Homeಅಂತರಾಷ್ಟ್ರೀಯಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

ಗಾಝಾ: ಸಂಸತ್ತು, ಸರ್ಕಾರಿ ಕಚೇರಿಗಳನ್ನು ವಶಪಡಿಸಿಕೊಂಡ ಇಸ್ರೇಲ್‌ ಸೇನೆ

- Advertisement -
- Advertisement -

ಗಾಝಾ ನಗರದಲ್ಲಿ ಹಮಾಸ್ ನಡೆಸುತ್ತಿದ್ದ ಸಂಸತ್ತು ಮತ್ತು ಇತರ ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್‌ ಸೇನೆ ಹೇಳಿದೆ.

ಇಸ್ರೇಲ್‌ನ ಮಿಲಿಟರಿ ಘಟಕಗಳು ಹಮಾಸ್ ಸಂಸತ್ತು, ಸರ್ಕಾರಿ ಕಟ್ಟಡ, ಹಮಾಸ್ ಪೊಲೀಸ್ ಪ್ರಧಾನ ಕಚೇರಿ ಮತ್ತು  ಶಸ್ತ್ರಾಸ್ತ್ರಗಳ ಉತ್ಪಾದನೆ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಘಟಕವನ್ನು ಕೂಡ ವಶಪಡಿಸಿಕೊಂಡಿದೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ವೆಸ್ಟ್‌ಬ್ಯಾಂಕ್‌ನಲ್ಲಿ ಇಸ್ರೇಲ್ ಪಡೆಗಳ ದಾಳಿಯಿಂದಾಗಿ 8 ಮಂದಿ ಪ್ಯಾಲೆಸ್ತೀನಿಯನ್ನರು ಸಾವಿಗೀಡಾಗಿದ್ದಾರೆ . ತುಲ್ಕರೇಮ್‌ ನಗರದಲ್ಲಿ ಇಸ್ರೇಲ್‌ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 7 ಮಂದಿ ಸಾವಿಗೀಡಾಗಿದ್ದಾರೆ ಎಂದು  ಪ್ಯಾಲೆಸ್ತೀನ್‌ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರ ಅಲ್ ಶಿಫಾ ಆಸ್ಪತ್ರೆಯ ಗೇಟ್‌ಗಳ ಹೊರಗೆ ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳನ್ನು ನಿಲ್ಲಿಸಿತ್ತು. ಅಲ್ ಶಿಫಾ ಆಸ್ಪತ್ರೆಯ ಆವರಣದಲ್ಲಿ  ಇಸ್ರೇಲ್‌ ಸೇನೆ ನಡೆಸಿದ ದಾಳಿಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿ ಅಲ್ ಶಿಫಾ ಆಸ್ಪತ್ರೆಯಲ್ಲಿ ನೂರಾರು ಸಾವುಗಳು ಸಂಭವಿಸಿದೆ. ನಿನ್ನೆ ಆಸ್ಪತ್ರೆಯ ಆವರಣದಲ್ಲೇ ನವಜಾತ ಶಿಶುಗಳು ಸೇರಿ 179 ಮಂದಿಯನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ.

ಅಲ್ ಶಿಫಾ ಆಸ್ಪತ್ರೆಯು ಗಾಝಾ ನಗರದ ಅತಿದೊಡ್ಡ ಆಸ್ಪತ್ರೆಯಾಗಿದೆ. ಇಸ್ರೇಲ್‌ ಪಡೆ ಇದೀಗ ಆಸ್ಪತ್ರೆಯ ಗೇಟ್‌ನ್ನು ಸುತ್ತುವರಿದಿದೆ. ಆಸ್ಪತ್ರೆಯ ಆವರಣದ ಬಳಿ ಇಸ್ರೇಲ್‌ ದಾಳಿ ಬಳಿಕ ಆಸ್ಪತ್ರೆಗೆ ವಿದ್ಯುತ್‌ ಕೊರತೆ  ಉಂಟಾಗಿದೆ. ಆಮ್ಲಜನಕದ ಕೊರತೆಯಿಂದ ನವಜಾತ ಶಿಶುಗಳ ಸಾವು ಸಂಭವಿಸಿದೆ. ಐಸಿಯು ಘಟಕಗಳ ಸ್ಥಗಿತದಿಂದ ಅಪಾರ ಸಾವುಗಳು ಸಂಭವಿಸಿದೆ.

ರೋಗಿಗಳು, ಸಿಬ್ಬಂದಿ ಮತ್ತು ಸ್ಥಳಾಂತರಗೊಂಡ ನಾಗರಿಕರು ಸೇರಿದಂತೆ 10,000ಕ್ಕೂ ಹೆಚ್ಚು ಜನರು ಅಲ್ ಶಿಫಾದೊಳಗೆ ಇರಬಹುದು ಎನ್ನಲಾಗಿದೆ. ಆದರೆ ಆಸ್ಪತ್ರೆ ಸುತ್ತ ಇಸ್ರೇಲ್‌ ಪಡೆಗಳು ಆವರಿಸಿದ ಕಾರಣ ತೆರವಿಗೆ ಸಮಸ್ಯೆಯಾಗಿದೆ.

ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಮರ್ವಾನ್ ಅಬು ಸದಾ ಮಾತನಾಡಿ, ಅಲ್-ಶಿಫಾದ ಹೊರಗೆ ಎಲ್ಲೆಡೆ ಗುಂಡಿನ ದಾಳಿ ಮತ್ತು ಬಾಂಬ್ ದಾಳಿ ನಡೆದಿದೆ. ನೀವು ದಾಳಿಯ ಶಬ್ಧವನ್ನು ಪ್ರತಿ ಸೆಕೆಂಡಿನಲ್ಲಿ ಕೇಳಬಹುದು. ಅಲ್-ಶಿಫಾ ಆಸ್ಪತ್ರೆಯಿಂದ ಯಾರೂ ಹೊರಬರಲು ಸಾಧ್ಯವಾಗುತ್ತಿಲ್ಲ. ಯಾರೂ ಅಲ್-ಶಿಫಾ ಆಸ್ಪತ್ರೆಗೆ ಬರುವಂತಿಲ್ಲ ಎಂದು ಅವರು ಹೇಳಿದ್ದರು.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...