪ್ರಸ್ತಾಪವನ್ನು ಮಧ್ಯವರ್ತಿಗಳ ಮೂಲ ಸ್ವೀಕರಿಸಿರುವುದಾಗಿ ಇಸ್ರೇಲ್ ಮತ್ತು ಹಮಾಸ್ ಎರಡೂ ಒಪ್ಪಿಕೊಂಡ ನಡುವೇ ಇಸ್ರೇಲ್ ಆಕ್ರಮಣ ನಡೆಸಿದೆ.

ಮಾರ್ಚ್‌ 18ರಂದು ಇಸ್ರೇಲ್ ವೈಮಾನಿಕ ಮತ್ತು ನೆಲ ದಾಳಿ ನಡೆಸಿದ್ದರಿಂದ ಗಾಝಾ ಪಟ್ಟಿಯಲ್ಲಿ ಎರಡ್ಮೂರು ವಾರಗಳ ಕಾಲ ಆಕ್ರಮಣಕ್ಕೆ ತಡೆಯೊಡ್ಡಿದ್ದ ಕದನ ವಿರಾಮ ಒಪ್ಪಂದ ಮುರಿದು ಬಿದ್ದಿದೆ.

ಮತ್ತೆ ಕದನ ವಿರಾಮ ಜಾರಿಗೆ ತಂದು ಆಕ್ರಮಣ ನಿಲ್ಲಿಸಲು ಮತ್ತು ಹಮಾಸ್ ಒತ್ತೆಯಾಳುಗಳಾಗಿ ಇಟ್ಟುಕೊಂಡಿರುವ ಇಸ್ರೇಲಿಗರ ಬಿಡುಗಡೆ ಮಧ್ಯವರ್ತಿಗಳಾದ ಈಜಿಪ್ಟ್, ಕತಾರ್ ಮತ್ತು ಯುನೈಟೆಡ್ ಸ್ಟೇಟ್ಸ್ ಪ್ರಯತ್ನ ಮುಂದುವರೆಸಿದೆ ಎಂದು ವರದಿಯಾಗಿದೆ.

ಮಧ್ಯವರ್ತಿಗಳು ಮಂಡಿಸಿದ ಹೊಸ ಕದನ ವಿರಾಮ ಪ್ರಸ್ತಾಪವನ್ನು ಹಮಾಸ್ ಗುಂಪು ಅನುಮೋದಿಸಿದೆ ಮತ್ತು ಅದನ್ನು ಬೆಂಬಲಿಸುವಂತೆ ಇಸ್ರೇಲ್ ಅನ್ನು ಒತ್ತಾಯಿಸಿದೆ ವರದಿ ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು ಪ್ರಸ್ತಾವನೆಯನ್ನು ಸ್ವೀಕರಿಸಿರುವುದನ್ನು ದೃಢಪಡಿಸಿದ್ದು, ಇಸ್ರೇಲ್ ಇದಕ್ಕೆ ಪ್ರತಿಯಾಗಿ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ಹೇಳಿದೆ.

ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಇದುವರೆಗೆ ಬಲಿಯಾದ ಪ್ಯಾಲೆಸ್ತೀನಿಯರ ಸಂಖ್ಯೆ 50,277ಕ್ಕೆ ತಲುಪಿದೆ.

ನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...