Homeಅಂತರಾಷ್ಟ್ರೀಯಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್ ಕಳೆದ 10 ವಾರಗಳಿಂದ ದಾಳಿಯನ್ನು ನಡೆಸುತ್ತಿದೆ. 19,000ಕ್ಕೂ ಅಧಿಕ ಪ್ಯಾಲೆಸ್ತೀನ್‌ ನಾಗರಿಕರು ಯುದ್ಧದಿಂದ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬಾಂಬ್‌ಗಳ ದಾಳಿಯಲ್ಲಿ ನಾಗರಿಕರ ಸಾವು ಒಂದೆಡೆಯಾದರೆ, ಇನ್ನೊಂದೆಡೆ ಯುದ್ಧದಿಂದಾಗಿ ಗಾಝಾದಲ್ಲಿ ಭೀಕರ ಸ್ಥಿತಿ ಎದುರಾಗಿದ್ದು, ಸಾಂಕ್ರಾಮಿಕ ರೋಗಗಳು ಉದ್ಭವಿಸುತ್ತಿದೆ.

ಗಾಝಾದಲ್ಲಿ ಆರೋಗ್ಯ ವ್ಯವಸ್ಥೆಯು ಕುಸಿಯುತ್ತಿದೆ ಮತ್ತು ಸಾಂಕ್ರಾಮಿಕ ರೋಗಗಳ ಆತಂಕಕಾರಿಯಾಗಿ ಹೊರಹೊಮ್ಮಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಎಚ್ಚರಿಕೆ ನೀಡಿತ್ತು. ಆದರೆ ಇದೀಗ ಗಾಝಾದಲ್ಲಿ ಆ ಪರಿಸ್ಥಿತಿ ಎದುರಾಗಿದೆ.

ಗಾಝಾ ನಗರದ ಖಾನ್ ಯೂನಿಸ್‌ ನಗರದ ತಹಾನಿ ಅಬು ತೈಮಾ ಅವರು ಈ ಬಗ್ಗೆ ಮಾತನಾಡುತ್ತಾ, ಇಸ್ರೇಲ್‌ ದಾಳಿಗೆ ಓರ್ವ ಪುತ್ರ ಮತ್ತು ಓರ್ವ ಸಹೋದರನನ್ನು ನಾನು ಕಳೆದುಕೊಂಡಿದ್ದೇನೆ. ಈಗ ಸಾಂಕ್ರಾಮಿಕ ರೋಗ ಇನ್ನುಳಿದ ನನ್ನ ಕುಟುಂಬದ ಸದಸ್ಯರನ್ನು ಬಲಿ ಪಡೆಯುತ್ತದೆ ಎಂಬ ಭೀತಿ ನನಗೆ ಕಾಡುತ್ತಿದೆ ಎಂದು ಹೇಳಿದ್ದಾರೆ. ಅಬು ತೈಮಾ ಅವರ 2 ವರ್ಷದ ಮಗಳು ಅತಿಸಾರ, ವಾಂತಿಯಿಂದ ಬಳಲುತ್ತಿದ್ದಾರೆ ಮತ್ತು ಶೀತ ಮತ್ತು ಆಹಾರದ ಕೊರತೆಯಿಂದ ನಡುಗುತ್ತಿದ್ದಾರೆ. ಮಗು ನನ್ನಲ್ಲಿ ಆಹಾರವನ್ನು ಕೇಳುತ್ತದೆ, ಆದರೆ ನಾನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದಾರೆ.

42 ವರ್ಷದ ಅಬು ತೈಮಾ ಅವರಿಗೆ ಕ್ಯಾನ್ಸರ್ ಇದೆ. ಈಗ ಅವರು ತೀವ್ರವಾದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯುದ್ಧದಿಂದಾಗಿ ಧೂಳು ಮತ್ತು ಇತರ ಕಣಗಳಿಂದಾಗಿ ಮಾಲಿನ್ಯ ಉಂಟಾಗಿ ಈ ಸಮಸ್ಯೆ ಉದ್ಭವಿಸಿದೆ ಎಂದು ಅವರು ಹೇಳಿದ್ದಾರೆ. ಇದಲ್ಲದೆ ವಿದ್ಯುತ್‌ ಇಲ್ಲದ ಕಾರಣ ಬೆಳಕಿಗಾಗಿ ನಾನು  ಉರುವಲುಗಳನ್ನು ಸುಡುತ್ತೇನೆ. ಹೊಗೆ ನನ್ನನ್ನು ಕೊಲ್ಲುತ್ತದೆ ಎಂದು ನನಗೆ ಗೊತ್ತಿದೆ ಆದರೆ ನನಗೆ ಬೇರೆ ದಾರಿಯಿಲ್ಲ. ನನ್ನ ಕುಟುಂಬವು ನಾಸರ್ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದೆ. ಆಸ್ಪತ್ರೆಯು ಗಂಭೀರವಾಗಿ ಗಾಯಗೊಂಡವರಿಗೆ ಮಾತ್ರ ಸೀಮಿತ ಚಿಕಿತ್ಸೆಯನ್ನು ನೀಡುತ್ತಿದೆ. ರೋಗಿಗಳು ಮತ್ತು ಆಶ್ರಯ ಪಡೆದ ಜನರು ಶುದ್ಧ ನೀರಿಗಾಗಿ ಪರದಾಡುತ್ತಿದ್ದಾರೆ. ನೈರ್ಮಲ್ಯಗಳಿಲ್ಲ, ಕಿಕ್ಕಿರಿದ ಜನರಿಂದ ಸೋಂಕುಗಳು ವೇಗವಾಗಿ ಹರಡುತ್ತಿವೆ ಎಂದು ಅಬು ತೈಮಾ ಅವರು ಹೇಳಿದ್ದಾರೆ.

