Homeಅಂತರಾಷ್ಟ್ರೀಯಗಾಝಾ - ಮದ್ಲೀನ್ | ಇಸ್ರೇಲ್‌ನಿಂದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಗಡೀಪಾರು

ಗಾಝಾ – ಮದ್ಲೀನ್ | ಇಸ್ರೇಲ್‌ನಿಂದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಗಡೀಪಾರು

- Advertisement -
- Advertisement -

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಹೊರಟಿದ್ದ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್’ನ ಅನ್ನು ಇಸ್ರೇಲ್ ಅಂತಾರಾಷ್ಟ್ರೀಯ ಜಲ ಪ್ರದೇಶದಿಂದ ಅಪಹರಿಸಿತ್ತು. ಇದೀಗ ಹಡಗಿನಲ್ಲಿದ್ದ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್‌ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಮಂಗಳವಾರ ಅಲ್‌ಜಝೀರಾ ವರದಿ ಮಾಡಿದೆ. ಗಾಝಾ – ಮದ್ಲೀನ್

ಗ್ರೆಟಾ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಹೇಳಿದ ನಂತರ, ಅವರು ವಿಮಾನದಲ್ಲಿ ಇರುವ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಮದ್ಲೀನ್‌ ಹಡಗಿನಲ್ಲಿದ್ದ 12 ಜನರಲ್ಲಿ ಗ್ರೇಟಾ ಕೂಡ ಒಬ್ಬರು, ಪ್ಯಾಲೆಸ್ತೀನ್‌ನ ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ ಹಾಕಿದ್ದ ನೌಕಾ ದಿಗ್ಬಂಧನವನ್ನು ಮುರಿಯಲು ಪ್ರಯತ್ನಿಸುವಾಗ ಅದರ ಸೇನೆ ಅವರನ್ನು ವಶಪಡಿಸಿಕೊಂಡಿತ್ತು.

ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಯುರೋಪಿಯನ್ ಪಾರ್ಲಿಮೆಂಟ್‌ನ ಫ್ರೆಂಚ್ ಸದಸ್ಯೆ ರಿಮಾ ಹಸನ್ ಮತ್ತು ಅಲ್ ಜಜೀರಾ ಪತ್ರಕರ್ತ ಒಮರ್ ಫಯಾದ್ ಸೇರಿದಂತೆ ಮದ್ಲೀನ್‌ನ 12 ಸಿಬ್ಬಂದಿಯನ್ನು ಇಸ್ರೇಲ್ ಬಂಧಿಸಿತ್ತು. ಇದರ ನಂತರ ಮದ್ಲೀನ್ ಹಡಗನ್ನು ಆಕ್ರಮಿತ ಪ್ಯಾಲೆಸ್ತೀನ್‌ನ ಅಶ್ಡೋಡ್ ಬಂದರಿಗೆ ಎಳೆದೊಯ್ಯಲಾಗಿತ್ತು ಎಂದು ಅಲ್ ಜಝೀರಾ ವರದಿ ಮಾಡಿದೆ.

ಗಾಜಾದ ಮೇಲಿನ ಇಸ್ರೇಲ್‌ನ ಅಕ್ರಮ ದಿಗ್ಬಂಧನವನ್ನು ಮುರಿಯುವ ಗುರಿ ಕೂಡಾ ಹೊಂದಿದ್ದ ಈ ಹಡಗನ್ನು ವಸಾಹತುಗಾರ ಇಸ್ರೇಲಿ ಕಮಾಂಡೋಗಳು ಗಾಝಾ ತೀರದಿಂದ ಸುಮಾರು 100 ನಾಟಿಕಲ್ ಮೈಲುಗಳ (185 ಕಿಮೀ) ಅಂತರರಾಷ್ಟ್ರೀಯ ಜಲ ಪ್ರದೇಶದಿಂದ ವಶಪಡಿಸಿಕೊಂಳ್ಳಲಾಗಿತ್ತು. ಈ ವೇಳೆ ಹಡಗಿನಲ್ಲಿದ್ದ 11 ಹೋರಾಟಗಾರರು ಮತ್ತು ಪತ್ರಕರ್ತರನ್ನು ಟೆಲ್ ಅವೀವ್‌ನ ಬೆನ್ ಗುರಿಯನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಹೇಳಿಕೆ ನೀಡಿದ್ದ ಇಸ್ರೇಲಿ ವಿದೇಶಾಂಗ ಸಚಿವಾಲಯ, ಶೀಘ್ರದಲ್ಲೇ ಅವರನ್ನು ಗಡೀಪಾರು ಮಾಡಲಾಗುತ್ತಿದೆ ಎಂದು ಹೇಳಿತ್ತು.

