Homeಅಂತರಾಷ್ಟ್ರೀಯಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್ ಕಳೆದ 10 ವಾರಗಳಿಂದ ದಾಳಿಯನ್ನು ನಡೆಸುತ್ತಿದೆ. 19,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಯುದ್ಧದಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬಾಂಬ್‌ಗಳ ದಾಳಿಯಲ್ಲಿ ನಾಗರಿಕರ ಸಾವು ಒಂದೆಡೆಯಾದರೆ, ಇನ್ನೊಂದೆಡೆ ಯುದ್ಧದಿಂದಾಗಿ ಗಾಝಾದಲ್ಲಿ ಭೀಕರ ಸ್ಥಿತಿ ಎದುರಾಗಿದ್ದು, ಸಾಂಕ್ರಾಮಿಕ ರೋಗಗಳು ಉದ್ಭವಿಸುತ್ತಿದೆ.

ಗಾಝಾದಲ್ಲಿ ಆರೋಗ್ಯ ವ್ಯವಸ್ಥೆಯು ಕುಸಿಯುತ್ತಿದೆ ಮತ್ತು ಸಾಂಕ್ರಾಮಿಕ ರೋಗಗಳ ಆತಂಕಕಾರಿಯಾಗಿ ಹೊರಹೊಮ್ಮಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಎಚ್ಚರಿಕೆ ನೀಡಿತ್ತು. ಆದರೆ ಇದೀಗ ಗಾಝಾದಲ್ಲಿ ಆ ಪರಿಸ್ಥಿತಿ ಎದುರಾಗಿದೆ.

ಗಾಝಾ ನಗರದ ಖಾನ್ ಯೂನಿಸ್‌ ನಗರದ ತಹಾನಿ ಅಬು ತೈಮಾ ಅವರು ಈ ಬಗ್ಗೆ ಮಾತನಾಡುತ್ತಾ, ಇಸ್ರೇಲ್‌ ದಾಳಿಗೆ ಓರ್ವ ಪುತ್ರ ಮತ್ತು ಓರ್ವ ಸಹೋದರನನ್ನು ನಾನು ಕಳೆದುಕೊಂಡಿದ್ದೇನೆ. ಈಗ ಸಾಂಕ್ರಾಮಿಕ ರೋಗ ಇನ್ನುಳಿದ ನನ್ನ ಕುಟುಂಬದ ಸದಸ್ಯರನ್ನು ಬಲಿ ಪಡೆಯುತ್ತದೆ ಎಂಬ ಭೀತಿ ನನಗೆ ಕಾಡುತ್ತಿದೆ ಎಂದು ಹೇಳಿದ್ದಾರೆ. ಅಬು ತೈಮಾ ಅವರ 2 ವರ್ಷದ ಮಗಳು ಅತಿಸಾರ, ವಾಂತಿಯಿಂದ ಬಳಲುತ್ತಿದ್ದಾರೆ ಮತ್ತು ಶೀತ ಮತ್ತು ಆಹಾರದ ಕೊರತೆಯಿಂದ ನಡುಗುತ್ತಿದ್ದಾರೆ. ಮಗು ನನ್ನಲ್ಲಿ ಆಹಾರವನ್ನು ಕೇಳುತ್ತದೆ, ಆದರೆ ನಾನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.