ಹಮಾಸ್ ವಿರುದ್ಧ ಇಸ್ರೇಲ್‌ನ ಸೇನಾ ಕಾರ್ಯಾಚರಣೆಯ 10 ವಾರಗಳು ಕಳೆದಿದೆ. ಜನರ ವಲಸೆಯಿಂದ ಕಿಕ್ಕಿರಿದ ಆಶ್ರಯ ತಾಣಗಳು, ನಿರಂತರ ಬಾಂಬ್ ದಾಳಿಗಳು, ಹಸಿವಿನಿಂದ ಬಳಲುತ್ತಿರುವ ಗಾಝಾ ಈಗ ರೋಗಕ್ಕೆ ಫಲವತ್ತಾದ ನೆಲವಾಗಿದೆ.

ಚಿಕನ್ಪಾಕ್ಸ್, ದದ್ದುಗಳು, ಮೂತ್ರನಾಳದ ಸೋಂಕುಗಳು, ಮೆನಿಂಜೈಟಿಸ್, ಮಂಪ್ಸ್, ಸ್ಕೇಬೀಸ್, ದಡಾರ ಮತ್ತು ಪುಡ್‌ ಪ್ಯಾಯಿಸನಿಂಗ್‌, ಅತಿಸಾರ, ಕಾಮಾಲೆ ಮತ್ತು ಉಸಿರಾಟದ ಸೋಂಕುಗಳು ಹೆಚ್ಚುತ್ತಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಇದಲ್ಲದೆ ಯುದ್ಧ ಪೀಡಿತ ಭೂಮಿಯಲ್ಲಿ ವಿಶ್ವಸಂಸ್ಥೆಯು ಸಂಭಾವ್ಯ 14 ರೋಗಗಳನ್ನು ಪತ್ತೆಹಚ್ಚಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಯುದ್ಧದಿಂದಾಗಿ ಗಾಝಾದ ಪ್ರಾಥಮಿಕ ಆರೈಕೆ ಕೇಂದ್ರಗಳಲ್ಲಿ 3ನೇ ಎರಡರಷ್ಟು ಮುಚ್ಚಲಾಗಿದೆ ಎಂದು WHO ಹೇಳಿದೆ. ಗಾಝಾದ 36 ಆಸ್ಪತ್ರೆಗಳಲ್ಲಿ 11 ಭಾಗಶಃ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಸುಮಾರು 1.3 ಮಿಲಿಯನ್ ಜನರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಪ್ರತಿ 220 ಜನರಿಗೆ ಸರಾಸರಿ ಒಂದು ಶೌಚಾಲಯ ಮತ್ತು ಪ್ರತಿ 4,500ಗೆ ಒಂದು ಮಾತ್ರ ಶವರ್ ಇದೆ ಎನ್ನುವ ಆಘಾತಕಾರಿ ಸತ್ಯವು ಬಹಿರಂಗವಾಗಿದೆ.

ಮಕ್ಕಳಲ್ಲಿ ಅತಿಸಾರದ ಪ್ರಕರಣಗಳು ನ.29ರಿಂದ ಡಿ.10ರವರೆಗೆ 66 ಪ್ರತಿಶತದಷ್ಟು ಹೆಚ್ಚಿವೆ ಮತ್ತು ವಯಸ್ಕರಲ್ಲಿ ಈ ಅಂಕಿ ಅಂಶವು 55 ಪ್ರತಿಶತದಷ್ಟಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿದೆ. ನನ್ನ ಮಕ್ಕಳಿಗೆ ಜೀರ್ಣಕ್ರಿಯೆಯ ಸಮಸ್ಯೆಗಳಿವೆ ಮತ್ತು ನಿರಂತರವಾಗಿ ವಾಂತಿಯಾಗುತ್ತದೆ ಮತ್ತು ಅವರಿಗೆ ಚಿಕಿತ್ಸೆ ನೀಡಲು ನನಗೆ ಯಾವುದೇ ಮಾರ್ಗವಿಲ್ಲ. ಆಸ್ಪತ್ರೆಗಳು ತುಂಬಿಕೊಂಡಿವೆ. ಅಲ್ಲಿ ಯಾವುದೇ ಸೇವೆಗಳು ಸಿಗುತ್ತಿಲ್ಲ. ಯಾವುದೇ ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮನ್ನು ಭೇಟಿ ಮಾಡಿಲ್ಲ ಎಂದು 37 ವರ್ಷದ ಅಲ್-ಟಾಟ್ರಿ ಹೇಳಿದ್ದಾರೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಅವಲೋಕನ ಮಾಡಬೇಕಾದ ಅಂಶಗಳಿವು..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...