Homeಮುಖಪುಟಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

ಇಸ್ರೇಲ್ ದಾಳಿ: ಕನಿಷ್ಠ ಸೌಲಭ್ಯಗಳಿಲ್ಲದೆ ಅಲ್-ಶಿಫಾದಲ್ಲಿ ಜನರ ಆಕ್ರಂದನ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆಯ ದಾಳಿ ಮುಂದುವರೆದಿದ್ದು, ಆಸ್ಪತ್ರೆಗಳು ಮೃತದೇಹ ಮತ್ತು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ. ಇಂಧನ, ಆಮ್ಲಜನಕ ಮತ್ತು ವೈದ್ಯಕೀಯ ಸರಬರಾಜುಗಳ ಕೊರತೆಯು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ.

ಪರಿಸ್ಥಿತಿ ಗಂಭೀರ ಮಟ್ಟಕ್ಕೆ ತಲುಪಿರುವ ಹಿನ್ನೆಲೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ಕದನ ವಿರಾಮಕ್ಕೆ ಆಗ್ರಹಿಸಿದೆ. ಇಸ್ರೇಲ್ ಬೆಂಬಲಿಸುವ ಫ್ರಾನ್ಸ್ ಕೂಡ ತುರ್ತು ಕದನ ವಿರಾಮಕ್ಕೆ ಮನವಿ ಮಾಡಿದೆ.

ಉತ್ತರ ಗಾಝಾದ ಅಲ್-ಶಿಫಾ ಆಸ್ಪತ್ರೆಯ ತುರ್ತು ವಿಭಾಗದಲ್ಲಿ “ರಕ್ತಸ್ನಾನ” ನಡೆಯುತ್ತಿದೆ. ಅಲ್ಲಿ ಪರಿಸ್ಥಿತಿ ಸುಧಾರಿಸಲು ತುರ್ತು ಸೌಲಭ್ಯ ಒದಗಿಸುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ನೂರಾರು ಸ್ಥಳಾಂತರಗೊಂಡ ಜನರು ಆಸ್ಪತ್ರೆಯ ಕಟ್ಟಡ ಮತ್ತು ಮೈದಾನವನ್ನು ಆಶ್ರಯಕ್ಕಾಗಿ ಬಳಸುತ್ತಿದ್ದಾರೆ. ಇದರಿಂದ ಕುಡಿಯುವ ನೀರು ಮತ್ತು ಆಹಾರದ ತೀವ್ರ ಕೊರತೆ ಉಂಟಾಗಿದೆ.

ಇಂಧನ ಮತ್ತು ಆಮ್ಲಜನಕದ ಕೊರತೆಯಿಂದಾಗಿ ಆಪರೇಷನ್ ಥಿಯೇಟರ್‌ಗಳು ಇನ್ನು ಮುಂದೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಡಬ್ಲ್ಯುಹೆಚ್‌ಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್‌ ಶಿಫಾ ಆಸ್ಪತ್ರೆಗೆ ಪ್ರತಿ ನಿಮಿಷಕ್ಕೆ ಹೊಸ ರೋಗಿಗಳು ಬರುತ್ತಿದ್ದಾರೆ. ಅವರ ಅಗತ್ಯಗಳನ್ನು ಪೂರೈಸಲು ಮತ್ತು ಅವರಿಗೆ ಚಿಕಿತ್ಸೆ ನೀಡಲು ಅಸಾಧ್ಯವಾಗಿದೆ, ಎಂದು ಡಬ್ಲ್ಯುಹೆಚ್‌ಒ ಹೇಳಿದೆ.

ಗಾಯಗೊಂಡವರಿಗೆ ನೆಲದ ಮೇಲೆ ಮಲಗಿಸಿ ಹೊಲಿಗೆ ಹಾಕಲಾಗುತ್ತಿದೆ. ಆಸ್ಪತ್ರೆಯಲ್ಲಿ ಯಾವುದೇ ನೋವು ನಿವಾರಕ ಅನಸ್ತೇಶಿಯ ಸೌಲಭ್ಯವಿಲ್ಲ. ಅಲ್-ಶಿಫಾ ಆಸ್ಪತ್ರೆಯನ್ನು ಮೊದಲಿನಂತೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಏಕೆಂದರೆ, ಇದು ಗಾಝಾ ಅತಿದೊಡ್ಡ ಆಸ್ಪತ್ರೆ ಎಂದು ಡಬ್ಲ್ಯುಹೆಚ್‌ಒ ತಿಳಿಸಿದೆ.

