Homeಅಂತರಾಷ್ಟ್ರೀಯಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

ಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

- Advertisement -
- Advertisement -

ಗಾಝಾ ನಗರದಲ್ಲಿ ಹಮಾಸ್ ನಡೆಸುತ್ತಿದ್ದ ಸಂಸತ್ತು ಮತ್ತು ಇತರ ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್‌ ಸೇನೆ ಹೇಳಿದೆ.

ಇಸ್ರೇಲ್‌ನ ಮಿಲಿಟರಿ ಘಟಕಗಳು ಹಮಾಸ್ ಸಂಸತ್ತು, ಸರ್ಕಾರಿ ಕಟ್ಟಡ, ಹಮಾಸ್ ಪೊಲೀಸ್ ಪ್ರಧಾನ ಕಚೇರಿ ಮತ್ತು  ಶಸ್ತ್ರಾಸ್ತ್ರಗಳ ಉತ್ಪಾದನೆ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಘಟಕವನ್ನು ಕೂಡ ವಶಪಡಿಸಿಕೊಂಡಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್ ಪಡೆಗಳ ದಾಳಿಯಿಂದಾಗಿ 8 ಮಂದಿ ಪ್ಯಾಲೆಸ್ತೀನಿಯನ್ನರು ಸಾವಿಗೀಡಾಗಿದ್ದಾರೆ . ತುಲ್ಕರೇಮ್‌ ನಗರದಲ್ಲಿ ಇಸ್ರೇಲ್‌ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ ಎಂದು  ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರ ಅಲ್ ಶಿಫಾ ಆಸ್ಪತ್ರೆಯ ಗೇಟ್‌ಗಳ ಹೊರಗೆ ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳನ್ನು ನಿಲ್ಲಿಸಿತ್ತು. ಅಲ್ ಶಿಫಾ ಆಸ್ಪತ್ರೆಯ ಆವರಣದಲ್ಲಿ  ಇಸ್ರೇಲ್‌ ಸೇನೆ ನಡೆಸಿದ ದಾಳಿಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿ ಅಲ್ ಶಿಫಾ ಆಸ್ಪತ್ರೆಯಲ್ಲಿ ನೂರಾರು ಸಾವುಗಳು ಸಂಭವಿಸಿದೆ. ನಿನ್ನೆ ಆಸ್ಪತ್ರೆಯ ಆವರಣದಲ್ಲೇ ನವಜಾತ ಶಿಶುಗಳು ಸೇರಿ 179 ಮಂದಿಯನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ.

ಅಲ್ ಶಿಫಾ ಆಸ್ಪತ್ರೆಯು ಗಾಝಾ ನಗರದ ಅತಿದೊಡ್ಡ ಆಸ್ಪತ್ರೆಯಾಗಿದೆ. ಇಸ್ರೇಲ್‌ ಪಡೆ ಇದೀಗ ಆಸ್ಪತ್ರೆಯ ಗೇಟ್‌ನ್ನು ಸುತ್ತುವರಿದಿದೆ. ಆಸ್ಪತ್ರೆಯ ಆವರಣದ ಬಳಿ ಇಸ್ರೇಲ್‌ ದಾಳಿ ಬಳಿಕ ಆಸ್ಪತ್ರೆಗೆ ವಿದ್ಯುತ್‌ ಕೊರತೆ  ಉಂಟಾಗಿದೆ. ಆಮ್ಲಜನಕದ ಕೊರತೆಯಿಂದ ನವಜಾತ ಶಿಶುಗಳ ಸಾವು ಸಂಭವಿಸಿದೆ. ಐಸಿಯು ಘಟಕಗಳ ಸ್ಥಗಿತದಿಂದ ಅಪಾರ ಸಾವುಗಳು ಸಂಭವಿಸಿದೆ.

ರೋಗಿಗಳು, ಸಿಬ್ಬಂದಿ ಮತ್ತು ಸ್ಥಳಾಂತರಗೊಂಡ ನಾಗರಿಕರು ಸೇರಿದಂತೆ 10,000ಕ್ಕೂ ಹೆಚ್ಚು ಜನರು ಅಲ್ ಶಿಫಾದೊಳಗೆ ಇರಬಹುದು ಎನ್ನಲಾಗಿದೆ. ಆದರೆ ಆಸ್ಪತ್ರೆ ಸುತ್ತ ಇಸ್ರೇಲ್‌ ಪಡೆಗಳು ಆವರಿಸಿದ ಕಾರಣ ತೆರವಿಗೆ ಸಮಸ್ಯೆಯಾಗಿದೆ.

ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಮರ್ವಾನ್ ಅಬು ಸದಾ ಮಾತನಾಡಿ, ಅಲ್-ಶಿಫಾದ ಹೊರಗೆ ಎಲ್ಲೆಡೆ ಗುಂಡಿನ ದಾಳಿ ಮತ್ತು ಬಾಂಬ್ ದಾಳಿ ನಡೆದಿದೆ. ನೀವು ದಾಳಿಯ ಶಬ್ಧವನ್ನು ಪ್ರತಿ ಸೆಕೆಂಡಿನಲ್ಲಿ ಕೇಳಬಹುದು. ಅಲ್-ಶಿಫಾ ಆಸ್ಪತ್ರೆಯಿಂದ ಯಾರೂ ಹೊರಬರಲು ಸಾಧ್ಯವಾಗುತ್ತಿಲ್ಲ. ಯಾರೂ ಅಲ್-ಶಿಫಾ ಆಸ್ಪತ್ರೆಗೆ ಬರುವಂತಿಲ್ಲ ಎಂದು ಅವರು ಹೇಳಿದ್ದರು.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...