ಇದಕ್ಕೂ ಮೊದಲು ಫ್ರೀಡಂ ಪ್ಲೋಟಿಲ್ಲಾ ಒಕ್ಕೂಟವು, ಇಸ್ರೇಲ್ ಅಪಹರಿಸುವಾಗ ನಡೆದ ಘಟನೆಯ ವೀಡಿಯೊವನ್ನು ಬಿಡುಗಡೆ ಮಾಡಿತ್ತು. ಈ ವಿಡಿಯೊದಲ್ಲಿ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್, ಯುರೋಪಿಯನ್ ಪಾರ್ಲಿಮೆಂಟ್‌ನ ಫ್ರೆಂಚ್ ಸದಸ್ಯೆ ರಿಮಾ ಹಸನ್ ಸೇರಿದಂತೆ ಇತರ ಹೋರಾಟಗಾರರು ಕೈಗಳನ್ನು ಮೇಲಕ್ಕೆತ್ತಿರುವ ದೃಶ್ಯಗಳು ಮತ್ತು ಇಸ್ರೇಲಿ ಪಡೆಗಳು ಹಡಗನ್ನು ಹತ್ತಿ ಅವರನ್ನು “ಅಪಹರಿಸಿದ” ದೃಶ್ಯವನ್ನು ತೋರಿಸಲಾಗಿದೆ.

ಹೋರಾಟಗಾರರನ್ನು ಪ್ರತಿನಿಧಿಸುವ ಪ್ಯಾಲೆಸ್ತೀನಿಯನ್ ಕಾನೂನು ಕೇಂದ್ರವಾದ ಅದಾಲಾ ಇದಕ್ಕೆ ಪ್ರತಿಕ್ರಿಯಿಸಿದ್ದು, ಗಡೀಪಾರು ಮಾಡುವ ಮೊದಲು ಅವರನ್ನು ಬಂಧನ ಕೇಂದ್ರದಲ್ಲಿ ಇರಿಸಲಾಗುವುದು ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ಜಲ ಪ್ರದೇಶದಲ್ಲಿದ್ದ ಹಡಗನ್ನು ಸ್ವಾಧೀನಪಡಿಸಿಕೊಳ್ಳಲು ಇಸ್ರೇಲ್‌ಗೆ “ಯಾವುದೇ ಕಾನೂನು ಅಧಿಕಾರ” ಇಲ್ಲ ಎಂದು ಅದು ಹೇಳಿದೆ. ಅವರು ಹೊರಟಿದ್ದು ಇಸ್ರೇಲ್‌ಗೆ ಅಲ್ಲ, ಬದಲಾಗಿ “ಪ್ಯಾಲೆಸ್ತೀನ್ ದೇಶದ ಪ್ರಾದೇಶಿಕ ಜಲಪ್ರದೇಶ”ಕ್ಕೆ ಹೋಗುತ್ತಿದ್ದ ಹಡಗು ಅದಾಗಿತ್ತು” ಎಂದು ಅದಾಲಾ ಹೇಳಿತ್ತು. 12 ನಿರಾಯುಧ ಹೋರಾಟಗಾರರ ಬಂಧನಗಳು ಅಂತರರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ಸೋಮವಾರ ಮುಂಜಾನೆ ಬಂಧಿಸಲ್ಪಟ್ಟಾಗಿನಿಂದ ಹೋರಾಟಗಾರರೊಂದಿಗೆ ಯಾವುದೇ ಸಂಪರ್ಕವಿಲ್ಲ ಎಂದು FFC ಸಂಘಟಕರಾದ ಹುವೈದಾ ಅರಾಫ್ ಅಲ್ ಜಝೀರಾಗೆ ತಿಳಿಸಿದ್ದಾರೆ. “ಇಂದು ರಾತ್ರಿ – ಸಾಧ್ಯವಾದಷ್ಟು ಬೇಗ ಅವರನ್ನು ಸಂಪರ್ಕಿಸಲು ಒತ್ತಾಯಿಸಲು ನಾವು ವಕೀಲರನ್ನು ಸಿದ್ಧಪಡಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಮದ್ಲೀನ್ ಯುನೈಟೆಡ್ ಕಿಂಗ್‌ಡಮ್ ಧ್ವಜದ ಅಡಿಯಲ್ಲಿ ನೌಕಾಯಾನ ಮಾಡುತ್ತಿದ್ದಾಗ, ಇಸ್ರೇಲಿ ಕಮಾಂಡೋಗಳು ಅದನ್ನು ಬಲವಂತವಾಗಿ ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಇಸ್ರೇಲ್ ಸೇನೆ ಅಂತರರಾಷ್ಟ್ರೀಯ ಜಲ ಪ್ರದೇಶಕ್ಕೆ ಹೋಗಿ ಸಾರ್ವಭೌಮ ಯುಕೆ ಹಡಗನ್ನು ಆಕ್ರಮಿಸಿತು. ಇದು ಸ್ಪಷ್ಟವಾಗಿ ಕಾನೂನುಬಾಹಿರವಾಗಿದೆ. ಯುನೈಟೆಡ್ ಕಿಂಗ್‌ಡಮ್‌ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. ಅವರಿಂದ ನಾವು ಖಂಡನೆಯನ್ನು ನಾವು ನಿರೀಕ್ಷಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ, ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಹತ್ಯಾಕಾಂಡದಲ್ಲಿ ಕನಿಷ್ಠ 54,927 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 126,615 ಜನರು ಗಾಯಗೊಂಡಿದ್ದಾರೆ. ಅಕ್ಟೋಬರ್ 7, 2023 ರಂದು ಹಮಾಸ್ ನೇತೃತ್ವದ ದಾಳಿಯ ಸಮಯದಲ್ಲಿ ಇಸ್ರೇಲ್‌ನಲ್ಲಿ ಅಂದಾಜು 1,139 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರನ್ನು ಸೆರೆಹಿಡಿಯಲಾಗಿದೆ.

