Homeಮುಖಪುಟಯುದ್ಧ ಪೀಡಿತ ಗಾಝಾದಲ್ಲಿ 61% ಉದ್ಯೋಗ ನಷ್ಟ: ILO ವರದಿ

ಯುದ್ಧ ಪೀಡಿತ ಗಾಝಾದಲ್ಲಿ 61% ಉದ್ಯೋಗ ನಷ್ಟ: ILO ವರದಿ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಗಾಝಾ ಪಟ್ಟಿಯಲ್ಲಿ 1,82,000 ಜನರು ಉದ್ಯೋಗ ಕಳೆದುಕೊಂಡಿದ್ದು ಅಂದರೆ 61 ಪ್ರತಿಶತದಷ್ಟು ಉದ್ಯೋಗಗಳು ನಷ್ಟವಾಗಿದೆ ಎಂದು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ(ILO) ವರದಿ ತಿಳಿಸಿದೆ.

ಯುದ್ಧ ಪ್ರಾರಂಭವಾದಾಗಿನಿಂದ ಗಾಝಾ ಕನಿಷ್ಠ 61 ಪ್ರತಿಶತದಷ್ಟು ಉದ್ಯೋಗಗಳನ್ನು ಕಳೆದುಕೊಂಡಿದೆ ಎಂದು ವಿಶ್ವಸಂಸ್ಥೆಯ ಕಾರ್ಮಿಕ ಸಂಸ್ಥೆ ಹೇಳಿದ್ದು, ಈ ಆರ್ಥಿಕ ಕುಸಿತವು ಮುಂದಿನ ಹಲವು ವರ್ಷಗಳವರೆಗೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದೆ.

ಪ್ಯಾಲೆಸ್ತೀನ್‌ನ ಪ್ರಸ್ತುತ ಬಿಕ್ಕಟ್ಟಿನ ಬಗ್ಗೆ ನಮ್ಮ ಆರಂಭಿಕ ಮೌಲ್ಯಮಾಪನವು ಅತ್ಯಂತ ಆತಂಕಕಾರಿ ಫಲಿತಾಂಶಗಳನ್ನು ನೀಡಿದೆ. ಸಂಘರ್ಷ ಮುಂದುವರಿದರೆ  ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ ಎಂದು ಅರಬ್ ರಾಜ್ಯಗಳ ILOನ ಪ್ರಾದೇಶಿಕ ನಿರ್ದೇಶಕಿ ರೂಬಾ ಜರಾದತ್ ಹೇಳಿದ್ದಾರೆ.

ಸಂಘರ್ಷವು ಸಾಮಾಜಿಕ ಮತ್ತು ಆರ್ಥಿಕ ಬಿಕ್ಕಟ್ಟನ್ನು ಉಂಟು ಮಾಡಿದೆ. ಇದು ಉದ್ಯೋಗಗಳು ಮತ್ತು ವ್ಯವಹಾರಗಳಿಗೆ ಅಪಾರ ಹಾನಿಯನ್ನುಂಟುಮಾಡಿದೆ. ಇದು ಹಲವು ವರ್ಷಗಳವರೆಗೆ ಮುಂದವರಿಯುವ ಭೀತಿ ಇದೆ ಎಂದು ಹೇಳಿದ್ದಾರೆ.

ವೆಸ್ಟ್ ಬ್ಯಾಂಕ್‌ ಕೂಡ ಅಂದಾಜು 24% ಜನರು ಉದ್ಯೋಗಗಳನ್ನು ಕಳೆದುಕೊಂಡಿದೆ. ಅಂದರೆ ಇದು 2,08,000 ಉದ್ಯೋಗಗಳಿಗೆ ಸಮಾನವಾಗಿದೆ ಎಂದು ILO ಹೇಳಿದೆ.

ಯುದ್ಧದಿಂದಾಗಿ ಗಾಝಾ ಪಟ್ಟಿ ಮತ್ತು ವೆಸ್ಟ್‌ ಬ್ಯಾಂಕ್‌ನಲ್ಲಿ ಒಟ್ಟು ಅಂದಾಜು 3,90,000 ಉದ್ಯೋಗ ನಷ್ಟಗಳು ಸಂಭವಿಸಿದೆ. ದೈನಂದಿನ ಆದಾಯದಲ್ಲಿ 16 ಮಿಲಿಯನ್‌ ನಷ್ಟ ಆಗಿದೆ ಎಂದು ವರದಿ ಹೇಳುತ್ತದೆ. ಇಸ್ರೇಲ್ ಯುದ್ಧವನ್ನು ಮತ್ತಷ್ಟು ತೀವ್ರಗೊಳಿಸಿದರೆ ಅಂಕಿ-ಅಂಶಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಕೆಲವೆಡೆ ಸಂಪೂರ್ಣ ಪ್ರದೇಶಗಳನ್ನು ಧ್ವಂಸ ಮಾಡಲಾಗಿದೆ, ಮೂಲಸೌಕರ್ಯಗಳು ಹಾನಿಗೊಳಗಾಗಿವೆ. ಉದ್ಯಮಗಳು ಮುಚ್ಚಲ್ಪಟ್ಟಿವೆ. ದೊಡ್ಡ ಪ್ರಮಾಣದಲ್ಲಿ ಜನರು ವಲಸೆ ಹೋಗಿದ್ದಾರೆ. ಗಾಝಾದಲ್ಲಿ ನೀರು, ಆಹಾರ ಮತ್ತು ಇಂಧನದ ಕೊರತೆಯಿಂದ ಆರ್ಥಿಕ ಚಟುವಟಿಕೆ ಕುಂಠಿತಗೊಂಡಿದೆ ಎಂದು ವರದಿ ತಿಳಿಸಿದೆ.

ಅ.7ರಂದು ಹಮಾಸ್‌ ಇಸ್ರೇಲ್‌ ಮೇಲೆ ನಡೆಸಿದ ರಾಕೆಟ್‌ ದಾಳಿಯಲ್ಲಿ ಇಸ್ರೇಲ್‌ನಲ್ಲಿ 1400 ಮಂದಿ ಮೃತಪಟ್ಟಿದ್ದರು. ಆ ಬಳಿಕ ಇಸ್ರೇಲ್ ಯುದ್ಧ ಘೋಷಿಸಿ ಪ್ಯಾಲೆಸ್ತೀನ್‌ ಮೇಲೆ ನಡೆಸಿದ ದಾಳಿಯಲ್ಲಿ 10,022ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ.  25,408 ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದು, ಯುಎನ್‌ ನಿರಾಶ್ರಿತರ ಶಿಬಿರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ.

ಇದನ್ನು ಓದಿ: ಮಾದ್ಯಮ ಪ್ರತಿನಿಧಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳ ಜಪ್ತಿ: ಮಾರ್ಗಸೂಚಿ ರಚಿಸಲು ಸುಪ್ರೀಂಕೋರ್ಟ್ ಸೂಚನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...