42 ವರ್ಷದ ಅಬು ತೈಮಾ ಅವರಿಗೆ ಕ್ಯಾನ್ಸರ್ ಇದೆ. ಈಗ ಅವರು ತೀವ್ರವಾದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯುದ್ಧದಿಂದಾಗಿ ಧೂಳು ಮತ್ತು ಇತರ ಕಣಗಳಿಂದಾಗಿ ಮಾಲಿನ್ಯ ಉಂಟಾಗಿ ಈ ಸಮಸ್ಯೆ ಉದ್ಭವಿಸಿದೆ ಎಂದು ಅವರು ಹೇಳಿದ್ದಾರೆ. ಇದಲ್ಲದೆ ವಿದ್ಯುತ್‌ ಇಲ್ಲದ ಕಾರಣ ಬೆಳಕಿಗಾಗಿ ನಾನು  ಉರುವಲುಗಳನ್ನು ಸುಡುತ್ತೇನೆ. ಹೊಗೆ ನನ್ನನ್ನು ಕೊಲ್ಲುತ್ತದೆ ಎಂದು ನನಗೆ ಗೊತ್ತಿದೆ ಆದರೆ ನನಗೆ ಬೇರೆ ದಾರಿಯಿಲ್ಲ. ನನ್ನ ಕುಟುಂಬವು ನಾಸರ್ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದೆ. ಆಸ್ಪತ್ರೆಯು ಗಂಭೀರವಾಗಿ ಗಾಯಗೊಂಡವರಿಗೆ ಮಾತ್ರ ಸೀಮಿತ ಚಿಕಿತ್ಸೆಯನ್ನು ನೀಡುತ್ತಿದೆ. ರೋಗಿಗಳು ಮತ್ತು ಆಶ್ರಯ ಪಡೆದ ಜನರು ಶುದ್ಧ ನೀರಿಗಾಗಿ ಪರದಾಡುತ್ತಿದ್ದಾರೆ. ನೈರ್ಮಲ್ಯಗಳಿಲ್ಲ, ಕಿಕ್ಕಿರಿದ ಜನರಿಂದ ಸೋಂಕುಗಳು ವೇಗವಾಗಿ ಹರಡುತ್ತಿವೆ ಎಂದು ಅಬು ತೈಮಾ ಅವರು ಹೇಳಿದ್ದಾರೆ.

ಹಮಾಸ್ ವಿರುದ್ಧ ಇಸ್ರೇಲ್‌ನ ಸೇನಾ ಕಾರ್ಯಾಚರಣೆಯ 10 ವಾರಗಳು ಕಳೆದಿದೆ. ಜನರ ವಲಸೆಯಿಂದ ಕಿಕ್ಕಿರಿದ ಆಶ್ರಯ ತಾಣಗಳು, ನಿರಂತರ ಬಾಂಬ್ ದಾಳಿಗಳು, ಹಸಿವಿನಿಂದ ಬಳಲುತ್ತಿರುವ ಗಾಝಾ ಈಗ ರೋಗಕ್ಕೆ ಫಲವತ್ತಾದ ನೆಲವಾಗಿದೆ.

ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಮಕ್ಕಳಲ್ಲಿ ಅತಿಸಾರದ ಪ್ರಕರಣಗಳು ನ.29ರಿಂದ ಡಿ.10ರವರೆಗೆ 66 ಪ್ರತಿಶತದಷ್ಟು ಹೆಚ್ಚಿವೆ ಮತ್ತು ವಯಸ್ಕರಲ್ಲಿ ಈ ಅಂಕಿ ಅಂಶವು 55 ಪ್ರತಿಶತದಷ್ಟಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿದೆ. ನನ್ನ ಮಕ್ಕಳಿಗೆ ಜೀರ್ಣಕ್ರಿಯೆಯ ಸಮಸ್ಯೆಗಳಿವೆ ಮತ್ತು ನಿರಂತರವಾಗಿ ವಾಂತಿಯಾಗುತ್ತದೆ ಮತ್ತು ಅವರಿಗೆ ಚಿಕಿತ್ಸೆ ನೀಡಲು ನನಗೆ ಯಾವುದೇ ಮಾರ್ಗವಿಲ್ಲ. ಆಸ್ಪತ್ರೆಗಳು ತುಂಬಿಕೊಂಡಿವೆ. ಅಲ್ಲಿ ಯಾವುದೇ ಸೇವೆಗಳು ಸಿಗುತ್ತಿಲ್ಲ. ಯಾವುದೇ ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮನ್ನು ಭೇಟಿ ಮಾಡಿಲ್ಲ ಎಂದು 37 ವರ್ಷದ ಅಲ್-ಟಾಟ್ರಿ ಹೇಳಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...