ಈ ನಡುವೆ, ಗಾಝಾದ ದಕ್ಷಿಣ ರಫಾದಲ್ಲಿರುವ ಅಮೆರಿಕ ಬೆಂಬಲಿತ ಗಾಜಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (GHF) ನೆರವು ಕೇಂದ್ರದ ಬಳಿ ಕನಿಷ್ಠ 14 ಜನರು ಸೇರಿದಂತೆ ಗಾಝಾದಲ್ಲಿ ಕನಿಷ್ಠ 60 ಪ್ಯಾಲೆಸ್ತೀನಿಯನ್ನರನ್ನು ಸೋಮವಾರ ಇಸ್ರೇಲ್ ಪಡೆಗಳು ಕೊಂದಿವೆ ಎಂದು ವರದಿಯಾಗಿವೆ.

ವಸಾಹತುಗಾರರು ಆಕ್ರಮಿಸಿರುವ ಪ್ಯಾಲೆಸ್ತೀನ್‌ನ ಗಾಝಾಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ’ದ ನೆರವು ಹಡಗು ‘ಮದ್ಲೀನ್’ ಇಟಲಿಯ ಸಿಸಿಲಿಯಿಂದ ಜೂನ್ 1ರ ಭಾನುವಾರ ಹೊರಟಿತ್ತು.  ಹಡಗಿನಲ್ಲಿ ಸ್ವೀಡಿಷ್‌ ಮೂಲದ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಅವರೊಂದಿಗೆ ಜರ್ಮನಿಯ ಯಾಸೆಮಿನ್ ಅಕಾರ್, ಬ್ರೆಜಿಲ್‌ನ ಥಿಯಾಗೊ ಅವಿಲಾ, ಫ್ರಾನ್ಸ್‌ನ ಒಮರ್ ಫಯಾದ್, ರಿಮಾ ಹಸನ್, ಬ್ಯಾಪ್ಟಿಸ್ಟ್ ಆಂಡ್ರೆ, ಪ್ಯಾಸ್ಕಲ್ ಮೌರಿಯರಾಸ್, ಯಾನಿಸ್ ಮಹಮ್ದಿ, ಟರ್ಕಿಯ ಶುವಾಯ್ಬ್ ಒರ್ಡು, ರೆವಾ ವಿಯಾರ್ಡ್, ಸ್ಪೇನ್‌ನ ಸೆರ್ಗಿಯೊ ಟೊರಿಬಿಯೊ ಮತ್ತು ನೆದರ್ಲ್ಯಾಂಡ್ಸ್‌ನ ಮಾರ್ಕೊ ವ್ಯಾನ್ ರೆನ್ನೆಸ್ ಹಡಗಿನಲ್ಲಿ ಇದ್ದರು.

