Homeಅಂತರಾಷ್ಟ್ರೀಯಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

ಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

- Advertisement -
- Advertisement -

ಗಾಝಾ ನಗರದಲ್ಲಿ ಹಮಾಸ್ ನಡೆಸುತ್ತಿದ್ದ ಸಂಸತ್ತು ಮತ್ತು ಇತರ ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್‌ ಸೇನೆ ಹೇಳಿದೆ.

ಇಸ್ರೇಲ್‌ನ ಮಿಲಿಟರಿ ಘಟಕಗಳು ಹಮಾಸ್ ಸಂಸತ್ತು, ಸರ್ಕಾರಿ ಕಟ್ಟಡ, ಹಮಾಸ್ ಪೊಲೀಸ್ ಪ್ರಧಾನ ಕಚೇರಿ ಮತ್ತು  ಶಸ್ತ್ರಾಸ್ತ್ರಗಳ ಉತ್ಪಾದನೆ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಘಟಕವನ್ನು ಕೂಡ ವಶಪಡಿಸಿಕೊಂಡಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್ ಪಡೆಗಳ ದಾಳಿಯಿಂದಾಗಿ 8 ಮಂದಿ ಪ್ಯಾಲೆಸ್ತೀನಿಯನ್ನರು ಸಾವಿಗೀಡಾಗಿದ್ದಾರೆ . ತುಲ್ಕರೇಮ್‌ ನಗರದಲ್ಲಿ ಇಸ್ರೇಲ್‌ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ ಎಂದು  ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರ ಅಲ್ ಶಿಫಾ ಆಸ್ಪತ್ರೆಯ ಗೇಟ್‌ಗಳ ಹೊರಗೆ ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳನ್ನು ನಿಲ್ಲಿಸಿತ್ತು. ಅಲ್ ಶಿಫಾ ಆಸ್ಪತ್ರೆಯ ಆವರಣದಲ್ಲಿ  ಇಸ್ರೇಲ್‌ ಸೇನೆ ನಡೆಸಿದ ದಾಳಿಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿ ಅಲ್ ಶಿಫಾ ಆಸ್ಪತ್ರೆಯಲ್ಲಿ ನೂರಾರು ಸಾವುಗಳು ಸಂಭವಿಸಿದೆ. ನಿನ್ನೆ ಆಸ್ಪತ್ರೆಯ ಆವರಣದಲ್ಲೇ ನವಜಾತ ಶಿಶುಗಳು ಸೇರಿ 179 ಮಂದಿಯನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ.

ಅಲ್ ಶಿಫಾ ಆಸ್ಪತ್ರೆಯು ಗಾಝಾ ನಗರದ ಅತಿದೊಡ್ಡ ಆಸ್ಪತ್ರೆಯಾಗಿದೆ. ಇಸ್ರೇಲ್‌ ಪಡೆ ಇದೀಗ ಆಸ್ಪತ್ರೆಯ ಗೇಟ್‌ನ್ನು ಸುತ್ತುವರಿದಿದೆ. ಆಸ್ಪತ್ರೆಯ ಆವರಣದ ಬಳಿ ಇಸ್ರೇಲ್‌ ದಾಳಿ ಬಳಿಕ ಆಸ್ಪತ್ರೆಗೆ ವಿದ್ಯುತ್‌ ಕೊರತೆ  ಉಂಟಾಗಿದೆ. ಆಮ್ಲಜನಕದ ಕೊರತೆಯಿಂದ ನವಜಾತ ಶಿಶುಗಳ ಸಾವು ಸಂಭವಿಸಿದೆ. ಐಸಿಯು ಘಟಕಗಳ ಸ್ಥಗಿತದಿಂದ ಅಪಾರ ಸಾವುಗಳು ಸಂಭವಿಸಿದೆ.

ರೋಗಿಗಳು, ಸಿಬ್ಬಂದಿ ಮತ್ತು ಸ್ಥಳಾಂತರಗೊಂಡ ನಾಗರಿಕರು ಸೇರಿದಂತೆ 10,000ಕ್ಕೂ ಹೆಚ್ಚು ಜನರು ಅಲ್ ಶಿಫಾದೊಳಗೆ ಇರಬಹುದು ಎನ್ನಲಾಗಿದೆ. ಆದರೆ ಆಸ್ಪತ್ರೆ ಸುತ್ತ ಇಸ್ರೇಲ್‌ ಪಡೆಗಳು ಆವರಿಸಿದ ಕಾರಣ ತೆರವಿಗೆ ಸಮಸ್ಯೆಯಾಗಿದೆ.

ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಮರ್ವಾನ್ ಅಬು ಸದಾ ಮಾತನಾಡಿ, ಅಲ್-ಶಿಫಾದ ಹೊರಗೆ ಎಲ್ಲೆಡೆ ಗುಂಡಿನ ದಾಳಿ ಮತ್ತು ಬಾಂಬ್ ದಾಳಿ ನಡೆದಿದೆ. ನೀವು ದಾಳಿಯ ಶಬ್ಧವನ್ನು ಪ್ರತಿ ಸೆಕೆಂಡಿನಲ್ಲಿ ಕೇಳಬಹುದು. ಅಲ್-ಶಿಫಾ ಆಸ್ಪತ್ರೆಯಿಂದ ಯಾರೂ ಹೊರಬರಲು ಸಾಧ್ಯವಾಗುತ್ತಿಲ್ಲ. ಯಾರೂ ಅಲ್-ಶಿಫಾ ಆಸ್ಪತ್ರೆಗೆ ಬರುವಂತಿಲ್ಲ ಎಂದು ಅವರು ಹೇಳಿದ್ದರು.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....