ಅಲ್‌ ಶಿಫಾ ಆಸ್ಪತ್ರೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಡಬ್ಲ್ಯುಹೆಚ್‌ಒನ ಆದ್ಯತೆ. ಗಾಜಾ ಪಟ್ಟಿಯ ಸಂಪೂರ್ಣ ಉತ್ತರದಲ್ಲಿ, ಅಲ್-ಅಹ್ಲಿ ಅರಬ್ ಆಸ್ಪತ್ರೆ ಮಾತ್ರ ಭಾಗಶಃ ಕಾರ್ಯನಿರ್ವಹಿಸುತ್ತಿದೆ. ಅಲ್-ಶಿಫಾ, ಅಲ್ ಅವ್ದಾ ಮತ್ತು ಅಲ್ ಸಹಬಾ ವೈದ್ಯಕೀಯ ಸಂಕೀರ್ಣಗಳು ಕನಿಷ್ಠ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಎಎಫ್‌ಪಿ ವರದಿ ಮಾಡಿದೆ.

ಅಲ್-ಶಿಫಾದಲ್ಲಿ, ನಿಯಮಿತ ವೈದ್ಯಕೀಯ ಸರಬರಾಜು ಒದಗಿಸಿದರೆ 20 ಆಪರೇಷನ್ ಥಿಯೇಟರ್‌ಗಳನ್ನು ಸಕ್ರಿಯಗೊಳಿಸಬಹುದು. ಹಾಗೆಯೇ ಶಸ್ತ್ರಚಿಕಿತ್ಸಾ ನಂತರದ ಆರೈಕೆ ಸೇವೆಗಳು, ಇಂಧನ, ಆಮ್ಲಜನಕ, ಔಷಧಿಗಳು, ಆಹಾರ ಮತ್ತು ನೀರಿನ ನಿಯಮಿತ ಪೂರೈಕೆಗಳನ್ನು ಒದಗಿಸಬೇಕಿದೆ.

ಈ ನಡುವೆ, ಪಶ್ಚಿಮ ದಂಡೆಯ ತುಲ್ಕರ್ಮ್ ಮೇಲೆ ಇಸ್ರೇಲ್ ಸೇನೆ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಮಂದಿ ಪ್ಯಾಲೆಸ್ತೀನಿಯರು ಭಾನುವಾರ ಕೊಲ್ಲಲ್ಪಟ್ಟರು ಎಂದು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ಯುದ್ಧ ಇನ್ನಿಬ್ಬರು ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದು, ಸೈನಿಕರ ಸಾವಿನ ಸಂಖ್ಯೆ 121 ಕ್ಕೆ ಏರಿದೆ. ‘ಸಂಪೂರ್ಣ ಗೆಲುವು’ ಸಿಗುವವರೆಗೆ ಇಸ್ರೇಲ್ ಯುದ್ಧ ನಡೆಸಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ತೀವ್ರಗೊಳ್ಳುತ್ತಿರುವ ದಾಳಿಗಳ ಮಧ್ಯೆ, ಫ್ರಾನ್ಸ್ ತುರ್ತು ಕದನ ವಿರಾಮಕ್ಕೆ ಕರೆ ನೀಡಿದೆ. ಫ್ರಾನ್ಸ್‌ನ ವಿದೇಶಾಂಗ ಮಂತ್ರಿ ಕ್ಯಾಥರೀನ್ ಕೊಲೊನ್ನಾ ಇಸ್ರೇಲ್‌ಗೆ ಆಗಮಿಸಿದ್ದು, ಕದನ ವಿರಾಮ ಆಗ್ರಹಿಸಿದ್ದಾರೆ. ನಾಗರಿಕರು ಕೊಲ್ಲಲ್ಪಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯುದ್ಧ ಸೃಷ್ಟಿಸಿದ ಅವಾಂತರ: ಗಾಝಾ ರೋಗಕ್ಕೆ ಫಲವತ್ತತೆಯ ನೆಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...