ಹಡಗಿನಲ್ಲಿ ಬೇಬಿ ಫಾರ್ಮುಲಾ, ನ್ಯಾಪ್‌ಕಿನ್, ಹಿಟ್ಟು, ಅಕ್ಕಿ, ನೈರ್ಮಲ್ಯ ಉತ್ಪನ್ನಗಳು, ನೀರಿನ ಫಿಲ್ಟರ್‌ಗಳು ಮತ್ತು ವೈದ್ಯಕೀಯ ಸರಬರಾಜುಗಳು ಇದ್ದವು. ಜೊತೆಗೆ ಈ ಹಡಗು ಗಾಝಾದ ಮೇಲೆ ವಸಾಹತುಗಾರ ಇಸ್ರೇಲ್‌ನ ಎರಡು ದಶಕಗಳ ನೌಕಾ ದಿಗ್ಬಂಧನವನ್ನು ಮುರಿಯುವ ಉದ್ದೇಶ ಕೂಡಾ ಹೊಂದಿತ್ತು. ಹಡಗನ್ನು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟವು ಗಾಝಾಗೆ ಅಂತರರಾಷ್ಟ್ರೀಯ ಪ್ರಯತ್ನದ ಭಾಗವಾಗಿ ಆಯೋಜಿಸಿತ್ತು.

ಈ ಹಿಂದೆ ಕೂಡಾ ಫ್ರೀಡಂ ಫ್ರೋಟಿಲ್ಲಾ ಒಕ್ಕೂಟದ ನೆರವಿನೊಂದಿಗೆ ಹೊರಟಿದ್ದ ಹಡಗಿನ ಮೇಲೆ ಮೆಡಿಟರೇನಿಯನ್‌ ಸಮುದ್ರದಲ್ಲಿ ಡ್ರೋನ್ ದಾಳಿಗಳಾಗಿದ್ದವು. ಹಾಗಾಗಿ, ಈ ಬಾರಿ ಟ್ರ್ಯಾಕರ್‌ನೊಂದಿಗೆ ತನ್ನ ‘ಮದ್ಲೀನ್’ ಹಡಗನ್ನು ಕಳುಹಿಸಿತ್ತು.

“2014 ರಲ್ಲಿ ಗಾಝಾದ ಮೊದಲ ಮತ್ತು ಏಕೈಕ ಮೀನುಗಾರ ಮಹಿಳೆಯಾದ ‘ಮದ್ಲೀನ್’ ಅವರ ಹೆಸರನ್ನು ಹಡಗಿಗೆ ಇಡಲಾಗಿದ್ದು, ಪ್ಯಾಲೆಸ್ತೀನಿ ಹೋರಾಟದ ಅವಿಶ್ರಾಂತ ಮನೋಭಾವ ಮತ್ತು ಇಸ್ರೇಲ್‌ನ ಸಾಮೂಹಿಕ ಶಿಕ್ಷೆ ಮತ್ತು ಉದ್ದೇಶಪೂರ್ವಕ ಹಸಿವು ನೀತಿಗಳ ಹೇರಿಕೆಗಳ ವಿರುದ್ಧ ಬೆಳೆಯುತ್ತಿರುವ ಜಾಗತಿಕ ಪ್ರತಿರೋಧವನ್ನು ಇದು ಸಂಕೇತಿಸುತ್ತದೆ” ಎಂದು ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ ಹೇಳಿತ್ತು.

ಗಾಝಾ ಪ್ರದೇಶದ ಸುಮಾರು 20 ಲಕ್ಷ ನಿವಾಸಿಗಳು ಹಸಿವನ್ನು ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ಸಹ ಸಂಸ್ಥೆಗಳು ಮತ್ತು ಪ್ರಮುಖ ಮಾನವೀಯ ಸಂಸ್ಥೆಗಳು ಗಾಝಾದಲ್ಲಿನ ಭೀಕರ ಪರಿಸ್ಥಿತಿಗಳನ್ನು ವರದಿ ಮಾಡುತ್ತಲೇ ಇವೆ. ವಸಾಹತುಗಾರ ಇಸ್ರೇಲಿ ನಿರ್ಬಂಧಗಳು, ನಾಗರಿಕ ಸುವ್ಯವಸ್ಥೆಯಲ್ಲಿನ ಕುಸಿತ ಮತ್ತು ವ್ಯಾಪಕ ಲೂಟಿಯು ನೆರವು ವಿತರಣೆಗೆ ಪ್ರಾಥಮಿಕ ಅಡೆತಡೆಗಳಾಗಿ ಅವರು ಉಲ್ಲೇಖಿಸಿದ್ದಾರೆ.ಗಾಝಾ – ಮದ್ಲೀನ್

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  #AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ

#AllEyesOnDeck | ಗಾಝಾಗೆ ಹೊರಟ ‘ಮದ್ಲೀನ್‌’ಗೆ 4ನೇ ಬೆಳಗು; ಗ್ರೀಸ್‌ ತೀರದ ಬಳಿ ಡ್ರೋನ್ ಹಾರಾಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...